Advertisement
MIRROR FOCUS

ಸೇನೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಣೆ | ಯಾವ ಸೈನಿಕರೊಂದಿಗೆ, ಎಲ್ಲಿ ಮೋದಿ ಸಿಹಿ ಹಂಚಿಕೊಂಡರು..?

Share

ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ, ನಮ್ಮ ದೇಶದ ಸಂಸ್ಕೃತಿ ಹಾಗೂ ನಮ್ಮ ದೇಶದ ಸೇನೆಗೆ ಮೊದಲ ಪ್ರಾಶಸ್ತ್ಯ ನೀಡ್ತಾರೆ. ಪ್ರತೀ ವರ್ಷ ಅವರು ದೀಪಾವಳಿ ಹಬ್ಬವನ್ನು ಸೇನೆಯೊಂದಿಗೆ ಆಚರಿಸಿಕೊಳ್ಳುತ್ತಾರೆ. ಅದರಂತೆ ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದೀಪಾವಳಿಯನ್ನು (Deepavali) ಸೈನಿಕರೊಂದಿಗೆ (Soldiers) ಆಚರಿಸಲು ಚೀನಾ (China) ಗಡಿಗೆ ಹೊಂದಿಕೊಂಡಿರುವ ಹಿಮಾಚಲ ಪ್ರದೇಶದ (Himachal Pradesh) ಲೆಪ್ಚಾಗೆ (Lepcha) ತೆರಳಿದ್ದಾರೆ.

ಭಾನುವಾರ ಬೆಳಗ್ಗೆ ದೂರದ ಗ್ರಾಮವನ್ನು ತಲುಪಿದ ಪ್ರಧಾನಿ ಮೋದಿ, ನಮ್ಮ ವೀರ ಭದ್ರತಾ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸಲು ಹಿಮಾಚಲ ಪ್ರದೇಶದ ಲೆಪ್ಚಾವನ್ನು ತಲುಪಿದ್ದೇನೆ ಎಂದು ಎಕ್ಸ್‌ನಲ್ಲಿ (X) ಬರೆದುಕೊಂಡಿದ್ದಾರೆ. ಇದಕ್ಕೂ ಮೊದಲು ಪ್ರಧಾನಿ ಮೋದಿ, ದೇಶದ ಜನರಿಗೆ ಒಳ್ಳೆಯ ಆರೋಗ್ಯ ಲಭಿಸಲಿ ಎಂದು ದೀಪಾವಳಿಯ ಶುಭಾಶಯಗಳನ್ನು ಕೋರಿದ್ದಾರೆ.

ಎಲ್ಲರಿಗೂ ದೀಪಾವಳಿಯ ಶುಭಾಶಯಗಳು. ಈ ವಿಶೇಷ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಒಳ್ಳೆಯ ಆರೋಗ್ಯವನ್ನು ತರಲಿ ಎಂದು ಟ್ವೀಟ್ ಮಾಡುವ ಮೂಲಕ ಜನತೆಗೆ ದೀಪಾವಳಿಯ ಸಂದೇಶವನ್ನು ಸಾರಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಗಡಿ ಕಾಯುವ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸುವ ಸಂಪ್ರದಾಯವನ್ನು ಹಿಂದಿನಿಂದಲೂ ಹೊಂದಿದ್ದಾರೆ. 2014ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ, ಅವರು ಸಶಸ್ತ್ರ ಪಡೆಗಳೊಂದಿಗೆ ಬೆಳಕಿನ ಹಬ್ಬವನ್ನು ಕಳೆಯಲು, ಅವರ ತ್ಯಾಗಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ದೂರದ ಸ್ಥಳಗಳಿಗೆ ಪ್ರಯಾಣಿಸುವುದನ್ನು ರೂಢಿಸಿಕೊಂಡಿದ್ದಾರೆ.

Prime Minister Narendra Modi has gone to Lepcha in Himachal Pradesh bordering China to celebrate Deepavali with soldiers. Reaching a remote village on Sunday morning, PM Modi wrote in X that he reached Lepcha in Himachal Pradesh to celebrate Diwali with our brave security forces. Earlier, Prime Minister Modi wished the people of the country good health on Diwali.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

4 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

10 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

11 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

19 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

21 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

1 day ago