ರಾಜ್ಯದಲ್ಲಿ 18500 ಕ್ಕೂ ಅಧಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗಳ ಸಿದ್ಧತೆ ನಡೆಯುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸರಕಾರಿ ಶಾಲೆಗಳಿಗೆ 13 ಸಾವಿರ ಶಿಕ್ಷಕರು ಹಾಗೂ ಅನುದಾನಿತ ಶಾಲೆಗಳಿಗೆ ಸುಮಾರು 5800 ಶಿಕ್ಷಕರ ನೇಮಕವಾಗಲಿದೆ. ಜಸ್ಟಿಸ್ ನಾಗಮೋಹನ್ ದಾಸ್ ವರದಿಯ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಸ್ವಲ್ಪ ವಿಳಂಬವಾಗಿತ್ತು ಎಂದು ಹೇಳಿದ್ದಾರೆ. ಮೂರು ಹಂತದ ಪರೀಕ್ಷಾ ಪದ್ಧತಿಯೂ ಮಕ್ಕಳ ಫಲಿತಾಂಶವನ್ನು ಉತ್ತಮ ಪಡಿಸಲು ಸಹಕಾರಿಯಾಗಿದೆ. ಈ ಪರೀಕ್ಷಾ ವ್ಯವಸ್ಥೆಯಿಂದ 2 ನೆ ಸ್ತರ ಹಾಗೂ 3 ನೆ ಸ್ತರದ ಎಸೆಸೆಲ್ಸಿ ಪರೀಕ್ಷೆಯಲ್ಲಿ 11600 ಮಕ್ಕಳು ಉತ್ತೀಣರಾಗಿದ್ದು, ಪಿಯುಸಿಯಲ್ಲಿಯೂ 56 ಸಾವಿರಕ್ಕೂ ಅಧಿಕ ಮಕ್ಕಳು ಉತ್ತೀಣರಾಗಿದ್ದಾರೆ ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…