ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಪ್ರಸಕ್ತ ಸಾಲಿನ ಕೃಷಿ ಇಲಾಖಾ ಯೋಜನೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಮಾಯಕೊಂಡ, ಜಗಳೂರು, ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಮೆಕ್ಕೆಜೋಳ ಬೆಳೆಗೆ ಯೂರಿಯಾವನ್ನು ಮೇಲುಗೊಬ್ಬರವಾಗಿ ಬಳಕೆ ಮಾಡುತ್ತಿದ್ದು ಮುಂದಿನ 15 ದಿನಗಳಲ್ಲಿ ಇದು ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ. ರೈತರು ಯೂರಿಯಾ ಗೊಬ್ಬರವನ್ನು ಹೆಚ್ಚು ಬಳಸದೆ ನ್ಯಾನೋ ಯೂರಿಯಾ ಬಳಕೆಗೆ ಮುಂದಾಗಬೇಕು. ನ್ಯಾನೋ ಯೂರಿಯಾ ಬಳಕೆ ಹರಳು ರೂಪದ ಯೂರಿಯಾಕ್ಕಿಂತಲೂ ಹೆಚ್ಚು ಗುಣಮಟ್ಟ, ಸಮೃದ್ಧತೆ ಹೊಂದಿದೆ ಎಂದು ಮಾಹಿತಿ ನೀಡಿದ್ದಾರೆ.
ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಒಂದು ವಾರದಲ್ಲಿ ಪುನರಾರಂಭಿಸಲು ಉಪಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಪ್ರಮುಖ…
ಕೆಆರ್ಎಸ್ ಅಣೆಕಟ್ಟಿನ ನೀರಿನ ಮಟ್ಟ ಕೇವಲ 15 ದಿನಗಳಲ್ಲಿ 8 ಅಡಿ ಕುಸಿದಿದೆ.…
ತುಮಕೂರಿನಲ್ಲಿ ನವಿಲುಗಳಲ್ಲಿ H5N1 ಸೋಂಕು ದೃಢಪಟ್ಟಿದ್ದು, ನಾಲ್ಕು ಗ್ರಾಮಗಳನ್ನು ಕಂಟೋನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ.…
ಯಾದಗಿರಿ ಜಿಲ್ಲೆಯ 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.…
ಗುರುವಾಯನಕೆರೆ–ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ…
ಹೊಳೆಹೊನ್ನೂರಿನಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣದಲ್ಲಿ 350 ಚೀಲ ಅಡಿಕೆ ಮತ್ತು ಲಾರಿಯನ್ನು…