Advertisement
ಪ್ರಮುಖ

#PriceHike | ಬೇಳೆ ಕಾಳು,ಟೋಮ್ಯಾಟೋ, ತರಕಾರಿ ಬೆನ್ನಲ್ಲೇ ಮೀನುಗಳ ಬೆಲೆ ಏರಿಕೆ | ಅಡಕತ್ತರಿಯಲ್ಲಿ ಗ್ರಾಹಕರ ಜೀವನ

Share

ಮನುಷ್ಯನಾಗಿ ಹುಟ್ಟಿದ ಮೇಲೆ ಏನಾದ್ರು ತಿಂದು ಬದುಕಲೇ ಬೇಕು. ಆದರೆ ಈಗಿನ ಪರಿಸ್ಥಿತಿಯಲ್ಲಿ ಯಾವುದನ್ನು ತಿನ್ನುವುದು ಅನ್ನೋದೇ ದೊಡ್ಡ ತಲೆ ನೋವಾಗಿದೆ. ಯಾವುದನ್ನು ಮುಟ್ಟುವಂಗಿಲ್ಲ. ಬೆಲೆ ಗಗನಕ್ಕೇರಿ ಕುಳಿತಿದೆ. ಹಣ್ಣು, ತರಕಾರಿ, ಬೇಳೆಕಾಳು.. ಈಗ ಮೀನು ಬೆಲೆಯೂ ಏರಿಕೆ ಕಂಡಿದೆ.

ತರಕಾರಿ ಬೆಲೆ#Vegetable Price ಹೆಚ್ಚಳ ಆಗಿದ್ದು, ಜನರ ಜೇಬು ಸುಡುತ್ತಿದೆ. ಅದರಲ್ಲಿಯೂ ಟೊಮೆಟೊಗಳು#Tomato ನೋಡಲು ಮಾತ್ರ ಸುಂದರವಾಗಿ ಕಾಣುತ್ತಿವೆ. ಖರೀದಿ ಮಾಡಲು ಹೋದಾಗ ಕೆಂಡದಂತೆ ಸುಡುತ್ತಿವೆ. ಇದೀಗ ಮೀನು#Fish ಗಳ ಬೆಲೆ#Price ಸಹ ಏರಿಕೆಯಾಗಿದೆ. ಕಳೆದ ತಿಂಗಳಿಗೆ ಹೋಲಿಕೆ ಮಾಡಿದ್ರೆ ಶೇ.30-40 ರಷ್ಟು ಬೆಲೆ ಏರಿಕೆ ಕಂಡಿದೆ ಎಂದು ಮಾರಾಟಗಾರರು ಹೇಳುತ್ತಾರೆ. ಜೂನ್ ನಿಂದ ಆಗಸ್ಟ್ ತಿಂಗಳಲ್ಲಿ ಮೀನುಗಳು ಮರಿ ಸಮಯವಾಗಿರುತ್ತೆ. ಈ ಅವಧಿಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ನಿಷೇಧ ಹಾಕಲಾಗಿರುತ್ತದೆ.

ಈ ಮೂರು ತಿಂಗಳಿನಲ್ಲಿ ಫೂರೈಕೆಯ ಪ್ರಮಾಣವು ಕಡಿಮೆ ಇದೆ. ಆದ್ರೆ ಬೇಡಿಕೆಯ ಪ್ರಮಾಣ ಶೇ.30ಕ್ಕಿಂತ ಹೆಚ್ಚಿದೆ. ಈ ಹಿನ್ನೆಲೆ ಮೀನು ಬೆಲೆ ಏರಿಕೆಯಾಗಿದೆ. ರಾಜ್ಯಕ್ಕೆ ಹೊರ ರಾಜ್ಯಗಳಿಂದ‌ ಮೀನು ರಫ್ತು ಬರಬೇಕಿದೆ. ಸದ್ಯ ಒರಿಸ್ಸಾ, ವಿಶಾಖಪಟ್ಟಣಂ, ನಾಗಪಟ್ಟಣಂ, ಕನ್ಯಾಕುಮಾರಿ, ಕೇರಳ ಭಾಗದಿಂದ ಮೀನು ಬರುತ್ತಿದೆ. ಈ ಹಿಂದೆ ಮಂಗಳೂರು, ಮಲ್ಪೆ, ಕಾರವಾರ, ದಂಗೊಡ್ಡಿ, ಭಟ್ಕಳ ಭಾಗದಿಂದ ಬರುತ್ತಿತ್ತು. ಮೀನುಗಾರಿಕೆಗೆ ನಿರ್ಬಂಧ ಹಿನ್ನೆಲೆ ಹೊರ ರಾಜ್ಯಗಳಿಂದ ಮೀನು ತರಿಸಿಕೊಳ್ಳಲಾಗುತ್ತಿದೆ.

ಯಾವ್ಯವ ಫಿಶ್ ಎಷ್ಟೆಷ್ಟು ದರ? 

ಮೀನಿನ ತಳಿಗಳು ಇಂದಿನ ದರ (ಕೆಜಿ- ರೂ.ಗಳಲ್ಲಿ) ಹಳೆಯ ದರ (ಕೆಜಿ- ರೂ.ಗಳಲ್ಲಿ)
ಬಂಗುಡೆ 350 120
ಬೂತಾಯಿ 250 140
ಕಪ್ಪು ಮಾಂಜಿ 1000 600
ಬಿಳಿ ಮಾಂಜಿ 1020 600
ಮದಿಮಾಲ್ 570 250
ಕೊಡ್ಡಾಯಿ 450 250
ಕಾಣಿ 600 400
ಇಂಡಿಯನ್ ಸಾಲ್ಮನ್ 910 650
ಸೀ ಪ್ರಾನ್ಸ್​ 650 500
ಟ್ಯೂನಾ 380 250
ಕ್ರಾಬ್ 450 300
ಸಿಲ್ವರ್ ಫಿಶ್ 250 180
ಕೆರೆ ಮೀನು 200 180
ಬರಗುಡ 450 300

ಹೋಟೆಲ್ ಊಟ ತಿಂಡಿ ದುಬಾರಿ – ಟೊಮೆಟೊ ರೇಟ್‌‌ ಕೇಜಿಗೆ 100ರಿಂದ 120ರ ಗಡಿ ದಾಟಿದೆ. ಹೀಗಾಗಿ ಬೆಂಗಳೂರಲ್ಲಿ ಹೋಟೆಲ್ ಊಟ-ತಿಂಡಿ ದರ ಕೂಡ ದುಬಾರಿ ಆಗ್ತಿದೆ. ಊಟ ತಿಂಡಿ ದರ ಶೇಕಡಾ 10ರಷ್ಟು ಏರಿಸಲು ಹೋಟೆಲ್ ಮಾಲೀಕರ ಸಂಘ ನಿರ್ಧರಿಸಿದೆ. ಟೊಮೆಟೊ ಬೆಲೆ ಇಳಿಕೆ ಆಗೋವರೆಗೂ ಹೋಟೆಲ್‌‌‌ಗಳಲ್ಲಿ ಟೊಮೆಟೊ ಬಾತ್ ಹಾಗೂ ಕೆಚೆಪ್ ಸ್ಥಗಿತಗೊಳಿಸಲಾಗಿದೆ. ಬೆಂಗಳೂರಿನ 24 ಸಾವಿರ ಹೋಟೆಲ್‌‌ಗಳಲ್ಲಿ ಬೆಲೆ ಏರಿಕೆ ಆಗಲಿದೆ.

ಟೊಮೆಟೊ ಬೆಳೆಗೆ ಕಾವಲು – ಟೊಮೆಟೊ ಬೆಲೆ ಹೆಚ್ಚಾಗಿರುವ ಕಾರಣ ಹಲವೆಡೆ ಟೊಮೆಟೊ ಕಳ್ಳತನ ಪ್ರಕರಣಗಳು ವರದಿ ಆಗ್ತಿವೆ. ಹೀಗಾಗಿ ಅಂಗಡಿ ಮಂಡಿಯಲ್ಲೂ ಟೊಮೆಟೊಗೆ ಭಾರೀ ಭದ್ರತೆ ಒದಗಿಸಲಾಗಿದೆ. ಕೋಲಾರದಲ್ಲಿ ಹಗಲು ರಾತ್ರಿ ಜಮೀನಿನಲ್ಲೇ ಟೆಂಟ್‌ ಹಾಕಿಕೊಂಡು ರೈತರು ಕಾವಲು ಕಾಯುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

4 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

5 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

5 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

13 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

17 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

17 hours ago