ಗೇರು ಹಣ್ಣು ಸೇವನೆಯಿಂದ ಪೌಷ್ಠಿಕಾಂಶದ ಕೊರತೆ ನಿವಾರಿಸಬಹುದಾಗಿದೆ. ವಿಶ್ವವಿದ್ಯಾಲಯ ಗೇರು ಕೃಷಿಗೆ ಹೆಚ್ಚಿನ ಉತ್ತೇಜನ ನೀಡುವ ಜೊತೆಗೆ ಗೇರು ಹಣ್ಣಿನ ಮೌಲ್ಯವರ್ಧನೆ ಕುರಿತು ರೈತರಿಗೆ ಮಾಹಿತಿ ನೀಡುತ್ತಿದೆ ಎಂದು ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ.ಆರ್.ಸಿ ಜಗದೀಶ್ ಹೇಳಿದರು.
ಅವರು ಮಂಗಳೂರಿನ ಉಳ್ಳಾಲದ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಮತ್ತು ವಿವಿಧ ಇಲಾಖೆಗಳ ಸಹಯೋಗದಿಂದ ಆಯೋಜಿಸಿದ್ದ ಕೃಷಿ ಮೇಳ ಮತ್ತು ಗೇರು ವಿಚಾರ ಸಂಕಿರಣದಲ್ಲಿ ಮಾತನಾಡಿದರು. ಗೇರು ಕೃಷಿಯಿಂದ ರೈತರು ಆರ್ಥಿಕ ಲಾಭ ಪಡೆಯುವುದರ ಜೊತೆಗೆ , ಗೇರು ಹಣ್ಣು ಸೇವನೆಯಿಂದ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದಾಗಿದೆ ಎಂದರು.
ಕೃಷಿ ಮೇಳ ಮತ್ತು ಗೇರು ವಿಚಾರ ಸಂಕಿರಣ ಕಾರ್ಯಕ್ರಮಕ್ಕೆ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಚಾಲನೆ ನೀಡಿ, ಕೃತಿಯ ಜೊತೆಗಿನ ಒಡನಾಟದಿಂದ ಮನುಷ್ಯರು ದೂರಾಗುತ್ತಿರುವ ಕಾರಣ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ಉತ್ತಮ ಆರೋಗ್ಯಕ್ಕಾಗಿ ಮನುಷ್ಯ ಪ್ರಕೃತಿಗೆ ಹತ್ತಿರವಾಗಬೇಕಿದೆ.ಗೇರು ಕೃಷಿಯ ಮಹತ್ವವನ್ನು ಎಲ್ಲರೂ ಅರಿಯಬೇಕಿದ್ದು, ಗೇರು ಕೃಷಿಗೆ ಉತ್ತಮ ಮಾರುಕಟ್ಟೆ ಪರಿಚಯಿಸುವಲ್ಲಿ ಮೇಳಗಳು ಸಹಕಾರಿಯಾಗಲಿವೆ ಎಂದು ಹೇಳಿದರು.
ಕೃಷಿಯಲ್ಲಿ ಸಾಧನೆ ಮಾಡಿರುವ ಪ್ರಗತಿಪರ ರೈತರನ್ನು ಸನ್ಮಾನಿಸಿ, ಗೇರು ಕೃಷಿ ಕೈಪಿಡಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಕೆಳದಿ ಶಿವಪ್ಪ ನಾಯಕ, ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ.ಆರ್.ಸಿ ಜಗದೀಶ್, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…