ಗೇರು ಹಣ್ಣು ಸೇವನೆಯಿಂದ ಪೌಷ್ಠಿಕಾಂಶದ ಕೊರತೆ ನಿವಾರಣೆ

March 27, 2025
10:57 AM
ಗೇರು ಹಣ್ಣು ಸೇವನೆಯಿಂದ ಪೌಷ್ಠಿಕಾಂಶದ ಕೊರತೆ ನಿವಾರಿಸಬಹುದಾಗಿದೆ.ಗೇರು ಕೃಷಿಯಿಂದ ರೈತರು ಆರ್ಥಿಕ ಲಾಭ ಪಡೆಯುವುದರ ಜೊತೆಗೆ , ಗೇರು ಹಣ್ಣು ಸೇವನೆಯಿಂದ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದಾಗಿದೆ.

ಗೇರು ಹಣ್ಣು ಸೇವನೆಯಿಂದ ಪೌಷ್ಠಿಕಾಂಶದ ಕೊರತೆ ನಿವಾರಿಸಬಹುದಾಗಿದೆ. ವಿಶ್ವವಿದ್ಯಾಲಯ ಗೇರು ಕೃಷಿಗೆ ಹೆಚ್ಚಿನ ಉತ್ತೇಜನ ನೀಡುವ ಜೊತೆಗೆ ಗೇರು ಹಣ್ಣಿನ ಮೌಲ್ಯವರ್ಧನೆ ಕುರಿತು ರೈತರಿಗೆ ಮಾಹಿತಿ ನೀಡುತ್ತಿದೆ ಎಂದು ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ.ಆರ್.ಸಿ ಜಗದೀಶ್ ಹೇಳಿದರು.

ಅವರು ಮಂಗಳೂರಿನ ಉಳ್ಳಾಲದ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಮತ್ತು ವಿವಿಧ ಇಲಾಖೆಗಳ ಸಹಯೋಗದಿಂದ ಆಯೋಜಿಸಿದ್ದ ಕೃಷಿ ಮೇಳ ಮತ್ತು ಗೇರು ವಿಚಾರ ಸಂಕಿರಣದಲ್ಲಿ ಮಾತನಾಡಿದರು.  ಗೇರು ಕೃಷಿಯಿಂದ ರೈತರು ಆರ್ಥಿಕ ಲಾಭ ಪಡೆಯುವುದರ ಜೊತೆಗೆ , ಗೇರು ಹಣ್ಣು ಸೇವನೆಯಿಂದ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದಾಗಿದೆ ಎಂದರು.

ಕೃಷಿ ಮೇಳ ಮತ್ತು ಗೇರು ವಿಚಾರ ಸಂಕಿರಣ ಕಾರ್ಯಕ್ರಮಕ್ಕೆ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್  ಚಾಲನೆ ನೀಡಿ, ಕೃತಿಯ ಜೊತೆಗಿನ ಒಡನಾಟದಿಂದ  ಮನುಷ್ಯರು  ದೂರಾಗುತ್ತಿರುವ ಕಾರಣ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ಉತ್ತಮ ಆರೋಗ್ಯಕ್ಕಾಗಿ ಮನುಷ್ಯ ಪ್ರಕೃತಿಗೆ ಹತ್ತಿರವಾಗಬೇಕಿದೆ.ಗೇರು ಕೃಷಿಯ ಮಹತ್ವವನ್ನು ಎಲ್ಲರೂ ಅರಿಯಬೇಕಿದ್ದು, ಗೇರು ಕೃಷಿಗೆ ಉತ್ತಮ ಮಾರುಕಟ್ಟೆ ಪರಿಚಯಿಸುವಲ್ಲಿ ಮೇಳಗಳು ಸಹಕಾರಿಯಾಗಲಿವೆ ಎಂದು ಹೇಳಿದರು.

ಕೃಷಿಯಲ್ಲಿ ಸಾಧನೆ ಮಾಡಿರುವ ಪ್ರಗತಿಪರ ರೈತರನ್ನು ಸನ್ಮಾನಿಸಿ, ಗೇರು ಕೃಷಿ ಕೈಪಿಡಿ ಬಿಡುಗಡೆಗೊಳಿಸಲಾಯಿತು.  ಈ ಸಂದರ್ಭದಲ್ಲಿ ಕೆಳದಿ ಶಿವಪ್ಪ ನಾಯಕ, ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ.ಆರ್.ಸಿ ಜಗದೀಶ್, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror