ಲೋಕ ಸಮರದ ಜಿದ್ದಾ ಜಿದ್ದಿನಲ್ಲಿ ಅಭ್ಯರ್ಥಿಗಳಿಗಿಂತ(Candidate) ಹೆಚ್ಚು ಸ್ಟಾರ್ ಪ್ರಚಾರಕರಿಗೇ(Star Campaigner) ಡಿಮ್ಯಾಂಡ್ ಜಾಸ್ತಿ. ಅದರಲ್ಲೂ ಪ್ರಧಾನಿ ಮೋದಿ(PM Modi) ವಿರುದ್ಧ ವಿರೋಧ ಪಕ್ಷಗಳ ಅಭ್ಯರ್ಥಿಗಳು, ನಾಯಕರುಗಳು(Leaders) ಟೀಕೆ ಮಾಡಲು ಕಾಯುತ್ತಿರುತ್ತಾರೆ. ಇದೀಗ ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ ಕರ್ನಾಟಕಕ್ಕೆ(Karnataka) ಭೇಟಿ ನೀಡಲಿದ್ದಾರೆ. ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿಗೆ ಬೆಂಗಳೂರು ಉತ್ತರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜೀವ್ ಗೌಡ (Rajeev Gowda) ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.
15 ನೇ ಹಣಕಾಸು ಆಯೋಗದ ರಿಪೋರ್ಟ್ ಏನಿದೆ? ಕರ್ನಾಟಕಕ್ಕೆ 5,400 ಕೋಟಿ ಶಿಫಾರಸು ಮಾಡಿತ್ತು. ಅದರ ಬಗ್ಗೆ ಯಾಕೆ ಚಕಾರವಿಲ್ಲ. ಇಂಪ್ಲಿಮೆಂಟ್ ಮಾಡ್ತೇವೆ ಅಂದವರು ಯಾಕೆ ಮಾಡಿಲ್ಲ? ಫೈನಾನ್ಸ್ ಕಮಿಷನ್ ರೆಕಮೆಂಡೇಷನ್ ಮಾಡಿತ್ತು. ಯಾಕೆ ಹಣವನ್ನ ನಮಗೆ ಬಿಡುಗಡೆ ಮಾಡಿಲ್ಲ? ಪೆರಿಪೆರಲ್ ರಿಂಗ್ ರಸ್ತೆಗೆ ಹಣ ಯಾಕೆ ಕೊಟ್ಟಿಲ್ಲ. ಪ್ರಧಾನಿ, ಸಬರಬನ್ ರೈಲು ಉದ್ಘಾಟಿಸಿದರು. 40 ತಿಂಗಳಲ್ಲಿ ಯೋಜನೆ ಪೂರ್ಣ ಎಂದಿದ್ರಿ. ಈಗ 20 ತಿಂಗಳಾಯ್ತು, ಎಲ್ಲಿ ಹೋಯ್ತು ಯೋಜನೆ? ಬರ ಪರಿಹಾರದ ಬಗ್ಗೆ ಗಮನವೇ ಕೊಟ್ಟಿಲ್ಲ. 223 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹೆಚ್ಚಿದೆ. ಗ್ರಾಮೀಣ ಭಾಗದ ಜನ ಸಂಕಷ್ಟದಲ್ಲಿದ್ದಾರೆ. ಇಲ್ಲಿಯವರೆಗೆ ಪರಿಹಾರದ ಹಣ ಕೊಟ್ಟಿಲ್ಲ ಎಂದು ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ನಾ ಕಾವೂಂಗಾ ನಾ ಕಾನೇ ದೂಂಗಾ ಅಂತೀರ. ನಮ್ಮ ಎಂಪಿಯೊಬ್ಬರ ಮೇಲೆ ಇಡಿ ಕೇಸ್ ಇದೆ. ಅವರನ್ನ ಯಾಕೆ ಸಚಿವ ಸಂಪುಟಕ್ಕೆ ತೆಗೆದುಕೊಂಡ್ರಿ. ಶೋಭಾ ಅವರ ಮೇಲೆ 44 ಕೋಟಿ ರೂ. ಆರೋಪವಿದೆ. ಅವರನ್ನ ಹೇಗೆ ಸಚಿವೆಯನ್ನಾಗಿ ಮಾಡಿದ್ರಿ. ಇದು ನ್ಯಾಯಕ್ಕೆ ವಿರುದ್ಧವಾದುದು. ಶೋಭಾ ಕರಂದ್ಲಾಜೆ ಅವರನ್ನ ತಕ್ಷಣ ಕೆಳಗಿಳಿಸಿ, ಎಲೆಕ್ಟ್ರೋ ಬಾಂಡ್ನಲ್ಲಿ ದೊಡ್ಡ ಭ್ರಷ್ಟಾಚಾರ ಆಗಿದೆ. ಇಡಿ ರೇಡ್ ಮಾಡಿಸ್ತೀರ. ನಂತರ ಹಣವನ್ನ ಕಲೆಕ್ಟ್ ಮಾಡ್ತೀರ. ಭ್ರಷ್ಟಾಚಾರ ಅಂದ್ರೆ ಮೋದಿ ಸರ್ಕಾರ ಬರುತ್ತೆ. ನಮ್ಮ ರಾಜ್ಯಕ್ಕೆ ಬಂದಾಗ ಉತ್ತರ ಕೊಡಬೇಕು ಎಂದು ಟಾಂಗ್ ಕೊಟ್ಟಿದ್ದಾರೆ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…