ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕತ್ತಿಗೆ ಗ್ರಾಮದಲ್ಲಿ ಅರ್ಚಕ ಮಹೇಶ್ವರಯ್ಯ ಆಂಜನೇಯ ಸ್ವಾಮಿ ಮೂರ್ತಿಯ ಮೇಲೆ ಕಾಲಿಟ್ಟು ಪೂಜೆ ಮಾಡಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಭಕ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಅರ್ಚಕ ಮಹೇಶ್ವರಯ್ಯ ಕ್ಷಮೆಯಾಚಿಸಿದ್ದಾರೆ.
ಬೇಡರ ಕಣ್ಣಪ್ಪನ ರೀತಿಯಲ್ಲಿ ದೇವರ ಮೂರ್ತಿ ಮೇಲೆ ಕಾಲಿಟ್ಟು ತನ್ನ ಭಕ್ತಿಯನ್ನು ಸಮರ್ಪಿಸಿದ ರೀತಿ ಅರ್ಚಕನೊಬ್ಬ ಆಂಜನೇಯನ ಮೂರ್ತಿ ಮೇಲೆ ಕಾಲಿಟ್ಟು ಅಭಿಷೇಕ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತು. ವಿಡಿಯೋ ನೋಡಿ ಭಕ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಬಳ್ಳೂರ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲೂ ದೇವರ ಮೂರ್ತಿ ಮೇಲೆ ಕಾಲಿಟ್ಟು ಹಿಂದೆ ವಿವಾದವಾಗಿತ್ತು. ಅಲ್ಲಿನ ಅರ್ಚಕರೂ ಬಳಿಕ ಕ್ಷಮೆಯಾಚನೆ ಮಾಡಿದ್ದರು. ಅದೊಂದು ಸಂಪ್ರದಾಯ ಎಂದು ಆಂಜನೇಯ ದೇವರ ಮೇಲೆ ಕಾಲಿಟ್ಟು ಪೂಜೆ ಮಾಡಿದ್ದೆ. ನನ್ನಿಂದ ತಪ್ಪಾಗಿದೆ ಎಂದು ಅರ್ಚಕ ಹೇಳಿದ್ದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…