ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು ರಾಮ್ ಉಷ್ಣ ವಿದ್ಯುತ್ ಸ್ಥಾವರದ 800 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಹಲವು ವಿನೂತನ ಯೋಜನೆಗಳು ಜಾರಿಯಲ್ಲಿವೆ. ವಿದ್ಯುತ್ ಕೊರತೆ ನೀಗಿಸಲು ಸರ್ಕಾರ ಬದ್ಧವಾಗಿದೆ. ಇಂಧನ ಸ್ವಾವಲಂಬನೆಯನ್ನು ಆದ್ಯತೆ ವಿಷಯವಾಗಿ ಪರಿಗಣಿಸಲಾಗಿದೆ. ಗ್ರಾಮೀಣಾಭಿವೃದ್ಧಿಯನ್ನು ಆಶಯವಾಗಿ ಹೊಂದಿದ್ದ ಧೀನಬಂಧು ಚೋಟು ರಾಮ್ ಅವರ ಆದರ್ಶಗಳನ್ನು ಸಾಕಾರಗೊಳಿಸಲಾಗುತ್ತಿದೆ ಎಂದರು.
ಹರಿಯಾಣ ರಾಜ್ಯದಲ್ಲಿ 24 ವಿವಿಧ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲಾಗಿದ್ದು, ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯಡಿ ಆರೂವರೆ ಸಾವಿರ ಕೋಟಿ ರೂಪಾಯಿಗಳನ್ನು ರಾಜ್ಯದ ರೈತರ ಖಾತೆಗಳಿಗೆ ನೇರ ವರ್ಗಾವಣೆ ಮಾಡಲಾಗಿದೆ. ಮುದ್ರಾ ಯೋಜನೆಯಡಿ ಕಳೆದ 10 ವರ್ಷಗಳಲ್ಲಿ ದೇಶಾದ್ಯಂತ 33 ಲಕ್ಷ ಕೋಟಿ ರೂಪಾಯಿ ಗ್ಯಾರಂಟಿ ರಹಿತ ಸಾಲವನ್ನು ಸ್ವಯಂ ಉದ್ಯೋಗಿಗಳಿಗೆ ನೀಡಲಾಗಿದೆ ಎಂದು ವಿವರಿಸಿದರು.
ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…