Advertisement
MIRROR FOCUS

ವಿಶ್ವದ ಪ್ರತಿ ಡೈನಿಂಗ್ ಟೇಬಲ್ ಮೇಲೆ ಭಾರತದ ಒಂದಲ್ಲ ಒಂದು ಉತ್ಪನ್ನ ಇರಬೇಕು | ಕಿಸಾನ್ ಸಮ್ಮಾನ್ ಯೋಜನೆಯಡಿ 20 ಸಾವಿರ ಕೋಟಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ |

Share

ಎಂದಿನಂತೆ ಈ ಬಾರಿಯೂ ಕಿಸಾನ್ ನಿಧಿಯನ್ನು (PM-Kisan Samman Nidhi) ಪ್ರಧಾನಿ ಮೋದಿ ರಿಲೀಸ್ ಮಾಡಿದ್ದಾರೆ. ದೇಶದ ಒಟ್ಟು 9.26 ಕೋಟಿ ರೈತರ(Farmer) ಖಾತೆಗಳಿಗೆ(Account) 20 ಸಾವಿರ ಕೋಟಿ  ಬಿಡುಗಡೆ ಮಾಡಿದರು. ಮೂರನೇ ಬಾರಿಗೆ ಪ್ರಧಾನಿಯಾದ ನಂತರ ಪಿಎಂ ಕಿಸಾನ್ ನಿಧಿಗೆ ಸಂಬಂಧಿಸಿದ ಕಡತಕ್ಕೆ ಮೋದಿ (Narendra Modi) ಮೊದಲ ಸಹಿ ಹಾಕಿದ್ರು. ಇಂದು ಸ್ವಕ್ಷೇತ್ರದಲ್ಲಿ ನಡೆದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ, ಕೃಷಿ ಸಖಿಯರಾಗಿ ತರಬೇತಿ ಹೊಂದಿದ ಸ್ವಯಂ ಸಹಾಯಕ ತಂಡಗಳ ಮಹಿಳೆಯರಿಗೆ(Women) ಮೋದಿ ಪ್ರಮಾಣಪತ್ರ ವಿತರಿಸಿದರು. ಬಳಿಕ ವಾರಣಾಸಿಯ ದಶಾಶ್ವಮೇಧ ಘಾಟ್‍ನಲ್ಲಿ ನಡೆಯುವ ಗಂಗಾರತಿಯಲ್ಲಿ ಪ್ರಧಾನಿ ಮೋದಿ ಭಾಗಿಯಾದರು.

ಇದೇ ವೇಳೆ ವಾರಣಾಸಿಯಲ್ಲಿ ನಡೆದ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ಮೂರನೇ ಅವಧಿಯಲ್ಲಿ ರೈತರು ಮತ್ತು ಬಡವರಿಗೆ ಸಂಬಂಧಿಸಿದ ಮೊದಲ ನಿರ್ಧಾರ ತೆಗೆದುಕೊಂಡಿದ್ದೇನೆ. ದೇಶದಲ್ಲಿ ಬಡವರಿಗಾಗಿ ಮೂರು ಕೋಟಿ ಮನೆ ನಿರ್ಮಾಣ ಮಾಡುವ ಗುರಿ ಇದೆ. ಕಿಸಾನ್ ಸಮ್ಮಾನ್ ನಿಧಿ ಮುಂದುವರಿಸಲು ನಿರ್ಧಾರ ಕೈಗೊಂಡಿದ್ದೇವೆ. ಈ ಯೋಜನೆಯು ಕೋಟ್ಯಂತರ ಜನರಿಗೆ ಲಾಭ ಮಾಡಲಿದೆ. ಇಂದು ಕೋಟ್ಯಂತರ ರೈತರು ನಮ್ಮ ಜೊತೆಗೆ ಸೇರಿದ್ದಾರೆ. ಕಿಸಾನ್ ಸಮ್ಮಾನ್ ನಿಧಿ ವಿಶ್ವದ ಅತಿದೊಡ್ಡ ಡಿಬಿಟಿ ಯೋಜನೆಯಾಗಿದೆ. ತಂತ್ರಜ್ಞಾನ ಬಳಸಿಕೊಂಡು ಫಲಾನುಭವಿಗೆ ನೇರ ಸರ್ಕಾರದ ಯೋಜನೆ ತಲುಪಿಸುತ್ತಿದೆ. ಯೋಜನೆಗೆ ಸೇರಲು ನಿಯಮಗಳನ್ನು ಇನ್ನಷ್ಟು ಸಡಿಲಿಸಲಾಗಿದೆ. ಕೃಷಿಯಲ್ಲಿ ನಾವು ಇನ್ನಷ್ಟು ಸ್ವಾವಲಂಬಿಯಾಗಬೇಕಿದೆ ಎಂದು ಹೇಳಿದರು. ಭಾರತದ ಹಲವಾರು ತರಕಾರಿ ವಿದೇಶಿ ಮಾರುಕಟ್ಟೆ ತಲುಪುತ್ತಿದೆ. ಒಂದು ಜಿಲ್ಲೆ, ಒಂದು ಉತ್ಪನ್ನ ಯೋಜನೆಯಿಂದ ರಫ್ತು ಹೆಚ್ಚುತ್ತಿದೆ. ವಿಶ್ವದ ಪ್ರತಿ ಡೈನಿಂಗ್ ಟೇಬಲ್ ಮೇಲೆ ಭಾರತದ ಒಂದಲ್ಲ ಒಂದು ಉತ್ಪನ್ನ ಇರಬೇಕು ಎನ್ನುವುದು ನನ್ನ ಗುರಿ ಎಂದು ಅವರು ತಿಳಿಸಿದರು.

ಕೃಷಿ ಸಖಿ ಯೋಜನೆ ಮೂಲಕ ಮಹಿಳೆಯರನ್ನು ಕೃಷಿಯಲ್ಲಿ ಗುರುತಿಸಲಾಗುವುದು. ಇದು ಲಕ್ ಪತಿ ದೀದಿಯನ್ನಾಗಿಸಲು ಅನುಕೂಲವಾಗಲಿದೆ. ಡೈರಿಗಳ ನಿರ್ಮಾಣದಿಂದ ರೈತರ ಬದುಕು ಬದಲಾಗಿದೆ. ಹಾಲಿನ ಉತ್ಪನ್ನ ದೊಡ್ಡ ಪ್ರಮಾಣ ಹೆಚ್ಚಾಗಿದೆ. ರೈತರಿಗೆ ಆರ್ಥಿಕವಾಗಿ ಶಕ್ತಿ ತುಂಬಿದೆ. 40 ಸಾವಿರ ಜನರು ಸೋಲಾರ್ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಕಾಶಿ ಸುತ್ತಮುತ್ತಲಿನ ಸಾರಿಗೆ ಸಂಪರ್ಕ ಹೆಚ್ಚಿಸಿರುವುದು ಆರ್ಥಿಕತೆಗೆ ದೊಡ್ಡ ಶಕ್ತಿ ಸಿಕ್ಕಿದೆ ಎಂದು ಹೇಳಿದರು.
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

8 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

8 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago