Advertisement
MIRROR FOCUS

#KSRTC | KSRTCಗೆ ಹೆಮ್ಮೆಯ ಗರಿ | ಏಷ್ಯಾದಲ್ಲೇ ಅತ್ಯುತ್ತಮ ಉದ್ಯೋಗದಾತ ಸಂಸ್ಥೆ ನಮ್ಮ KSRTC

Share

ಕರ್ನಾಟಕ ರಸ್ತೆ ಸಾರಿಗೆ ನಿಗಮ #KSRTC ಇದು ರಾಜ್ಯದ ಜೀವ ನಾಡಿ. ಪ್ರತಿ ದಿನ ಲಕ್ಷ ಲಕ್ಷ ಜನರನ್ನು ಒಂದೂರಿಂದ ಮತ್ತೊಂದು ಊರಿಗೆ ಕೊಂಡೊಯ್ಯುವ ಕೆಲಸವನ್ನು ಮಾಡುತ್ತದೆ. ಅದರಲ್ಲಿ ದುಡಿಯುವ ಉದ್ಯೋಗಿಗಳಂತು ಲಕ್ಷಗಟ್ಟಲೆ. ಅವರು ಅವರ ಜೀವನವನ್ನು ಕಟ್ಟಿಕೊಂಡು, ಇತರರ ಜೀವ ಕಾಪಾಡುವ ಜವಾಬ್ದಾರಿಯನ್ನು ಹೊಂಂದಿರುತ್ತಾರೆ. ಈವರ ಸೇವೆಯನ್ನು ಮನಗಂಡು ನಮ್ಮ ಹೆಮ್ಮೆಯ ಕೆಎಸ್ಸಾರ್ಟಿಸಿ 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಗೆ ಆಯ್ಕೆಯಾಗಿದೆ.

ಎಷ್ಟೋ ಜನ#KSRTC ಸೇವೆಯನ್ನು ನಂಬಿಕೊಂಡಿದ್ದಾರೆ. ದಿನ ನಿತ್ಯ ಸಾಕಷ್ಟು ಜನ ಓಡಾಡುತ್ತಾರೆ. ಇಂತಹ KSRTCಗೆ ಮತ್ತೊಂದು ಗರಿ ಲಭಿಸಿದೆ. ಹೌದು 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್‍  ಆಯ್ಕೆಯಾಗಿದೆ. ಶಕ್ತಿ ಯೋಜನೆ ಬಳಿಕ KSRTC ಎಲ್ಲೆಡೆ ಸದ್ದು ಮಾಡ್ತಿದೆ. ಉದ್ಯೋಗ ಕಲ್ಪಿಸುವ ಉತ್ತಮ ಬ್ರ್ಯಾಂಡ್ ಆಗಿಯೂ KSRTC ಗುರುತಿಸಿಕೊಂಡಿದೆ. KSRTCಯು 2023 ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿಗೆ ಆಯ್ಕೆಯಾಗಿರುವ ಬಗ್ಗೆ, ಕರ್ನಾಟಕ ರಾಜ್ಯ ಸಾರಿಗೆ ನಿಗಮ ಟ್ವೀಟ್ ಮಾಡಿದೆ.

 

 

‘KSRTC 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿಗೆ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಲ್ಲಿ ಆಯ್ಕೆಯಾಗಿರುತ್ತದೆ’. ಎಂದು ಟ್ವೀಟ್ ಮಾಡಿದೆ ಸಂಸ್ಥೆ. ಅಲ್ಲದೇ, ‘ಇಂದು 14ನೇ ಆವೃತ್ತಿಯ 18ನೇ ಉದ್ಯೋಗದಾತ ಬ್ರಾಂಡಿಂಗ್ ಪ್ರಶಸ್ತಿ ಪ್ರಕಟಿಸಲಾಗಿದ್ದು ನಿಗಮ ಈ ಪ್ರಶಸ್ತಿಗೆ ಆಯ್ಕೆಯಾಗಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವು ಆಗಸ್ಟ್ 17ರಂದು ಸಿಂಗಾಪೂರ್ ನಲ್ಲಿ ನಡೆಯಲಿದೆ.’ ಎಂದು ಟ್ವೀಟ್ ಮಾಡಿದೆ. KSRTC ಸಂಸ್ಥೆಯೂ ಕೋಟ್ಯಾಂತರ ಜನರಿಗೆ ಆಸರೆಯಾಗಿದೆ. ಅದೇ ರೀತಿ . ಉದ್ಯೋಗ ಕಲ್ಪಿಸುವ ಉತ್ತಮ ಬ್ರ್ಯಾಂಡ್ ಆಗಿಯೂ ಹೊರಹೊಮ್ಮಿದೆ. ಅದಕ್ಕೆ ಸಂಸ್ಥೆ ಖುಷಿಯಲ್ಲಿದೆ. KSRTC ಜನರಿಗೆ ಇದೇ ರೀತಿ ಸೇವೆ ಮುಂದುವರಿಸಲಿ. ಇನ್ನು ಹೆಚ್ಚು ಗುರುತಿಸಿಕೊಳ್ಳಲಿ ಎಂದು ಸಾರ್ವಜನಿಕರು ಹೇಳಿದ್ದಾರೆ. ವಿಶ್ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

2 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

3 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

12 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

16 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

1 day ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago