Advertisement
MIRROR FOCUS

ವಿಶ್ವದ ಪ್ರತಿ ಡೈನಿಂಗ್ ಟೇಬಲ್ ಮೇಲೆ ಭಾರತದ ಒಂದಲ್ಲ ಒಂದು ಉತ್ಪನ್ನ ಇರಬೇಕು | ಕಿಸಾನ್ ಸಮ್ಮಾನ್ ಯೋಜನೆಯಡಿ 20 ಸಾವಿರ ಕೋಟಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ |

Share

ಎಂದಿನಂತೆ ಈ ಬಾರಿಯೂ ಕಿಸಾನ್ ನಿಧಿಯನ್ನು (PM-Kisan Samman Nidhi) ಪ್ರಧಾನಿ ಮೋದಿ ರಿಲೀಸ್ ಮಾಡಿದ್ದಾರೆ. ದೇಶದ ಒಟ್ಟು 9.26 ಕೋಟಿ ರೈತರ(Farmer) ಖಾತೆಗಳಿಗೆ(Account) 20 ಸಾವಿರ ಕೋಟಿ  ಬಿಡುಗಡೆ ಮಾಡಿದರು. ಮೂರನೇ ಬಾರಿಗೆ ಪ್ರಧಾನಿಯಾದ ನಂತರ ಪಿಎಂ ಕಿಸಾನ್ ನಿಧಿಗೆ ಸಂಬಂಧಿಸಿದ ಕಡತಕ್ಕೆ ಮೋದಿ (Narendra Modi) ಮೊದಲ ಸಹಿ ಹಾಕಿದ್ರು. ಇಂದು ಸ್ವಕ್ಷೇತ್ರದಲ್ಲಿ ನಡೆದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ, ಕೃಷಿ ಸಖಿಯರಾಗಿ ತರಬೇತಿ ಹೊಂದಿದ ಸ್ವಯಂ ಸಹಾಯಕ ತಂಡಗಳ ಮಹಿಳೆಯರಿಗೆ(Women) ಮೋದಿ ಪ್ರಮಾಣಪತ್ರ ವಿತರಿಸಿದರು. ಬಳಿಕ ವಾರಣಾಸಿಯ ದಶಾಶ್ವಮೇಧ ಘಾಟ್‍ನಲ್ಲಿ ನಡೆಯುವ ಗಂಗಾರತಿಯಲ್ಲಿ ಪ್ರಧಾನಿ ಮೋದಿ ಭಾಗಿಯಾದರು.

ಇದೇ ವೇಳೆ ವಾರಣಾಸಿಯಲ್ಲಿ ನಡೆದ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ಮೂರನೇ ಅವಧಿಯಲ್ಲಿ ರೈತರು ಮತ್ತು ಬಡವರಿಗೆ ಸಂಬಂಧಿಸಿದ ಮೊದಲ ನಿರ್ಧಾರ ತೆಗೆದುಕೊಂಡಿದ್ದೇನೆ. ದೇಶದಲ್ಲಿ ಬಡವರಿಗಾಗಿ ಮೂರು ಕೋಟಿ ಮನೆ ನಿರ್ಮಾಣ ಮಾಡುವ ಗುರಿ ಇದೆ. ಕಿಸಾನ್ ಸಮ್ಮಾನ್ ನಿಧಿ ಮುಂದುವರಿಸಲು ನಿರ್ಧಾರ ಕೈಗೊಂಡಿದ್ದೇವೆ. ಈ ಯೋಜನೆಯು ಕೋಟ್ಯಂತರ ಜನರಿಗೆ ಲಾಭ ಮಾಡಲಿದೆ. ಇಂದು ಕೋಟ್ಯಂತರ ರೈತರು ನಮ್ಮ ಜೊತೆಗೆ ಸೇರಿದ್ದಾರೆ. ಕಿಸಾನ್ ಸಮ್ಮಾನ್ ನಿಧಿ ವಿಶ್ವದ ಅತಿದೊಡ್ಡ ಡಿಬಿಟಿ ಯೋಜನೆಯಾಗಿದೆ. ತಂತ್ರಜ್ಞಾನ ಬಳಸಿಕೊಂಡು ಫಲಾನುಭವಿಗೆ ನೇರ ಸರ್ಕಾರದ ಯೋಜನೆ ತಲುಪಿಸುತ್ತಿದೆ. ಯೋಜನೆಗೆ ಸೇರಲು ನಿಯಮಗಳನ್ನು ಇನ್ನಷ್ಟು ಸಡಿಲಿಸಲಾಗಿದೆ. ಕೃಷಿಯಲ್ಲಿ ನಾವು ಇನ್ನಷ್ಟು ಸ್ವಾವಲಂಬಿಯಾಗಬೇಕಿದೆ ಎಂದು ಹೇಳಿದರು. ಭಾರತದ ಹಲವಾರು ತರಕಾರಿ ವಿದೇಶಿ ಮಾರುಕಟ್ಟೆ ತಲುಪುತ್ತಿದೆ. ಒಂದು ಜಿಲ್ಲೆ, ಒಂದು ಉತ್ಪನ್ನ ಯೋಜನೆಯಿಂದ ರಫ್ತು ಹೆಚ್ಚುತ್ತಿದೆ. ವಿಶ್ವದ ಪ್ರತಿ ಡೈನಿಂಗ್ ಟೇಬಲ್ ಮೇಲೆ ಭಾರತದ ಒಂದಲ್ಲ ಒಂದು ಉತ್ಪನ್ನ ಇರಬೇಕು ಎನ್ನುವುದು ನನ್ನ ಗುರಿ ಎಂದು ಅವರು ತಿಳಿಸಿದರು.

ಕೃಷಿ ಸಖಿ ಯೋಜನೆ ಮೂಲಕ ಮಹಿಳೆಯರನ್ನು ಕೃಷಿಯಲ್ಲಿ ಗುರುತಿಸಲಾಗುವುದು. ಇದು ಲಕ್ ಪತಿ ದೀದಿಯನ್ನಾಗಿಸಲು ಅನುಕೂಲವಾಗಲಿದೆ. ಡೈರಿಗಳ ನಿರ್ಮಾಣದಿಂದ ರೈತರ ಬದುಕು ಬದಲಾಗಿದೆ. ಹಾಲಿನ ಉತ್ಪನ್ನ ದೊಡ್ಡ ಪ್ರಮಾಣ ಹೆಚ್ಚಾಗಿದೆ. ರೈತರಿಗೆ ಆರ್ಥಿಕವಾಗಿ ಶಕ್ತಿ ತುಂಬಿದೆ. 40 ಸಾವಿರ ಜನರು ಸೋಲಾರ್ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಕಾಶಿ ಸುತ್ತಮುತ್ತಲಿನ ಸಾರಿಗೆ ಸಂಪರ್ಕ ಹೆಚ್ಚಿಸಿರುವುದು ಆರ್ಥಿಕತೆಗೆ ದೊಡ್ಡ ಶಕ್ತಿ ಸಿಕ್ಕಿದೆ ಎಂದು ಹೇಳಿದರು.
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

2 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

21 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago