Advertisement
MIRROR FOCUS

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

Share

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ ಇತ್ತೀಚೆಗೆ   ಪ್ರಧಾನ ಮಂತ್ರಿ ಧನ ಧಾನ್ಯ ಕೃಷಿ ಯೋಜನೆಯನ್ನು ಘೋಷಿಸಿದೆ.ದೇಶದ ಆಯ್ದ ನೂರು ಜಿಲ್ಲೆಗಳಲ್ಲಿ  ಮೊದಲ ಹಂತದಲ್ಲಿ ಜಾರಿಗೆ  ಬರಲಿರುವ ಯೋಜನೆ  ಗ್ರಾಮೀಣ ಮಟ್ಟದಲ್ಲಿ ಕೃಷಿ ವಲಯದ ಸುಧಾರಣೆಯ ಗುರಿಯನ್ನು ಹೊಂದಿದೆ.  ಕೃಷಿ ಉತ್ಪಾದನೆ ಹೆಚ್ಚಳ, ಉತ್ಪಾದಕತೆ ಹಾಗೂ ಸುಸ್ಥಿರತೆಗೆ ಆದ್ಯತೆ, ನೀರಾವರಿ ಸೇರಿದಂತೆ ಕೃಷಿ  ವಲಯದ ಸಮಗ್ರ ಅಭಿವೃದ್ಧಿಯ  ಧ್ಯೇಯವನ್ನು ಈ ಯೋಜನೆ  ಹೊಂದಿದೆ.

ಈ ಯೋಜನೆಯು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವುದು, ಬೆಳೆ ವೈವಿಧ್ಯೀಕರಣ ಮತ್ತು ಸುಸ್ಥಿರ ಕೃಷಿ ಪದ್ಧತಿಗಳ ಅಳವಡಿಕೆಯನ್ನು ಹೆಚ್ಚಿಸುವುದು, ಪಂಚಾಯತ್ ಮತ್ತು ಬ್ಲಾಕ್ ಮಟ್ಟದಲ್ಲಿ ಕೊಯ್ಲಿನ ನಂತರದ ಸಂಗ್ರಹಣೆಯನ್ನು ಹೆಚ್ಚಿಸುವುದು, ನೀರಾವರಿ ಸೌಲಭ್ಯಗಳನ್ನು ಸುಧಾರಿಸುವುದು ಮತ್ತು ದೀರ್ಘಾವಧಿ ಮತ್ತು ಅಲ್ಪಾವಧಿ ಸಾಲದ ಲಭ್ಯತೆಯನ್ನು ಸುಗಮಗೊಳಿಸುವ ಗುರಿಯನ್ನು ಹೊಂದಿದೆ. “ಪ್ರಧಾನ ಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ” ಅಡಿಯಲ್ಲಿ 100 ಜಿಲ್ಲೆಗಳನ್ನು ಅಭಿವೃದ್ಧಿಪಡಿಸಲು 2025-26 ರ ಬಜೆಟ್ ಪ್ರಸ್ತಾವನೆಗಳ ಭಾಗವಾಗಿ ಈ ಯೋಜನೆಯನ್ನು ಘೋಷಿಸಲಾಗಿದೆ. ಈ ಯೋಜನೆಯನ್ನು 11 ಇಲಾಖೆಗಳಲ್ಲಿ ಅಸ್ತಿತ್ವದಲ್ಲಿರುವ 36 ಯೋಜನೆಗಳು, ಇತರ ರಾಜ್ಯ ಯೋಜನೆಗಳು ಮತ್ತು ಖಾಸಗಿ ವಲಯದೊಂದಿಗೆ ಸ್ಥಳೀಯ ಪಾಲುದಾರಿಕೆಗಳ ಒಗ್ಗೂಡಿಸುವಿಕೆಯ ಮೂಲಕ ಕಾರ್ಯಗತಗೊಳಿಸಲಾಗುತ್ತದೆ.  ಕಡಿಮೆ ಉತ್ಪಾದಕತೆ, ಕಡಿಮೆ ಬೆಳೆ  ಮತ್ತು ಕಡಿಮೆ ಸಾಲ ವಿತರಣೆಯ ಮೂರು ಪ್ರಮುಖ ಸೂಚಕಗಳ ಆಧಾರದ ಮೇಲೆ 100 ಜಿಲ್ಲೆಗಳನ್ನು ಗುರುತಿಸಲಾಗುತ್ತದೆ.

ಈ ಯೋಜನೆ ಗ್ರಾಮೀಣ ಭಾಗದ ರೈತರಿಂದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗ್ರಾಮೀಣ ಭಾಗದ ರೈತರಿಗೆ  ಯೋಜನೆಯಿಂದ ಸಹಾಯವಾಗಲಿದೆ.ಹಳ್ಳಿಗಾಡಿನ ರೈತರಿಗೆ ಉತ್ತಮ ಬೆಳೆ ಬೆಳೆಯಲು ಸ್ಫೂರ್ತಿಯಾಗಿದೆ. ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವ ಜೊತೆಗೆ  ನೀರಾವರಿ ಸೌಲಭ್ಯಗಳ ಸುಧಾರಣೆಗೂ ಆದ್ಯತೆ ನೀಡಲಿದೆ.ಯೋಜನೆಯಿಂದ ರೈತರ ಭೂಮಿಯ ಫಲವತ್ತತೆ ಹೆಚ್ಚಲಿದ್ದು, ಉತ್ತಮ  ಕೃಷಿ  ಮಾಡಲು ಅನುಕೂಲವಾಗಲಿದೆ ಎನ್ನುವುದು ರೈತರ ಅಭಿಪ್ರಾಯ. ಈ ಯೋಜನೆಯ ಬಗ್ಗೆ ರೈತರಿಗೆ ಮಾಹಿತಿ ನೀಡುವಲ್ಲಿ ಕೃಷಿ ಅಧಿಕಾರಿಗಳು ಮುಂದಾಗಬೇಕು  ಎನ್ನುತ್ತಾರೆ ರೈತ ಮಾರ್ಬಳ್ಳಿ  ನೀಲಕಂಠ.

ನೀತಿ ಆಯೋಗದ ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಧನ-ಧಾನ್ಯ ಕೃಷಿ ಯೋಜನೆ ಜಾರಿಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿರುವುದಕ್ಕೆ ಬೆಳಗಾವಿ ಜಿಲ್ಲೆಯ ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಕೃಷಿ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡುತ್ತಿರುವುದು ದೇಶದ ಬೆಳವಣಿಗೆಗೆ ಪೂರಕವಾಗಲಿದೆ ಎಂದು ರೈತರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಬೆಳಗಾವಿಯಲ್ಲಿ ಕಬ್ಬು, ಭತ್ತ, ಸೋಯಾಬಿನ್ ಸೇರಿದಂತೆ ಹಲವು ಬೆಳೆಗಳನ್ನು ಬೆಳೆಯಲಾಗುತ್ತದೆ. ಕೇಂದ್ರ ಸರ್ಕಾರದ ನೂತನ ಕೃಷಿ ಯೋಜನೆಯು ಆರ್ಥಿಕವಾಗಿ ರೈತರನ್ನು ಸಬಲೀಕರಣಗೊಳಿಸಲಿದೆ.ಕೃಷಿ ಅಭಿವೃದ್ಧಿಗೆ ವರದಾನವಾಗಲಿದೆ  ಎನ್ನುವ ಆಶಾವಾದವನ್ನು ರೈತರು ವ್ಯಕ್ತಪಡಿಸುತ್ತಾರೆ. ಕೇಂದ್ರ ಸರ್ಕಾರದ ನೂತನ ಕೃಷಿ ಯೋಜನೆಯು ಆರ್ಥಿಕವಾಗಿ ರೈತರನ್ನು ಸಬಲೀಕರಣಗೊಳಿಸಲಿದೆ. ರೈತರು ಮನಸಾರೆ ಹೊಲದಲ್ಲಿ ದುಡಿದರೂ ಕೃಷಿಯಿಂದ ಲಾಭ ದೊರೆಯದೇ ಕಂಗಾಲಾಗುತ್ತಿದ್ದರು.ಕೇಂದ್ರ ಸರ್ಕಾರ ಜಾರಿ ಮಾಡಲಿರುವ ಹೊಸ ಯೋಜನೆಯಿಂದ ಆರ್ಥಿಕ ಪ್ರಗತಿ ಕಾಣಬಹುದಾಗಿದೆ ಎನ್ನುವ ನಿರೀಕ್ಷೆಯನ್ನು ವ್ಯಕ್ತಪಡಿಸಿದ್ದಾರೆ ರೈತ ದೇವಕುಮಾರ್.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 hour ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

2 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

4 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

7 hours ago