Advertisement
MIRROR FOCUS

ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ | ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ

Share

ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign) ಕಾರ್ಯ ನಡೆಯುತ್ತಿದೆ. ಬಿಜೆಪಿಯ(BJP) ಸ್ಟಾರ್‌ ಪ್ರಚಾರಕ(Star campaigner) ಹಾಗೂ ಪ್ರಧಾನಿ ಅಭ್ಯರ್ಥಿ ಪ್ರಧಾನಿ ನರೇಂದ್ರ ಮೋದಿ ಉತ್ತರ ಕರ್ನಾಟಕದಲ್ಲಿ ಪ್ರಚಾರ ಗೈಗೊಂಡಿದ್ದಾರೆ. ಬಿರು ಬಿಸಿಲಿನ ಮಧ್ಯೆಯೂ ಪ್ರಚಾರ ಕಾರ್ಯ ಬಿರುಸಿನಿಂದ ನಡೆಯುತ್ತಿದೆ. ಬಾಗಲಕೋಟೆಗೆ(Bagalakote) ಪ್ರಚಾರ ಕಾರ್ಯಕ್ಕಾಗಿ ಬಂದ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾರತ ವಿಶ್ವದ ಟಾಪ್ 3ನೇ ಸ್ಥಾನಕ್ಕೆ ಏರಲಿದ್ದು, ಅದನ್ನು ನಿಮ್ಮ ಮತ ಮಾಡಲಿದೆ. ಈ ಬಾರಿಯ ಲೋಕಸಭಾ ಚುನಾವಣೆ(Lok sabha Election) ಆತ್ಮನಿರ್ಭರದ್ದಾಗಿದ್ದು, ಭಾರತದ(India) ಭವಿಷ್ಯವನ್ನು ನಿರ್ಧಾರ ಮಾಡಲಿದೆ ಎಂದು  ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಭಾರತವನ್ನು ವಿಶ್ವದ ಟಾಪ್ 3 ಸ್ಥಾನಕ್ಕೆ ಮೋಜು, ಮಸ್ತಿಯಲ್ಲಿ ಕಾಲ ಕಳೆಯುವವರು ಏರಿಸುವುದಿಲ್ಲ. ಒಂದು ಸಂಕಲ್ಪ ಮಾಡಿಕೊಂಡು 24*7 ಕೆಲಸ ಮಾಡಿದರೆ ಇದು ಸಾಧ್ಯವಾಗಲಿದೆ. ಈ ವಿಚಾರದಲ್ಲಿ ಮೋದಿಯ ಗಮನ ಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ. ಸರ್ಕಾರದಲ್ಲಿ ಇದ್ದುಕೊಂಡು ದೇಶವನ್ನು ಕೊಳ್ಳೆ ಹೊಡೆಯುವವರಿಗೆ ನೀವು ಅಧಿಕಾರ ಕೊಡ್ತಿರಾ? ಈ ಕಾಂಗ್ರೆಸ್‍ನ (Congress) ಇತಿಹಾಸ ದೇಶವನ್ನು ಲೂಟಿ ಹೊಡೆಯುವುದೇ ಆಗಿದೆ. ಇಂತಹ ಲೂಟಿಕೋರರ ಕೈಯಲ್ಲಿ ದೇಶವನ್ನ ಕೊಡುತ್ತೀರಾ? ಕಾಂಗ್ರೆಸ್ ಕರ್ನಾಟಕವನ್ನು ಲೂಟಿಯ ಎಟಿಎಂ ಆಗಿ ಮಾಡಿಕೊಂಡಿದ್ದಾರೆ. ಅಧಿಕಾರ ಪಡೆದು ಇಷ್ಟು ಕಡಿಮೆ ಸಮಯದಲ್ಲೇ ಖಜಾನೆ ಲೂಟಿ ಹೊಡದಿದ್ದಾರೆ. ಇಲ್ಲಿನ ಸರ್ಕಾರಿ ನೌಕರರಿಗೆ ಸಂಬಳ ಕೂಡಲಾಗುತ್ತಿಲ್ಲ. ಜನರ ಹಿತಕ್ಕಾಗಿ ಒಂದು ಯೋಜನೆ ಇಲ್ಲ. ಕಾಂಗ್ರೆಸ್ ಬಂದ್ರೆ ದೇಶ ಹಾಳಾಗುತ್ತದೆ ಎಂದು ಇತಿಹಾಸ ಹೇಳುತ್ತದೆ ಎಂದು ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದಲ್ಲಿ ನಮ್ಮ ಸರ್ಕಾರ, ರೇಲ್ವೆ ನಿಲ್ದಾಣ ಮಾಡುತ್ತಿದೆ. ವಿಜಯಪುರದಲ್ಲಿ ವಿಮಾನ ನಿಲ್ದಾಣ ಮಾಡಲಾಗುತ್ತಿದೆ. ಹಿಂದಿನ 10 ವರ್ಷದಲ್ಲಿ ಮೋದಿ ಸರ್ಕಾರ ಬಡ ಜನರ ಪರ ಯೋಚಿಸಿದೆ. ಕಾಂಗ್ರೆಸ್‍ನವರು ಒಂದು ಕ್ಷಣದಲ್ಲಿ ಬಡತನ ನಿರ್ಮೂಲನೆ ಮಾಡುತ್ತೇವೆ ಅಂತಾರೆ, 70 ವರ್ಷದಿಂದ ಆಗದದ್ದನ್ನು ಈಗೇನು ಮಾಡ್ತೀರಾ ಎಂದು ಅವರು ಪ್ರಶ್ನಿಸಿದ್ದಾರೆ. ನಾನು ಪ್ರಧಾನಿ ಆಗುವ ಮೊದಲು 18 ಸಾವಿರ ಗ್ರಾಮಗಳ ಜನರು ಕಗ್ಗತ್ತಲಲ್ಲಿ ಜೀವಿಸುತ್ತಿದ್ದರು. ನನಗೆ ಅವಕಾಶ ಕೊಟ್ಟ ನಂತರ ಎಲ್ಲೆಡೆ ವಿದ್ಯುತ್ ಕೊಟ್ಟೆವು, ದೇಶದಲ್ಲಿ ಒಂದೇ ಒಂದು ವಿದ್ಯುತ್ ಇಲ್ಲದ ಗ್ರಾಮವಿಲ್ಲ. 75%ನಷ್ಟು ಜನರಿಗೆ ನೀರು ಕೊಡಲಾಗಿದೆ. ಈ ಮೊದಲು ಕಾಂಗ್ರೆಸ್ ಮಾಡಬಹುದಿತ್ತಲ್ಲಾ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಬಾಲಕಿ ಮೇಟಿ ರಚಿಸಿದ ಮೋದಿ ಹಾಗೂ ಅವರ ತಾಯಿಯ ಭಾವಚಿತ್ರವನ್ನು ಪ್ರಧಾನಿಗೆ ಉಡುಗೊರೆಯಾಗಿ ನೀಡಲಾಯಿತು. ಇದಕ್ಕೆ ಪ್ರತಿಯಾಗಿ, ಮಗಳೇ ನಿನಗೆ ಪತ್ರ ಬರೆಯುತ್ತೇನೆ ಎಂದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

8 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

14 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

22 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago