MIRROR FOCUS

ಸೇನೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಣೆ | ಯಾವ ಸೈನಿಕರೊಂದಿಗೆ, ಎಲ್ಲಿ ಮೋದಿ ಸಿಹಿ ಹಂಚಿಕೊಂಡರು..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ, ನಮ್ಮ ದೇಶದ ಸಂಸ್ಕೃತಿ ಹಾಗೂ ನಮ್ಮ ದೇಶದ ಸೇನೆಗೆ ಮೊದಲ ಪ್ರಾಶಸ್ತ್ಯ ನೀಡ್ತಾರೆ. ಪ್ರತೀ ವರ್ಷ ಅವರು ದೀಪಾವಳಿ ಹಬ್ಬವನ್ನು ಸೇನೆಯೊಂದಿಗೆ ಆಚರಿಸಿಕೊಳ್ಳುತ್ತಾರೆ. ಅದರಂತೆ ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದೀಪಾವಳಿಯನ್ನು (Deepavali) ಸೈನಿಕರೊಂದಿಗೆ (Soldiers) ಆಚರಿಸಲು ಚೀನಾ (China) ಗಡಿಗೆ ಹೊಂದಿಕೊಂಡಿರುವ ಹಿಮಾಚಲ ಪ್ರದೇಶದ (Himachal Pradesh) ಲೆಪ್ಚಾಗೆ (Lepcha) ತೆರಳಿದ್ದಾರೆ.

Advertisement
Advertisement

ಭಾನುವಾರ ಬೆಳಗ್ಗೆ ದೂರದ ಗ್ರಾಮವನ್ನು ತಲುಪಿದ ಪ್ರಧಾನಿ ಮೋದಿ, ನಮ್ಮ ವೀರ ಭದ್ರತಾ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸಲು ಹಿಮಾಚಲ ಪ್ರದೇಶದ ಲೆಪ್ಚಾವನ್ನು ತಲುಪಿದ್ದೇನೆ ಎಂದು ಎಕ್ಸ್‌ನಲ್ಲಿ (X) ಬರೆದುಕೊಂಡಿದ್ದಾರೆ. ಇದಕ್ಕೂ ಮೊದಲು ಪ್ರಧಾನಿ ಮೋದಿ, ದೇಶದ ಜನರಿಗೆ ಒಳ್ಳೆಯ ಆರೋಗ್ಯ ಲಭಿಸಲಿ ಎಂದು ದೀಪಾವಳಿಯ ಶುಭಾಶಯಗಳನ್ನು ಕೋರಿದ್ದಾರೆ.

ಎಲ್ಲರಿಗೂ ದೀಪಾವಳಿಯ ಶುಭಾಶಯಗಳು. ಈ ವಿಶೇಷ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಒಳ್ಳೆಯ ಆರೋಗ್ಯವನ್ನು ತರಲಿ ಎಂದು ಟ್ವೀಟ್ ಮಾಡುವ ಮೂಲಕ ಜನತೆಗೆ ದೀಪಾವಳಿಯ ಸಂದೇಶವನ್ನು ಸಾರಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಗಡಿ ಕಾಯುವ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸುವ ಸಂಪ್ರದಾಯವನ್ನು ಹಿಂದಿನಿಂದಲೂ ಹೊಂದಿದ್ದಾರೆ. 2014ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ, ಅವರು ಸಶಸ್ತ್ರ ಪಡೆಗಳೊಂದಿಗೆ ಬೆಳಕಿನ ಹಬ್ಬವನ್ನು ಕಳೆಯಲು, ಅವರ ತ್ಯಾಗಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ದೂರದ ಸ್ಥಳಗಳಿಗೆ ಪ್ರಯಾಣಿಸುವುದನ್ನು ರೂಢಿಸಿಕೊಂಡಿದ್ದಾರೆ.

Prime Minister Narendra Modi has gone to Lepcha in Himachal Pradesh bordering China to celebrate Deepavali with soldiers. Reaching a remote village on Sunday morning, PM Modi wrote in X that he reached Lepcha in Himachal Pradesh to celebrate Diwali with our brave security forces. Earlier, Prime Minister Modi wished the people of the country good health on Diwali.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

2 hours ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

3 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

3 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

3 hours ago

ನಾಡಿನೆಲ್ಲೆಡೆ ನಾಗರಪಂಚಮಿ ಸಂಭ್ರಮ | ಸುಬ್ರಹ್ಮಣ್ಯ ಕ್ಷೇತ್ರಗಳಲ್ಲಿ ವಿಶೇಷ ಪೂಜೆ

ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…

3 hours ago

ಕೊಪ್ಪಳ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ | ರಸಗೊಬ್ಬರಕ್ಕೆ ಆತಂಕ ಪಡುವ ಅಗತ್ಯವಿಲ್ಲ

ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…

4 hours ago