ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು ರಾಮ್ ಉಷ್ಣ ವಿದ್ಯುತ್ ಸ್ಥಾವರದ 800 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಹಲವು ವಿನೂತನ ಯೋಜನೆಗಳು ಜಾರಿಯಲ್ಲಿವೆ. ವಿದ್ಯುತ್ ಕೊರತೆ ನೀಗಿಸಲು ಸರ್ಕಾರ ಬದ್ಧವಾಗಿದೆ. ಇಂಧನ ಸ್ವಾವಲಂಬನೆಯನ್ನು ಆದ್ಯತೆ ವಿಷಯವಾಗಿ ಪರಿಗಣಿಸಲಾಗಿದೆ. ಗ್ರಾಮೀಣಾಭಿವೃದ್ಧಿಯನ್ನು ಆಶಯವಾಗಿ ಹೊಂದಿದ್ದ ಧೀನಬಂಧು ಚೋಟು ರಾಮ್ ಅವರ ಆದರ್ಶಗಳನ್ನು ಸಾಕಾರಗೊಳಿಸಲಾಗುತ್ತಿದೆ ಎಂದರು.
ಹರಿಯಾಣ ರಾಜ್ಯದಲ್ಲಿ 24 ವಿವಿಧ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲಾಗಿದ್ದು, ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯಡಿ ಆರೂವರೆ ಸಾವಿರ ಕೋಟಿ ರೂಪಾಯಿಗಳನ್ನು ರಾಜ್ಯದ ರೈತರ ಖಾತೆಗಳಿಗೆ ನೇರ ವರ್ಗಾವಣೆ ಮಾಡಲಾಗಿದೆ. ಮುದ್ರಾ ಯೋಜನೆಯಡಿ ಕಳೆದ 10 ವರ್ಷಗಳಲ್ಲಿ ದೇಶಾದ್ಯಂತ 33 ಲಕ್ಷ ಕೋಟಿ ರೂಪಾಯಿ ಗ್ಯಾರಂಟಿ ರಹಿತ ಸಾಲವನ್ನು ಸ್ವಯಂ ಉದ್ಯೋಗಿಗಳಿಗೆ ನೀಡಲಾಗಿದೆ ಎಂದು ವಿವರಿಸಿದರು.
ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.
ಜೂನ್ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…
ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…
E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…