ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಪ್ರಸಕ್ತ ಸಾಲಿನ ಕೃಷಿ ಇಲಾಖಾ ಯೋಜನೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಮಾಯಕೊಂಡ, ಜಗಳೂರು, ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಮೆಕ್ಕೆಜೋಳ ಬೆಳೆಗೆ ಯೂರಿಯಾವನ್ನು ಮೇಲುಗೊಬ್ಬರವಾಗಿ ಬಳಕೆ ಮಾಡುತ್ತಿದ್ದು ಮುಂದಿನ 15 ದಿನಗಳಲ್ಲಿ ಇದು ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ. ರೈತರು ಯೂರಿಯಾ ಗೊಬ್ಬರವನ್ನು ಹೆಚ್ಚು ಬಳಸದೆ ನ್ಯಾನೋ ಯೂರಿಯಾ ಬಳಕೆಗೆ ಮುಂದಾಗಬೇಕು. ನ್ಯಾನೋ ಯೂರಿಯಾ ಬಳಕೆ ಹರಳು ರೂಪದ ಯೂರಿಯಾಕ್ಕಿಂತಲೂ ಹೆಚ್ಚು ಗುಣಮಟ್ಟ, ಸಮೃದ್ಧತೆ ಹೊಂದಿದೆ ಎಂದು ಮಾಹಿತಿ ನೀಡಿದ್ದಾರೆ.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…