ರಾಜ್ಯದಲ್ಲೂ ಬೆಲೆ ಏರಿಕೆಯ ಪರ್ವ | ರಾಜ್ಯದ ಜನತೆಗೆ ಮತ್ತೆ ಕರೆಂಟ್ ಶಾಕ್ | ವಿದ್ಯುತ್ ದರ ಏರಿಕೆಗೆ ಕೆಇಆರ್‌ಸಿ ಚಿಂತನೆ

January 5, 2024
2:23 PM

ರಾಜ್ಯದಲ್ಲಿ ವಿದ್ಯುತ್‌(Electricity), ನೀರು(Water), ಪದವಿ ಶಿಕ್ಷಣ(Graduation Fee), ಮದ್ಯದ ಬೆಲೆ(Alcohol) ಹೀಗೆ ಎಲ್ಲಿ ಎಲ್ಲಾ ಸಾಧ್ಯವೋ ಅಲ್ಲೆಲ್ಲಾ ಬೆಲೆ ಏರಿಕೆಯ ಬಿಸಿ ತಟ್ಟಲು ಆರಂಭವಾಗಿದೆ.ಇದೀಗ ವಿದ್ಯುತ್ ದರ ಏರಿಕೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ(KERC) ಚಿಂತನೆ ನಡೆಸಿದೆ. ಪ್ರತಿ ಯೂನಿಟ್‍ಗೆ 50-60 ಪೈಸೆ ಏರಿಕೆಗೆ ಎಸ್ಕಾಂಗಳು ಕೆಇಆರ್‌ಸಿ ಮುಂದೆ ಪ್ರಸ್ತಾವನೆ ಇಟ್ಟಿವೆ. ಇದರಿಂದ ಈ ವರ್ಷ ಏಪ್ರಿಲ್ ತಿಂಗಳಲ್ಲಿ ವಿದ್ಯುತ್ ಬೆಲೆ ಏರಿಕೆಯಾಗುವ (Electricity Rate Hike) ಸಾಧ್ಯತೆ ಇದೆ.

ಯೂನಿಟ್‍ಗೆ 49 ಪೈಸೆ ಏರಿಕೆ ಮಾಡುವಂತೆ ಡಿಸೆಂಬರ್ ಕೊನೆಯ ವಾರದಲ್ಲಿ ಬೆಸ್ಕಾಂ (BESCOM) ಪ್ರಸ್ತಾವನೆ ಸಲ್ಲಿಸಿತ್ತು. ಪ್ರಸ್ತಾವನೆಯಂತೆ ಉತ್ಪಾದನೆಯ ಖರ್ಚು-ವೆಚ್ಚ ಮತ್ತು ನಿರ್ವಹಣೆಯ ನಷ್ಟ ಸರಿದೂಗಿಸುವ ನಿಟ್ಟಿನಲ್ಲಿ ದರ ಏರಿಕೆಗೆ ಕೆಇಆರ್‌ಸಿ ಮುಂದಾಗಿದೆ. ಗೃಹಜ್ಯೋತಿ ಯೋಜನೆ ಮೂಲಕ ಇಡೀ ರಾಜ್ಯದಾದ್ಯಂತ ಉಚಿತ ವಿದ್ಯತ್‌ ನೀಡುತ್ತಿರುವ ಸರ್ಕಾರಕ್ಕೆ ನಷ್ಟದ ಬಿಸಿಯನ್ನು ತಡೆದುಕೊಳ್ಳಲು ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇದೀಗಗ ಈ ನಿರ್ಧಾರಕ್ಕೆ ಬಂದಿದೆ. ಇದು ಮತ್ತೆ ಜನಸಾಮಾನ್ಯರ ಮೇಲೆಯೇ ಬರೆ ಎಳೆದಂತಾಗುತ್ತದೆ.

ಸದ್ಯ ಪ್ರಸ್ತಾವನೆ ಪರಿಶೀಲಿಸಲಿರುವ ಆಯೋಗ, ಗ್ರಾಹಕ ಮತ್ತು ಬೆಸ್ಕಾಂ ಇಬ್ಬರಿಗೂ ಹೊರೆಯಾಗದಂತೆ ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಜಾರಿ ಮಾಡುವ ಸಾಧ್ಯತೆಯಿದೆ. ಬೆಸ್ಕಾಂ ಮಾತ್ರವಲ್ಲದೇ ಉಳಿದ ನಾಲ್ಕು ಎಸ್ಕಾಂಗಳಿಂದಲೂ ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ನಾಲ್ಕು ಎಸ್ಕಾಂಗಳಿಂದ 50-60 ಪೈಸೆ ದರ ಪರಿಷ್ಕರಣೆಗೆ ಪ್ರಸ್ತಾಪ ಸಲ್ಲಿಕೆಯಾಗಿದೆ. ಎಲ್ಲಾ ಪರಿಷ್ಕೃತ ದರಗಳು ಏಪ್ರಿಲ್ 1 ರಿಂದಲೇ ಜಾರಿಯಾಗುವ ಸಾಧ್ಯತೆ ಇದ್ದು, ರಾಜ್ಯದ ಜನರಿಗೆ ವಿದ್ಯುತ್ ದರದ ಬಿಸಿ ತಟ್ಟಲಿದೆ.

– ಅಂತರ್ಜಾಲ ಮಾಹಿತಿ

The Karnataka Electricity Regulatory Commission (KERC) has contemplated the hike in electricity rates. The Eskoms have put a proposal before KERC for an increase of 50-60 paise per unit. Due to this, there is a possibility of electricity rate hike in the month of April this year. In the last week of December, BESCOM had submitted a proposal to increase the rate by 49 paise per unit. As per the proposal, KERC has proposed to increase the rates to cover the cost of production and maintenance losses.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror