Advertisement
MIRROR FOCUS

ವಿಶ್ವದ ಪ್ರತಿ ಡೈನಿಂಗ್ ಟೇಬಲ್ ಮೇಲೆ ಭಾರತದ ಒಂದಲ್ಲ ಒಂದು ಉತ್ಪನ್ನ ಇರಬೇಕು | ಕಿಸಾನ್ ಸಮ್ಮಾನ್ ಯೋಜನೆಯಡಿ 20 ಸಾವಿರ ಕೋಟಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ |

Share

ಎಂದಿನಂತೆ ಈ ಬಾರಿಯೂ ಕಿಸಾನ್ ನಿಧಿಯನ್ನು (PM-Kisan Samman Nidhi) ಪ್ರಧಾನಿ ಮೋದಿ ರಿಲೀಸ್ ಮಾಡಿದ್ದಾರೆ. ದೇಶದ ಒಟ್ಟು 9.26 ಕೋಟಿ ರೈತರ(Farmer) ಖಾತೆಗಳಿಗೆ(Account) 20 ಸಾವಿರ ಕೋಟಿ  ಬಿಡುಗಡೆ ಮಾಡಿದರು. ಮೂರನೇ ಬಾರಿಗೆ ಪ್ರಧಾನಿಯಾದ ನಂತರ ಪಿಎಂ ಕಿಸಾನ್ ನಿಧಿಗೆ ಸಂಬಂಧಿಸಿದ ಕಡತಕ್ಕೆ ಮೋದಿ (Narendra Modi) ಮೊದಲ ಸಹಿ ಹಾಕಿದ್ರು. ಇಂದು ಸ್ವಕ್ಷೇತ್ರದಲ್ಲಿ ನಡೆದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ, ಕೃಷಿ ಸಖಿಯರಾಗಿ ತರಬೇತಿ ಹೊಂದಿದ ಸ್ವಯಂ ಸಹಾಯಕ ತಂಡಗಳ ಮಹಿಳೆಯರಿಗೆ(Women) ಮೋದಿ ಪ್ರಮಾಣಪತ್ರ ವಿತರಿಸಿದರು. ಬಳಿಕ ವಾರಣಾಸಿಯ ದಶಾಶ್ವಮೇಧ ಘಾಟ್‍ನಲ್ಲಿ ನಡೆಯುವ ಗಂಗಾರತಿಯಲ್ಲಿ ಪ್ರಧಾನಿ ಮೋದಿ ಭಾಗಿಯಾದರು.

ಇದೇ ವೇಳೆ ವಾರಣಾಸಿಯಲ್ಲಿ ನಡೆದ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ಮೂರನೇ ಅವಧಿಯಲ್ಲಿ ರೈತರು ಮತ್ತು ಬಡವರಿಗೆ ಸಂಬಂಧಿಸಿದ ಮೊದಲ ನಿರ್ಧಾರ ತೆಗೆದುಕೊಂಡಿದ್ದೇನೆ. ದೇಶದಲ್ಲಿ ಬಡವರಿಗಾಗಿ ಮೂರು ಕೋಟಿ ಮನೆ ನಿರ್ಮಾಣ ಮಾಡುವ ಗುರಿ ಇದೆ. ಕಿಸಾನ್ ಸಮ್ಮಾನ್ ನಿಧಿ ಮುಂದುವರಿಸಲು ನಿರ್ಧಾರ ಕೈಗೊಂಡಿದ್ದೇವೆ. ಈ ಯೋಜನೆಯು ಕೋಟ್ಯಂತರ ಜನರಿಗೆ ಲಾಭ ಮಾಡಲಿದೆ. ಇಂದು ಕೋಟ್ಯಂತರ ರೈತರು ನಮ್ಮ ಜೊತೆಗೆ ಸೇರಿದ್ದಾರೆ. ಕಿಸಾನ್ ಸಮ್ಮಾನ್ ನಿಧಿ ವಿಶ್ವದ ಅತಿದೊಡ್ಡ ಡಿಬಿಟಿ ಯೋಜನೆಯಾಗಿದೆ. ತಂತ್ರಜ್ಞಾನ ಬಳಸಿಕೊಂಡು ಫಲಾನುಭವಿಗೆ ನೇರ ಸರ್ಕಾರದ ಯೋಜನೆ ತಲುಪಿಸುತ್ತಿದೆ. ಯೋಜನೆಗೆ ಸೇರಲು ನಿಯಮಗಳನ್ನು ಇನ್ನಷ್ಟು ಸಡಿಲಿಸಲಾಗಿದೆ. ಕೃಷಿಯಲ್ಲಿ ನಾವು ಇನ್ನಷ್ಟು ಸ್ವಾವಲಂಬಿಯಾಗಬೇಕಿದೆ ಎಂದು ಹೇಳಿದರು. ಭಾರತದ ಹಲವಾರು ತರಕಾರಿ ವಿದೇಶಿ ಮಾರುಕಟ್ಟೆ ತಲುಪುತ್ತಿದೆ. ಒಂದು ಜಿಲ್ಲೆ, ಒಂದು ಉತ್ಪನ್ನ ಯೋಜನೆಯಿಂದ ರಫ್ತು ಹೆಚ್ಚುತ್ತಿದೆ. ವಿಶ್ವದ ಪ್ರತಿ ಡೈನಿಂಗ್ ಟೇಬಲ್ ಮೇಲೆ ಭಾರತದ ಒಂದಲ್ಲ ಒಂದು ಉತ್ಪನ್ನ ಇರಬೇಕು ಎನ್ನುವುದು ನನ್ನ ಗುರಿ ಎಂದು ಅವರು ತಿಳಿಸಿದರು.

ಕೃಷಿ ಸಖಿ ಯೋಜನೆ ಮೂಲಕ ಮಹಿಳೆಯರನ್ನು ಕೃಷಿಯಲ್ಲಿ ಗುರುತಿಸಲಾಗುವುದು. ಇದು ಲಕ್ ಪತಿ ದೀದಿಯನ್ನಾಗಿಸಲು ಅನುಕೂಲವಾಗಲಿದೆ. ಡೈರಿಗಳ ನಿರ್ಮಾಣದಿಂದ ರೈತರ ಬದುಕು ಬದಲಾಗಿದೆ. ಹಾಲಿನ ಉತ್ಪನ್ನ ದೊಡ್ಡ ಪ್ರಮಾಣ ಹೆಚ್ಚಾಗಿದೆ. ರೈತರಿಗೆ ಆರ್ಥಿಕವಾಗಿ ಶಕ್ತಿ ತುಂಬಿದೆ. 40 ಸಾವಿರ ಜನರು ಸೋಲಾರ್ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಕಾಶಿ ಸುತ್ತಮುತ್ತಲಿನ ಸಾರಿಗೆ ಸಂಪರ್ಕ ಹೆಚ್ಚಿಸಿರುವುದು ಆರ್ಥಿಕತೆಗೆ ದೊಡ್ಡ ಶಕ್ತಿ ಸಿಕ್ಕಿದೆ ಎಂದು ಹೇಳಿದರು.
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

2 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

3 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

5 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

16 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

19 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

1 day ago