ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು ರಾಮ್ ಉಷ್ಣ ವಿದ್ಯುತ್ ಸ್ಥಾವರದ 800 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಹಲವು ವಿನೂತನ ಯೋಜನೆಗಳು ಜಾರಿಯಲ್ಲಿವೆ. ವಿದ್ಯುತ್ ಕೊರತೆ ನೀಗಿಸಲು ಸರ್ಕಾರ ಬದ್ಧವಾಗಿದೆ. ಇಂಧನ ಸ್ವಾವಲಂಬನೆಯನ್ನು ಆದ್ಯತೆ ವಿಷಯವಾಗಿ ಪರಿಗಣಿಸಲಾಗಿದೆ. ಗ್ರಾಮೀಣಾಭಿವೃದ್ಧಿಯನ್ನು ಆಶಯವಾಗಿ ಹೊಂದಿದ್ದ ಧೀನಬಂಧು ಚೋಟು ರಾಮ್ ಅವರ ಆದರ್ಶಗಳನ್ನು ಸಾಕಾರಗೊಳಿಸಲಾಗುತ್ತಿದೆ ಎಂದರು.
ಹರಿಯಾಣ ರಾಜ್ಯದಲ್ಲಿ 24 ವಿವಿಧ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲಾಗಿದ್ದು, ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯಡಿ ಆರೂವರೆ ಸಾವಿರ ಕೋಟಿ ರೂಪಾಯಿಗಳನ್ನು ರಾಜ್ಯದ ರೈತರ ಖಾತೆಗಳಿಗೆ ನೇರ ವರ್ಗಾವಣೆ ಮಾಡಲಾಗಿದೆ. ಮುದ್ರಾ ಯೋಜನೆಯಡಿ ಕಳೆದ 10 ವರ್ಷಗಳಲ್ಲಿ ದೇಶಾದ್ಯಂತ 33 ಲಕ್ಷ ಕೋಟಿ ರೂಪಾಯಿ ಗ್ಯಾರಂಟಿ ರಹಿತ ಸಾಲವನ್ನು ಸ್ವಯಂ ಉದ್ಯೋಗಿಗಳಿಗೆ ನೀಡಲಾಗಿದೆ ಎಂದು ವಿವರಿಸಿದರು.
ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…