Advertisement
ಪ್ರಮುಖ

#Yashobhoomi | ಜನ್ಮ ದಿನದ ಅಂಗವಾಗಿ ದೆಹಲಿಯಲ್ಲಿ ಯಶೋಭೂಮಿ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ | ವಿಶ್ವದರ್ಜೆಯ ಪ್ರದರ್ಶನ ಕೇಂದ್ರದ ಉದ್ಘಾಟನೆ

Share

ಇಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನ. ನಾಡಿನಾದ್ಯಂತ ಭಾರತೀಯರು ವಿಶೇಷ ರೀತಿಯಲ್ಲಿ ಪ್ರಧಾನಿಯವರ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ. ಅನೇಕರು ಮೋದಿಯವರಿಗೆ ಜನ್ಮ ದಿನದ ಶುಭಾಶಯಗಳನ್ನು ರವಾನಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ 73ನೇ ಜನ್ಮದಿನದ ಪ್ರಯುಕ್ತ ವಿಶ್ವದರ್ಜೆಯ ಪ್ರದರ್ಶನ ಕೇಂದ್ರದ ಉದ್ಘಾಟನೆಯನ್ನು ಪ್ರಧಾನಿಯವರು ಮಾಡಿದ್ದಾರೆ. ರಾಷ್ಟ್ರರಾಜಧಾನಿಯ ದ್ವಾರಕಾ ಪ್ರದೇಶದಲ್ಲಿ ಪ್ರಧಾನಿಯವರು ತಮ್ಮ ಜನ್ಮದಿನದಂದು ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಎಕ್ಸ್​ಪೋ ಸೆಂಟರ್​ನ ಮೊದಲ ಹಂತವನ್ನು ಉದ್ಘಾಟಿಸಿದ್ದಾರೆ. ಯಶೋಭೂಮಿ ಎಂದು ಕರೆಯಲಾಗುವ ಈ ಎಕ್ಸ್​ಪೋ ಸೆಂಟರ್ಗೆ ಎಕ್ಸ್​ಪ್ರೆಸ್​ವೆ ಕನೆಕ್ಟಿವಿಟಿ ಕೂಡ ನೀಡಲಾಗಿದೆ.

ದ್ವಾರಕಾ ಸೆಕ್ಟರ್ 21ನಲ್ಲಿರುವ ಏರ್ಪೋರ್ಟ್, ಮೆಟ್ರೋ ಎಕ್ಸ್​ಪ್ರೆಸ್ ಲೈನ್ ಅನ್ನು ಯಶೋಭೂಮಿ ಮೆಟ್ರೋ ಸ್ಟೇಷನ್​ವರೆಗೂ ವಿಸ್ತರಿಸಲಾಗಿದೆ. ಯಶೋಭೂಮಿ ಮೆಟ್ರೋಸ್ಟೇಷನ್ ಸ್ಥಳವು ದ್ವಾರಕಾ ಸೆಕ್ಟರ್ 25ರಲ್ಲಿ ಇದೆ. ನರೇಂದ್ರ ಮೋದಿ ಅವರು ಏರ್​ಪೋರ್ಟ್ ಲೈನ್ ವಿಸ್ತರಣೆಗೆ ಚಾಲನೆ ಕೊಟ್ಟ ಬಳಿಕ ಮೆಟ್ರೋ ರೈಲಿನಲ್ಲಿ ಸಾಮಾನ್ಯ ಜನರ ಜೊತೆ ಕುಳಿತು ಪ್ರಯಾಣಿಸಿದರು.

ಯಶೋಭೂಮಿ ವಿಶೇಷತೆಗಳೇನು?

  • ಯಶೋಭೂಮಿ ಎಂಬುದು ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಅಂಡ್ ಎಕ್ಸ್​ಪೋ ಸೆಂಟರ್ (ಐಐಸಿಸಿ). ಅಂತಾರಾಷ್ಟ್ರೀಯ ಸಭೆ, ಸಮಾರಂಭ, ಪ್ರದರ್ಶನಗಳನ್ನು ಆಯೋಜಿಸಲು ಇರುವ ಬೃಹತ್ ಕೇಂದ್ರವಾಗಿದೆ. ಇಂಥ ಸೌಲಭ್ಯ ಹೊಂದಿರುವ ವಿಶ್ವದ ಬೃಹತ್ ಕಟ್ಟಡಗಳ ಪೈಕಿ ಯಶೋಭೂಮಿ ಒಂದೆನಿಸಿದೆ.
  • ಯಶೋಭೂಮಿಯ ಒಟ್ಟು ಯೋಜನಾ ಸ್ಥಳ ಬರೋಬ್ಬರಿ 8.9 ಲಕ್ಷ ಚದರ ಮೀಟರ್ ವಿಸ್ತೀರ್ಣದ್ದಾಗಿದೆ. ಇದರಲ್ಲಿ ಕಟ್ಟಡ ನಿರ್ಮಾಣ ಪ್ರದೇಶ 1.8 ಲಕ್ಷ ಚದರ ಮೀಟರ್ ವಿಸ್ತೀರಣದ್ದಾಗಿದೆ.
  • ಯಶೋಭೂಮಿ ನಿರ್ಮಾಣಕ್ಕೆ ಅಂದಾಜು 5,000 ಕೋಟಿ ರುಪಾಯಿಗೂ ಹೆಚ್ಚು ವೆಚ್ಚವಾಗುತ್ತಿದೆ.
  • ಯಶೋಭೂಮಿಯ ಕನ್ವೆನ್ಷನ್ ಸೆಂಟರ್ ಅನ್ನು 73,000 ಚದರ ಮೀಟರ್ ಜಾಗದಲ್ಲಿ ನಿರ್ಮಿಸಲಾಗಿದೆ. ಇದರಲ್ಲಿ ಮುಖ್ಯ ಆಡಿಟೋರಿಯಂ, 13 ಮೀಟಿಂಗ್ ರೂಮ್ ಸೇರಿದಂತೆ 15 ಕನ್ವೆನ್ಷನ್ ರೂಮ್​ಗಳು ಒಳಗೊಂಡಿವೆ.
  • ಯಶೋಭೂಮಿಯಲ್ಲಿ ಪರಿಸರಸ್ನೇಹಿ ಎನಿಸುವ ಹಲವು ಫೀಚರ್​ಗಳಿವೆ. ತ್ಯಾಜ್ಯನೀರು ನಿರ್ವಹಣೆ ವ್ಯವಸ್ಥೆ ಇದೆ. ಮಳೆನೀರು ಸಂಗ್ರಹಿಸುವ ವ್ಯವಸ್ಥೆ ಇದೆ. ಮೇಲ್ಚಾವಣಿ ಸೌರ ಫಲಕಗಳಿವೆ. ಈ ಕಟ್ಟಡಗಳ ಸಂಕೀರ್ಣಕ್ಕೆ ಇಂಡಿಯನ್ ಗ್ರೀನ್ ಬಿಲ್ಡಿಂಗ್ ಕೌನ್ಸಿಲ್​ನಿಂದ ಅತ್ಯುಚ್ಚವೆನಿಸುವ ಪ್ಲಾಟಿನಂ ಪ್ರಮಾಣಪತ್ರ ಕೊಡಲಾಗಿದೆ.
  • ಯಶೋಭೂಮಿ ಸಂಕೀರ್ಣದಲ್ಲಿರುವ ಪ್ರಮುಖ ಆಡಿಟೋರಿಯಂ ಅಥವಾ ಸಭಾಂಗಣವನ್ನು ವಿಶೇಷವಾಗಿ ನಿರ್ಮಿಸಲಾಗಿದೆ. ಶಬ್ದದ ನಿರ್ವಹಣೆ ಉತ್ತಮವಾಗಿರುವಂತೆ ನಿರ್ಮಿಸಲಾಗಿದೆ. ವಿಶ್ವದರ್ಜೆ ಮಟ್ಟದ ಆಡಿಟೋರಿಯಂ ಇದಾಗಿದೆ.

Source : Digital Media

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

48 minutes ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

5 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago