ಸೇನೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಣೆ | ಯಾವ ಸೈನಿಕರೊಂದಿಗೆ, ಎಲ್ಲಿ ಮೋದಿ ಸಿಹಿ ಹಂಚಿಕೊಂಡರು..?

November 13, 2023
12:25 PM
ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿಯನ್ನು ಸೈನಿಕರೊಂದಿಗೆ ಆಚರಿಸಲು ಚೀನಾ ಗಡಿಗೆ ಹೊಂದಿಕೊಂಡಿರುವ ಹಿಮಾಚಲ ಪ್ರದೇಶದ ಲೆಪ್ಚಾಗೆ ತೆರಳಿದ್ದಾರೆ.

ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ, ನಮ್ಮ ದೇಶದ ಸಂಸ್ಕೃತಿ ಹಾಗೂ ನಮ್ಮ ದೇಶದ ಸೇನೆಗೆ ಮೊದಲ ಪ್ರಾಶಸ್ತ್ಯ ನೀಡ್ತಾರೆ. ಪ್ರತೀ ವರ್ಷ ಅವರು ದೀಪಾವಳಿ ಹಬ್ಬವನ್ನು ಸೇನೆಯೊಂದಿಗೆ ಆಚರಿಸಿಕೊಳ್ಳುತ್ತಾರೆ. ಅದರಂತೆ ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದೀಪಾವಳಿಯನ್ನು (Deepavali) ಸೈನಿಕರೊಂದಿಗೆ (Soldiers) ಆಚರಿಸಲು ಚೀನಾ (China) ಗಡಿಗೆ ಹೊಂದಿಕೊಂಡಿರುವ ಹಿಮಾಚಲ ಪ್ರದೇಶದ (Himachal Pradesh) ಲೆಪ್ಚಾಗೆ (Lepcha) ತೆರಳಿದ್ದಾರೆ.

Advertisement
Advertisement

ಭಾನುವಾರ ಬೆಳಗ್ಗೆ ದೂರದ ಗ್ರಾಮವನ್ನು ತಲುಪಿದ ಪ್ರಧಾನಿ ಮೋದಿ, ನಮ್ಮ ವೀರ ಭದ್ರತಾ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸಲು ಹಿಮಾಚಲ ಪ್ರದೇಶದ ಲೆಪ್ಚಾವನ್ನು ತಲುಪಿದ್ದೇನೆ ಎಂದು ಎಕ್ಸ್‌ನಲ್ಲಿ (X) ಬರೆದುಕೊಂಡಿದ್ದಾರೆ. ಇದಕ್ಕೂ ಮೊದಲು ಪ್ರಧಾನಿ ಮೋದಿ, ದೇಶದ ಜನರಿಗೆ ಒಳ್ಳೆಯ ಆರೋಗ್ಯ ಲಭಿಸಲಿ ಎಂದು ದೀಪಾವಳಿಯ ಶುಭಾಶಯಗಳನ್ನು ಕೋರಿದ್ದಾರೆ.

ಎಲ್ಲರಿಗೂ ದೀಪಾವಳಿಯ ಶುಭಾಶಯಗಳು. ಈ ವಿಶೇಷ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಒಳ್ಳೆಯ ಆರೋಗ್ಯವನ್ನು ತರಲಿ ಎಂದು ಟ್ವೀಟ್ ಮಾಡುವ ಮೂಲಕ ಜನತೆಗೆ ದೀಪಾವಳಿಯ ಸಂದೇಶವನ್ನು ಸಾರಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಗಡಿ ಕಾಯುವ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸುವ ಸಂಪ್ರದಾಯವನ್ನು ಹಿಂದಿನಿಂದಲೂ ಹೊಂದಿದ್ದಾರೆ. 2014ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ, ಅವರು ಸಶಸ್ತ್ರ ಪಡೆಗಳೊಂದಿಗೆ ಬೆಳಕಿನ ಹಬ್ಬವನ್ನು ಕಳೆಯಲು, ಅವರ ತ್ಯಾಗಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ದೂರದ ಸ್ಥಳಗಳಿಗೆ ಪ್ರಯಾಣಿಸುವುದನ್ನು ರೂಢಿಸಿಕೊಂಡಿದ್ದಾರೆ.

Prime Minister Narendra Modi has gone to Lepcha in Himachal Pradesh bordering China to celebrate Deepavali with soldiers. Reaching a remote village on Sunday morning, PM Modi wrote in X that he reached Lepcha in Himachal Pradesh to celebrate Diwali with our brave security forces. Earlier, Prime Minister Modi wished the people of the country good health on Diwali.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ
May 22, 2025
10:27 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್
May 22, 2025
9:50 PM
by: The Rural Mirror ಸುದ್ದಿಜಾಲ
ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ
May 22, 2025
9:45 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group