Advertisement
MIRROR FOCUS

#KSRTC | KSRTCಗೆ ಹೆಮ್ಮೆಯ ಗರಿ | ಏಷ್ಯಾದಲ್ಲೇ ಅತ್ಯುತ್ತಮ ಉದ್ಯೋಗದಾತ ಸಂಸ್ಥೆ ನಮ್ಮ KSRTC

Share

ಕರ್ನಾಟಕ ರಸ್ತೆ ಸಾರಿಗೆ ನಿಗಮ #KSRTC ಇದು ರಾಜ್ಯದ ಜೀವ ನಾಡಿ. ಪ್ರತಿ ದಿನ ಲಕ್ಷ ಲಕ್ಷ ಜನರನ್ನು ಒಂದೂರಿಂದ ಮತ್ತೊಂದು ಊರಿಗೆ ಕೊಂಡೊಯ್ಯುವ ಕೆಲಸವನ್ನು ಮಾಡುತ್ತದೆ. ಅದರಲ್ಲಿ ದುಡಿಯುವ ಉದ್ಯೋಗಿಗಳಂತು ಲಕ್ಷಗಟ್ಟಲೆ. ಅವರು ಅವರ ಜೀವನವನ್ನು ಕಟ್ಟಿಕೊಂಡು, ಇತರರ ಜೀವ ಕಾಪಾಡುವ ಜವಾಬ್ದಾರಿಯನ್ನು ಹೊಂಂದಿರುತ್ತಾರೆ. ಈವರ ಸೇವೆಯನ್ನು ಮನಗಂಡು ನಮ್ಮ ಹೆಮ್ಮೆಯ ಕೆಎಸ್ಸಾರ್ಟಿಸಿ 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಗೆ ಆಯ್ಕೆಯಾಗಿದೆ.

ಎಷ್ಟೋ ಜನ#KSRTC ಸೇವೆಯನ್ನು ನಂಬಿಕೊಂಡಿದ್ದಾರೆ. ದಿನ ನಿತ್ಯ ಸಾಕಷ್ಟು ಜನ ಓಡಾಡುತ್ತಾರೆ. ಇಂತಹ KSRTCಗೆ ಮತ್ತೊಂದು ಗರಿ ಲಭಿಸಿದೆ. ಹೌದು 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್‍  ಆಯ್ಕೆಯಾಗಿದೆ. ಶಕ್ತಿ ಯೋಜನೆ ಬಳಿಕ KSRTC ಎಲ್ಲೆಡೆ ಸದ್ದು ಮಾಡ್ತಿದೆ. ಉದ್ಯೋಗ ಕಲ್ಪಿಸುವ ಉತ್ತಮ ಬ್ರ್ಯಾಂಡ್ ಆಗಿಯೂ KSRTC ಗುರುತಿಸಿಕೊಂಡಿದೆ. KSRTCಯು 2023 ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿಗೆ ಆಯ್ಕೆಯಾಗಿರುವ ಬಗ್ಗೆ, ಕರ್ನಾಟಕ ರಾಜ್ಯ ಸಾರಿಗೆ ನಿಗಮ ಟ್ವೀಟ್ ಮಾಡಿದೆ.

 

 

‘KSRTC 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿಗೆ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಲ್ಲಿ ಆಯ್ಕೆಯಾಗಿರುತ್ತದೆ’. ಎಂದು ಟ್ವೀಟ್ ಮಾಡಿದೆ ಸಂಸ್ಥೆ. ಅಲ್ಲದೇ, ‘ಇಂದು 14ನೇ ಆವೃತ್ತಿಯ 18ನೇ ಉದ್ಯೋಗದಾತ ಬ್ರಾಂಡಿಂಗ್ ಪ್ರಶಸ್ತಿ ಪ್ರಕಟಿಸಲಾಗಿದ್ದು ನಿಗಮ ಈ ಪ್ರಶಸ್ತಿಗೆ ಆಯ್ಕೆಯಾಗಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವು ಆಗಸ್ಟ್ 17ರಂದು ಸಿಂಗಾಪೂರ್ ನಲ್ಲಿ ನಡೆಯಲಿದೆ.’ ಎಂದು ಟ್ವೀಟ್ ಮಾಡಿದೆ. KSRTC ಸಂಸ್ಥೆಯೂ ಕೋಟ್ಯಾಂತರ ಜನರಿಗೆ ಆಸರೆಯಾಗಿದೆ. ಅದೇ ರೀತಿ . ಉದ್ಯೋಗ ಕಲ್ಪಿಸುವ ಉತ್ತಮ ಬ್ರ್ಯಾಂಡ್ ಆಗಿಯೂ ಹೊರಹೊಮ್ಮಿದೆ. ಅದಕ್ಕೆ ಸಂಸ್ಥೆ ಖುಷಿಯಲ್ಲಿದೆ. KSRTC ಜನರಿಗೆ ಇದೇ ರೀತಿ ಸೇವೆ ಮುಂದುವರಿಸಲಿ. ಇನ್ನು ಹೆಚ್ಚು ಗುರುತಿಸಿಕೊಳ್ಳಲಿ ಎಂದು ಸಾರ್ವಜನಿಕರು ಹೇಳಿದ್ದಾರೆ. ವಿಶ್ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

3 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

4 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

11 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

19 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

20 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago