Advertisement
MIRROR FOCUS

ರೈತ ಮಹಿಳೆಯ ಅಮೋಘ ಸಾಧನೆ ಮೆಚ್ಚಿದ ಪ್ರಧಾನಿ : ಕೃಷಿ ಸಖಿ ಸಂವಾದದಲ್ಲಿ ಮೋದಿ ಜೊತೆ ಭಾಗವಹಿಸಿದ ಯಲ್ಲಾಪುರದ ಶ್ರೀಲತಾ ಹೆಗಡೆ

Share

ಕೃಷಿ(Agriculture) ನಮ್ಮ ದೇಶದ ಬೆನ್ನೆಲುಬು. ಆಧುನಿಕತೆ(Modernization) ಬೆಳೆಯುತ್ತಿದೆ. ಆದರೂ ಕೃಷಿಯನ್ನೇ ನಂಬಿ ಬದುಕುವವರು ಬಹಳ ಮಂದಿ ಇದ್ದಾರೆ. ಹಾಗೇ ಮಹಿಳೆಯರೂ(Women) ಇಂದು ಕೃಷಿಯನ್ನು ಪೂರ್ಣ ಪ್ರಮಾಣದ ಉದ್ಯೂಗವನ್ನಾಗಿ ಮಾಡಿಕೊಂಡಿದ್ದಾರೆ. ಕೃಷಿಯಲ್ಲಿ ಬದುಕು ಕಟ್ಟಿಕೊಂಡ ಅನೇಕ ರೈತ ಮಹಿಳೆಯರಿದ್ದಾರೆ.. ಮಹಿಳಾ ಸಾಧಕರಿದ್ದಾರೆ. ಅವರಲ್ಲಿ ಉತ್ತರ ಕನ್ನಡ(Uttar Kannada) ಜಿಲ್ಲೆಯ ಯಲ್ಲಾಪುರದ ಸಣ್ಣ ಹಳ್ಳಿಯಲ್ಲಿ ಕೃಷಿ ಮಾಡಿಕೊಂಡು ಜನರಿಗೆ ಕೃಷಿ ಬಗ್ಗೆ ಮಾಹಿತಿ(Information) ನೀಡುವ ಶ್ರೀಲತಾ ಹೆಗಡೆಯವರು ಒಬ್ಬರು. ಇವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ (PM Narendra Modi) ಕೃಷಿ ಸಖಿಯಾಗಿ (Krishi Sakhi) ಸಂವಾದ ನಡೆಸಿದ್ದಾರೆ. ವಾರಣಾಸಿಯಲ್ಲಿ ನಡೆದ ಪ್ರಧಾನಿ ಅವರ ಕಾರ್ಯಕ್ರಮದಲ್ಲಿ ರಾಜ್ಯದ ಪರವಾಗಿ ಆಯ್ಕೆಯಾದ ಇಬ್ಬರು ಮಹಿಳೆಯರಲ್ಲಿ ಇವರು ಒಬ್ಬರು. ರಸಮೇವು ಉತ್ಪಾದನೆಯಲ್ಲಿ ತೊಡಗಿಸಿಕೊಂಡು ಜನರಿಗೆ ಸಾವಯವ ಕೃಷಿಗೆ ಬೆಂಬಲಿಸುತ್ತಾ ಬಂದಿದ್ದಾರೆ ಶ್ರೀಲತಾ ಅವರು.

ಕೃಷಿ ಸಖಿಯಾಗಿ ಸೇವೆ : ಶ್ರೀಲತಾ ರಾಜೀವ ಹೆಗಡೆಯವರು ತಮ್ಮ ಪತಿಯೊಂದಿಗೆ ನೈಸರ್ಗಿಕ ಪುಷ್ಪಕೃಷಿ, ಪಶು ಆಹಾರ ತಯಾರಿಕೆ, ಹೈನುಗಾರಿಕೆ ಮುಂತಾದ ಕೃಷಿ ಸಂಬಂಧಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ಭಾಗವಹಿಸುತ್ತಿದ್ದು ತಾಲೂಕಿನ ಚಂದ್ಗುಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕೃಷಿ ಸಖಿಯಾಗಿ ಗ್ರಾಮೀಣ ಪ್ರದೇಶದ ರೈತರಿಗೆ ಸೂಕ್ತ ಮಾರ್ಗದರ್ಶನ ನೀಡುತ್ತಿದ್ದಾರೆ.

ಪ್ರಸ್ತುತ ಯಲ್ಲಾಪುರದ ಜಂಬೇಸಾಲಿನಲ್ಲಿ ವಾಸವಾಗಿರುವ ಶ್ರೀಲತಾ ಹೆಗಡೆ ಹಾಗೂ ಅವರ ಪತಿ ಬರಗಾಲದಲ್ಲಿ ರಸಮೇವಿನ ಪ್ರಯೋಗದಿಂದ ಹೈನುಗಳಿಗೆ ಪರಿಣಾಮಕಾರಿ ಆಹಾರವನ್ನು ಒದಗಿಸಿ ರೈತರಿಗೆ ಬಂದೊಗಗಿದ್ದ ದುಬಾರಿ ಒಣಹುಲ್ಲಿನ ಹೊರೆಯ ಸಂಕಟವನ್ನು ತಪ್ಪಿಸಿದ್ದರು. ಇದೀಗ ಅವರು ಪ್ರಧಾನಿ ಅವರ ಕೈಯಿಂದ ಕೃಷಿ ಸಖಿ ಪ್ರಶಸ್ತಿ ಪತ್ರವನ್ನು ವಾರಣಾಸಿಯಲ್ಲಿ ಪಡೆದುಕೊಂಡು ಇನ್ನಷ್ಟು ರೈತ ಮಹಿಳೆಯರಿಗೆ ಸ್ಪೂರ್ತಿಯಾಗಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

6 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

14 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

21 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago