Advertisement
MIRROR FOCUS

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ

Share

ಸ್ಥಳೀಯ ಉತ್ಪನ್ನಗಳನ್ನು ಉತ್ತೇಜಿಸುವುದರೊಂದಿಗೆ ಭಾರತದಲ್ಲೇ ತಯಾರಿಸಿದ ವಸ್ತುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಬೇಕು ಎಂದು ಪ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.…..ಮುಂದೆ ಓದಿ….

ದೆಹಲಿಯಲ್ಲಿ ಶಾಂತಿ ಮತ್ತು ಆಧ್ಯಾತ್ಮಿಕ ಏಕತೆಗಾಗಿ ಜಾಗತಿಕ ನವಕರ್ ಮಹಾಮಂತ್ರ ದಿವಸ್ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು, ನವಕರ್ ಮಹಾಮಂತ್ರದ ತತ್ವಶಾಸ್ತ್ರವು ಅಭಿವೃದ್ಧಿ ಹೊಂದಿದ ಭಾರತದ ದೃಷ್ಟಿಕೋನಕ್ಕೆ ಸಂಬಂಧಿಸಿದೆ. ಸ್ಥಳೀಯ ಉತ್ಪನ್ನಗಳನ್ನು ಜಾಗತಿಕ ಮಟ್ಟಕ್ಕೆ ತಕ್ಕಂತೆ  ತಯಾರಿಸುವ ಅಗತ್ಯವಿದೆ ಎಂದರು.  ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು  ಮಾಡುವಂತೆ ಜನತೆಗೆ ಮನವಿ ಮಾಡಿದ ಅವರು, ನೀರನ್ನು ಉಳಿಸುವುದು,  ತಾಯಿಯ ಹೆಸರಿನಲ್ಲಿ ಮರವೊಂದನ್ನು ಪೋಷಿಸುವುದು, ಸ್ವಚ್ಛತೆಯ ಧ್ಯೇಯ, ಸ್ಥಳೀಯ  ಉತ್ಪನ್ನಗಳಿಗೆ ಉತ್ತೇಜನ, ದೇಶೀಯ ಪ್ರವಾಸೋದ್ಯಮ, ನೈಸರ್ಗಿಕ ಕೃಷಿಯನ್ನು ಅಳವಡಿಸಿಕೊಳ್ಳುವುದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು, ಯೋಗ ಮತ್ತು ಕ್ರೀಡೆಗಳನ್ನು ಜೀವನದ ಭಾಗವಾಗಿಸುವುದು ಮತ್ತು ಬಡವರಿಗೆ ಸಹಾಯ ಮಾಡುವುದು ಇದರಲ್ಲಿ ಸೇರಿವೆ ಎಂದರು.

ಭಾರತದ ಇತಿಹಾಸ, ಹೆಗ್ಗುರುತು ಮತ್ತು ಆಧ್ಯಾತ್ಮಿಕ ಪ್ರಯಾಣದಲ್ಲಿ ಜೈನ ಧರ್ಮದ ಮಹತ್ವವನ್ನು ಪ್ರಸ್ತಾಪಿಸಿದ ಅವರು,  ಜೈನ ಸಾಹಿತ್ಯವು ಭಾರತದ ಬೌದ್ಧಿಕ ವೈಭವದ ಬೆನ್ನೆಲುಬಾಗಿದೆ. ಜ್ಞಾನವನ್ನು ಸಂರಕ್ಷಿಸುವ ಸರ್ಕಾರದ ಬದ್ಧತೆಯಂತೆ ಪ್ರಾಕೃತ್ ಮತ್ತು ಪಾಲಿ ಭಾಷೆಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡಲಾಗಿದೆ. ಜೈನ ಸಮುದಾಯವು ಶತಮಾನಗಳಿಂದ ಸುಸ್ಥಿರ ಜೀವನಶೈಲಿ ಪಾಲಿಸಿಕೊಂಡು ಬಂದಿದೆ.. ಇದು ಭಾರತದ ಮಿಷನ್ ಲೈಫ್‌ಗೆ ಹೊಂದಾಣಿಕೆಯಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ 108ಕ್ಕೂ ಹೆಚ್ಚು ದೇಶಗಳ ಜನರು ಶಾಂತಿ ಮತ್ತು ಒಗ್ಗಟ್ಟಿನಿಂದ ಈ ಜಾಗತಿಕ ಪಠಣದಲ್ಲಿ ಪಾಲ್ಗೊಂಡಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

5 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

11 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

19 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

22 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago