ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ

April 10, 2025
7:46 AM
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು  ಮಾಡುವಂತೆ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದರು.

ಸ್ಥಳೀಯ ಉತ್ಪನ್ನಗಳನ್ನು ಉತ್ತೇಜಿಸುವುದರೊಂದಿಗೆ ಭಾರತದಲ್ಲೇ ತಯಾರಿಸಿದ ವಸ್ತುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಬೇಕು ಎಂದು ಪ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.…..ಮುಂದೆ ಓದಿ….

ದೆಹಲಿಯಲ್ಲಿ ಶಾಂತಿ ಮತ್ತು ಆಧ್ಯಾತ್ಮಿಕ ಏಕತೆಗಾಗಿ ಜಾಗತಿಕ ನವಕರ್ ಮಹಾಮಂತ್ರ ದಿವಸ್ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು, ನವಕರ್ ಮಹಾಮಂತ್ರದ ತತ್ವಶಾಸ್ತ್ರವು ಅಭಿವೃದ್ಧಿ ಹೊಂದಿದ ಭಾರತದ ದೃಷ್ಟಿಕೋನಕ್ಕೆ ಸಂಬಂಧಿಸಿದೆ. ಸ್ಥಳೀಯ ಉತ್ಪನ್ನಗಳನ್ನು ಜಾಗತಿಕ ಮಟ್ಟಕ್ಕೆ ತಕ್ಕಂತೆ  ತಯಾರಿಸುವ ಅಗತ್ಯವಿದೆ ಎಂದರು.  ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು  ಮಾಡುವಂತೆ ಜನತೆಗೆ ಮನವಿ ಮಾಡಿದ ಅವರು, ನೀರನ್ನು ಉಳಿಸುವುದು,  ತಾಯಿಯ ಹೆಸರಿನಲ್ಲಿ ಮರವೊಂದನ್ನು ಪೋಷಿಸುವುದು, ಸ್ವಚ್ಛತೆಯ ಧ್ಯೇಯ, ಸ್ಥಳೀಯ  ಉತ್ಪನ್ನಗಳಿಗೆ ಉತ್ತೇಜನ, ದೇಶೀಯ ಪ್ರವಾಸೋದ್ಯಮ, ನೈಸರ್ಗಿಕ ಕೃಷಿಯನ್ನು ಅಳವಡಿಸಿಕೊಳ್ಳುವುದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು, ಯೋಗ ಮತ್ತು ಕ್ರೀಡೆಗಳನ್ನು ಜೀವನದ ಭಾಗವಾಗಿಸುವುದು ಮತ್ತು ಬಡವರಿಗೆ ಸಹಾಯ ಮಾಡುವುದು ಇದರಲ್ಲಿ ಸೇರಿವೆ ಎಂದರು.

ಭಾರತದ ಇತಿಹಾಸ, ಹೆಗ್ಗುರುತು ಮತ್ತು ಆಧ್ಯಾತ್ಮಿಕ ಪ್ರಯಾಣದಲ್ಲಿ ಜೈನ ಧರ್ಮದ ಮಹತ್ವವನ್ನು ಪ್ರಸ್ತಾಪಿಸಿದ ಅವರು,  ಜೈನ ಸಾಹಿತ್ಯವು ಭಾರತದ ಬೌದ್ಧಿಕ ವೈಭವದ ಬೆನ್ನೆಲುಬಾಗಿದೆ. ಜ್ಞಾನವನ್ನು ಸಂರಕ್ಷಿಸುವ ಸರ್ಕಾರದ ಬದ್ಧತೆಯಂತೆ ಪ್ರಾಕೃತ್ ಮತ್ತು ಪಾಲಿ ಭಾಷೆಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡಲಾಗಿದೆ. ಜೈನ ಸಮುದಾಯವು ಶತಮಾನಗಳಿಂದ ಸುಸ್ಥಿರ ಜೀವನಶೈಲಿ ಪಾಲಿಸಿಕೊಂಡು ಬಂದಿದೆ.. ಇದು ಭಾರತದ ಮಿಷನ್ ಲೈಫ್‌ಗೆ ಹೊಂದಾಣಿಕೆಯಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ 108ಕ್ಕೂ ಹೆಚ್ಚು ದೇಶಗಳ ಜನರು ಶಾಂತಿ ಮತ್ತು ಒಗ್ಗಟ್ಟಿನಿಂದ ಈ ಜಾಗತಿಕ ಪಠಣದಲ್ಲಿ ಪಾಲ್ಗೊಂಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್
ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ
March 3, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror