Advertisement
MIRROR FOCUS

ರೈತ ಮಹಿಳೆಯ ಅಮೋಘ ಸಾಧನೆ ಮೆಚ್ಚಿದ ಪ್ರಧಾನಿ : ಕೃಷಿ ಸಖಿ ಸಂವಾದದಲ್ಲಿ ಮೋದಿ ಜೊತೆ ಭಾಗವಹಿಸಿದ ಯಲ್ಲಾಪುರದ ಶ್ರೀಲತಾ ಹೆಗಡೆ

Share

ಕೃಷಿ(Agriculture) ನಮ್ಮ ದೇಶದ ಬೆನ್ನೆಲುಬು. ಆಧುನಿಕತೆ(Modernization) ಬೆಳೆಯುತ್ತಿದೆ. ಆದರೂ ಕೃಷಿಯನ್ನೇ ನಂಬಿ ಬದುಕುವವರು ಬಹಳ ಮಂದಿ ಇದ್ದಾರೆ. ಹಾಗೇ ಮಹಿಳೆಯರೂ(Women) ಇಂದು ಕೃಷಿಯನ್ನು ಪೂರ್ಣ ಪ್ರಮಾಣದ ಉದ್ಯೂಗವನ್ನಾಗಿ ಮಾಡಿಕೊಂಡಿದ್ದಾರೆ. ಕೃಷಿಯಲ್ಲಿ ಬದುಕು ಕಟ್ಟಿಕೊಂಡ ಅನೇಕ ರೈತ ಮಹಿಳೆಯರಿದ್ದಾರೆ.. ಮಹಿಳಾ ಸಾಧಕರಿದ್ದಾರೆ. ಅವರಲ್ಲಿ ಉತ್ತರ ಕನ್ನಡ(Uttar Kannada) ಜಿಲ್ಲೆಯ ಯಲ್ಲಾಪುರದ ಸಣ್ಣ ಹಳ್ಳಿಯಲ್ಲಿ ಕೃಷಿ ಮಾಡಿಕೊಂಡು ಜನರಿಗೆ ಕೃಷಿ ಬಗ್ಗೆ ಮಾಹಿತಿ(Information) ನೀಡುವ ಶ್ರೀಲತಾ ಹೆಗಡೆಯವರು ಒಬ್ಬರು. ಇವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ (PM Narendra Modi) ಕೃಷಿ ಸಖಿಯಾಗಿ (Krishi Sakhi) ಸಂವಾದ ನಡೆಸಿದ್ದಾರೆ. ವಾರಣಾಸಿಯಲ್ಲಿ ನಡೆದ ಪ್ರಧಾನಿ ಅವರ ಕಾರ್ಯಕ್ರಮದಲ್ಲಿ ರಾಜ್ಯದ ಪರವಾಗಿ ಆಯ್ಕೆಯಾದ ಇಬ್ಬರು ಮಹಿಳೆಯರಲ್ಲಿ ಇವರು ಒಬ್ಬರು. ರಸಮೇವು ಉತ್ಪಾದನೆಯಲ್ಲಿ ತೊಡಗಿಸಿಕೊಂಡು ಜನರಿಗೆ ಸಾವಯವ ಕೃಷಿಗೆ ಬೆಂಬಲಿಸುತ್ತಾ ಬಂದಿದ್ದಾರೆ ಶ್ರೀಲತಾ ಅವರು.

ಕೃಷಿ ಸಖಿಯಾಗಿ ಸೇವೆ : ಶ್ರೀಲತಾ ರಾಜೀವ ಹೆಗಡೆಯವರು ತಮ್ಮ ಪತಿಯೊಂದಿಗೆ ನೈಸರ್ಗಿಕ ಪುಷ್ಪಕೃಷಿ, ಪಶು ಆಹಾರ ತಯಾರಿಕೆ, ಹೈನುಗಾರಿಕೆ ಮುಂತಾದ ಕೃಷಿ ಸಂಬಂಧಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ಭಾಗವಹಿಸುತ್ತಿದ್ದು ತಾಲೂಕಿನ ಚಂದ್ಗುಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕೃಷಿ ಸಖಿಯಾಗಿ ಗ್ರಾಮೀಣ ಪ್ರದೇಶದ ರೈತರಿಗೆ ಸೂಕ್ತ ಮಾರ್ಗದರ್ಶನ ನೀಡುತ್ತಿದ್ದಾರೆ.

ಪ್ರಸ್ತುತ ಯಲ್ಲಾಪುರದ ಜಂಬೇಸಾಲಿನಲ್ಲಿ ವಾಸವಾಗಿರುವ ಶ್ರೀಲತಾ ಹೆಗಡೆ ಹಾಗೂ ಅವರ ಪತಿ ಬರಗಾಲದಲ್ಲಿ ರಸಮೇವಿನ ಪ್ರಯೋಗದಿಂದ ಹೈನುಗಳಿಗೆ ಪರಿಣಾಮಕಾರಿ ಆಹಾರವನ್ನು ಒದಗಿಸಿ ರೈತರಿಗೆ ಬಂದೊಗಗಿದ್ದ ದುಬಾರಿ ಒಣಹುಲ್ಲಿನ ಹೊರೆಯ ಸಂಕಟವನ್ನು ತಪ್ಪಿಸಿದ್ದರು. ಇದೀಗ ಅವರು ಪ್ರಧಾನಿ ಅವರ ಕೈಯಿಂದ ಕೃಷಿ ಸಖಿ ಪ್ರಶಸ್ತಿ ಪತ್ರವನ್ನು ವಾರಣಾಸಿಯಲ್ಲಿ ಪಡೆದುಕೊಂಡು ಇನ್ನಷ್ಟು ರೈತ ಮಹಿಳೆಯರಿಗೆ ಸ್ಪೂರ್ತಿಯಾಗಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

10 hours ago

ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…

17 hours ago

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ

ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್…

17 hours ago

ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆ – ದೇಶದ ಕೃಷಿಯ ಹೃದಯಭಾಗದಲ್ಲಿ ಮೋಡಗಳೇ ಇಲ್ಲ..!

ದೇಶದಲ್ಲಿ ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆಯಾಗಿದ್ದು, ಪ್ರಮುಖ ಕೃಷಿ ಪ್ರದೇಶಗಳಲ್ಲಿ ಮೋಡಗಳ…

18 hours ago

ಕೇರಳ ಬಜೆಟ್‌ನಲ್ಲಿ ರಬ್ಬರ್‌ ಬೆಳೆಗಾರರಿಗೆ ಬಂಪರ್‌ ಸಿಹಿ ಸುದ್ದಿ- ಬೆಂಬಲ ಬೆಲೆ ₹250ಕ್ಕೆ ಏರಿಕೆ

ಕೇರಳ ಸರ್ಕಾರ ರಬ್ಬರ್‌ ಬೆಂಬಲ ಬೆಲೆಯನ್ನು ₹200ರಿಂದ ₹250ಕ್ಕೆ ಹೆಚ್ಚಿಸಿದೆ. ಮಾರುಕಟ್ಟೆ ಬೆಲೆ…

1 day ago