MIRROR FOCUS

ವಿಶ್ವದ ಪ್ರತಿ ಡೈನಿಂಗ್ ಟೇಬಲ್ ಮೇಲೆ ಭಾರತದ ಒಂದಲ್ಲ ಒಂದು ಉತ್ಪನ್ನ ಇರಬೇಕು | ಕಿಸಾನ್ ಸಮ್ಮಾನ್ ಯೋಜನೆಯಡಿ 20 ಸಾವಿರ ಕೋಟಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಎಂದಿನಂತೆ ಈ ಬಾರಿಯೂ ಕಿಸಾನ್ ನಿಧಿಯನ್ನು (PM-Kisan Samman Nidhi) ಪ್ರಧಾನಿ ಮೋದಿ ರಿಲೀಸ್ ಮಾಡಿದ್ದಾರೆ. ದೇಶದ ಒಟ್ಟು 9.26 ಕೋಟಿ ರೈತರ(Farmer) ಖಾತೆಗಳಿಗೆ(Account) 20 ಸಾವಿರ ಕೋಟಿ  ಬಿಡುಗಡೆ ಮಾಡಿದರು. ಮೂರನೇ ಬಾರಿಗೆ ಪ್ರಧಾನಿಯಾದ ನಂತರ ಪಿಎಂ ಕಿಸಾನ್ ನಿಧಿಗೆ ಸಂಬಂಧಿಸಿದ ಕಡತಕ್ಕೆ ಮೋದಿ (Narendra Modi) ಮೊದಲ ಸಹಿ ಹಾಕಿದ್ರು. ಇಂದು ಸ್ವಕ್ಷೇತ್ರದಲ್ಲಿ ನಡೆದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ, ಕೃಷಿ ಸಖಿಯರಾಗಿ ತರಬೇತಿ ಹೊಂದಿದ ಸ್ವಯಂ ಸಹಾಯಕ ತಂಡಗಳ ಮಹಿಳೆಯರಿಗೆ(Women) ಮೋದಿ ಪ್ರಮಾಣಪತ್ರ ವಿತರಿಸಿದರು. ಬಳಿಕ ವಾರಣಾಸಿಯ ದಶಾಶ್ವಮೇಧ ಘಾಟ್‍ನಲ್ಲಿ ನಡೆಯುವ ಗಂಗಾರತಿಯಲ್ಲಿ ಪ್ರಧಾನಿ ಮೋದಿ ಭಾಗಿಯಾದರು.

Advertisement
Advertisement

ಇದೇ ವೇಳೆ ವಾರಣಾಸಿಯಲ್ಲಿ ನಡೆದ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ಮೂರನೇ ಅವಧಿಯಲ್ಲಿ ರೈತರು ಮತ್ತು ಬಡವರಿಗೆ ಸಂಬಂಧಿಸಿದ ಮೊದಲ ನಿರ್ಧಾರ ತೆಗೆದುಕೊಂಡಿದ್ದೇನೆ. ದೇಶದಲ್ಲಿ ಬಡವರಿಗಾಗಿ ಮೂರು ಕೋಟಿ ಮನೆ ನಿರ್ಮಾಣ ಮಾಡುವ ಗುರಿ ಇದೆ. ಕಿಸಾನ್ ಸಮ್ಮಾನ್ ನಿಧಿ ಮುಂದುವರಿಸಲು ನಿರ್ಧಾರ ಕೈಗೊಂಡಿದ್ದೇವೆ. ಈ ಯೋಜನೆಯು ಕೋಟ್ಯಂತರ ಜನರಿಗೆ ಲಾಭ ಮಾಡಲಿದೆ. ಇಂದು ಕೋಟ್ಯಂತರ ರೈತರು ನಮ್ಮ ಜೊತೆಗೆ ಸೇರಿದ್ದಾರೆ. ಕಿಸಾನ್ ಸಮ್ಮಾನ್ ನಿಧಿ ವಿಶ್ವದ ಅತಿದೊಡ್ಡ ಡಿಬಿಟಿ ಯೋಜನೆಯಾಗಿದೆ. ತಂತ್ರಜ್ಞಾನ ಬಳಸಿಕೊಂಡು ಫಲಾನುಭವಿಗೆ ನೇರ ಸರ್ಕಾರದ ಯೋಜನೆ ತಲುಪಿಸುತ್ತಿದೆ. ಯೋಜನೆಗೆ ಸೇರಲು ನಿಯಮಗಳನ್ನು ಇನ್ನಷ್ಟು ಸಡಿಲಿಸಲಾಗಿದೆ. ಕೃಷಿಯಲ್ಲಿ ನಾವು ಇನ್ನಷ್ಟು ಸ್ವಾವಲಂಬಿಯಾಗಬೇಕಿದೆ ಎಂದು ಹೇಳಿದರು. ಭಾರತದ ಹಲವಾರು ತರಕಾರಿ ವಿದೇಶಿ ಮಾರುಕಟ್ಟೆ ತಲುಪುತ್ತಿದೆ. ಒಂದು ಜಿಲ್ಲೆ, ಒಂದು ಉತ್ಪನ್ನ ಯೋಜನೆಯಿಂದ ರಫ್ತು ಹೆಚ್ಚುತ್ತಿದೆ. ವಿಶ್ವದ ಪ್ರತಿ ಡೈನಿಂಗ್ ಟೇಬಲ್ ಮೇಲೆ ಭಾರತದ ಒಂದಲ್ಲ ಒಂದು ಉತ್ಪನ್ನ ಇರಬೇಕು ಎನ್ನುವುದು ನನ್ನ ಗುರಿ ಎಂದು ಅವರು ತಿಳಿಸಿದರು.

ಕೃಷಿ ಸಖಿ ಯೋಜನೆ ಮೂಲಕ ಮಹಿಳೆಯರನ್ನು ಕೃಷಿಯಲ್ಲಿ ಗುರುತಿಸಲಾಗುವುದು. ಇದು ಲಕ್ ಪತಿ ದೀದಿಯನ್ನಾಗಿಸಲು ಅನುಕೂಲವಾಗಲಿದೆ. ಡೈರಿಗಳ ನಿರ್ಮಾಣದಿಂದ ರೈತರ ಬದುಕು ಬದಲಾಗಿದೆ. ಹಾಲಿನ ಉತ್ಪನ್ನ ದೊಡ್ಡ ಪ್ರಮಾಣ ಹೆಚ್ಚಾಗಿದೆ. ರೈತರಿಗೆ ಆರ್ಥಿಕವಾಗಿ ಶಕ್ತಿ ತುಂಬಿದೆ. 40 ಸಾವಿರ ಜನರು ಸೋಲಾರ್ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಕಾಶಿ ಸುತ್ತಮುತ್ತಲಿನ ಸಾರಿಗೆ ಸಂಪರ್ಕ ಹೆಚ್ಚಿಸಿರುವುದು ಆರ್ಥಿಕತೆಗೆ ದೊಡ್ಡ ಶಕ್ತಿ ಸಿಕ್ಕಿದೆ ಎಂದು ಹೇಳಿದರು.
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ

ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…

3 hours ago

ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ

ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…

3 hours ago

ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ

ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…

5 hours ago

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು

ಕ್ಯಾನ್ಸರ್‌ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ…

5 hours ago

ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ

ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ…

5 hours ago

2025ರ ನಾಗರಪಂಚಮಿಯಲ್ಲಿ ಈ ರಾಶಿಗಳಿಗೆ ಅದೃಷ್ಟ! :ನಾಗದೇವರ ಕೃಪೆಗಾಗಿ ಹೀಗೆ ಮಾಡಿ…

ನಾಗರಪಂಚಮಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.…

10 hours ago