ರೈತ ಮಹಿಳೆಯ ಅಮೋಘ ಸಾಧನೆ ಮೆಚ್ಚಿದ ಪ್ರಧಾನಿ : ಕೃಷಿ ಸಖಿ ಸಂವಾದದಲ್ಲಿ ಮೋದಿ ಜೊತೆ ಭಾಗವಹಿಸಿದ ಯಲ್ಲಾಪುರದ ಶ್ರೀಲತಾ ಹೆಗಡೆ

June 22, 2024
1:29 PM

ಕೃಷಿ(Agriculture) ನಮ್ಮ ದೇಶದ ಬೆನ್ನೆಲುಬು. ಆಧುನಿಕತೆ(Modernization) ಬೆಳೆಯುತ್ತಿದೆ. ಆದರೂ ಕೃಷಿಯನ್ನೇ ನಂಬಿ ಬದುಕುವವರು ಬಹಳ ಮಂದಿ ಇದ್ದಾರೆ. ಹಾಗೇ ಮಹಿಳೆಯರೂ(Women) ಇಂದು ಕೃಷಿಯನ್ನು ಪೂರ್ಣ ಪ್ರಮಾಣದ ಉದ್ಯೂಗವನ್ನಾಗಿ ಮಾಡಿಕೊಂಡಿದ್ದಾರೆ. ಕೃಷಿಯಲ್ಲಿ ಬದುಕು ಕಟ್ಟಿಕೊಂಡ ಅನೇಕ ರೈತ ಮಹಿಳೆಯರಿದ್ದಾರೆ.. ಮಹಿಳಾ ಸಾಧಕರಿದ್ದಾರೆ. ಅವರಲ್ಲಿ ಉತ್ತರ ಕನ್ನಡ(Uttar Kannada) ಜಿಲ್ಲೆಯ ಯಲ್ಲಾಪುರದ ಸಣ್ಣ ಹಳ್ಳಿಯಲ್ಲಿ ಕೃಷಿ ಮಾಡಿಕೊಂಡು ಜನರಿಗೆ ಕೃಷಿ ಬಗ್ಗೆ ಮಾಹಿತಿ(Information) ನೀಡುವ ಶ್ರೀಲತಾ ಹೆಗಡೆಯವರು ಒಬ್ಬರು. ಇವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ (PM Narendra Modi) ಕೃಷಿ ಸಖಿಯಾಗಿ (Krishi Sakhi) ಸಂವಾದ ನಡೆಸಿದ್ದಾರೆ. ವಾರಣಾಸಿಯಲ್ಲಿ ನಡೆದ ಪ್ರಧಾನಿ ಅವರ ಕಾರ್ಯಕ್ರಮದಲ್ಲಿ ರಾಜ್ಯದ ಪರವಾಗಿ ಆಯ್ಕೆಯಾದ ಇಬ್ಬರು ಮಹಿಳೆಯರಲ್ಲಿ ಇವರು ಒಬ್ಬರು. ರಸಮೇವು ಉತ್ಪಾದನೆಯಲ್ಲಿ ತೊಡಗಿಸಿಕೊಂಡು ಜನರಿಗೆ ಸಾವಯವ ಕೃಷಿಗೆ ಬೆಂಬಲಿಸುತ್ತಾ ಬಂದಿದ್ದಾರೆ ಶ್ರೀಲತಾ ಅವರು.

ಕೃಷಿ ಸಖಿಯಾಗಿ ಸೇವೆ : ಶ್ರೀಲತಾ ರಾಜೀವ ಹೆಗಡೆಯವರು ತಮ್ಮ ಪತಿಯೊಂದಿಗೆ ನೈಸರ್ಗಿಕ ಪುಷ್ಪಕೃಷಿ, ಪಶು ಆಹಾರ ತಯಾರಿಕೆ, ಹೈನುಗಾರಿಕೆ ಮುಂತಾದ ಕೃಷಿ ಸಂಬಂಧಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ಭಾಗವಹಿಸುತ್ತಿದ್ದು ತಾಲೂಕಿನ ಚಂದ್ಗುಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕೃಷಿ ಸಖಿಯಾಗಿ ಗ್ರಾಮೀಣ ಪ್ರದೇಶದ ರೈತರಿಗೆ ಸೂಕ್ತ ಮಾರ್ಗದರ್ಶನ ನೀಡುತ್ತಿದ್ದಾರೆ.

ಪ್ರಸ್ತುತ ಯಲ್ಲಾಪುರದ ಜಂಬೇಸಾಲಿನಲ್ಲಿ ವಾಸವಾಗಿರುವ ಶ್ರೀಲತಾ ಹೆಗಡೆ ಹಾಗೂ ಅವರ ಪತಿ ಬರಗಾಲದಲ್ಲಿ ರಸಮೇವಿನ ಪ್ರಯೋಗದಿಂದ ಹೈನುಗಳಿಗೆ ಪರಿಣಾಮಕಾರಿ ಆಹಾರವನ್ನು ಒದಗಿಸಿ ರೈತರಿಗೆ ಬಂದೊಗಗಿದ್ದ ದುಬಾರಿ ಒಣಹುಲ್ಲಿನ ಹೊರೆಯ ಸಂಕಟವನ್ನು ತಪ್ಪಿಸಿದ್ದರು. ಇದೀಗ ಅವರು ಪ್ರಧಾನಿ ಅವರ ಕೈಯಿಂದ ಕೃಷಿ ಸಖಿ ಪ್ರಶಸ್ತಿ ಪತ್ರವನ್ನು ವಾರಣಾಸಿಯಲ್ಲಿ ಪಡೆದುಕೊಂಡು ಇನ್ನಷ್ಟು ರೈತ ಮಹಿಳೆಯರಿಗೆ ಸ್ಪೂರ್ತಿಯಾಗಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror