Advertisement
ಸುದ್ದಿಗಳು

ಮೋದಿ 3.0 ಸರ್ಕಾರ ರಚನೆಗೆ ಸಿದ್ಧತೆ | ಖಾತೆ ಹಂಚಿಕೆ ಬಗ್ಗೆ ಚರ್ಚೆ |

Share

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA ಸರ್ಕಾರ ರಚನೆಯ ಪ್ರಯತ್ನಗಳಿಗೆ ಚಾಲನೆ ದೊರೆತಿದೆ. ಈ ನಡುವೆ ಬಿಜೆಪಿಯ ಹಿರಿಯ ನಾಯಕರು ಗುರುವಾರ ಸಮಾಲೋಚನೆ ನಡೆಸಿದರು. ಖಾತೆ ಹಂಚಿಕೆ ಬಗ್ಗೆಯೂ ಕೆಲವು ಸೂತ್ರಗಳ ಬಗ್ಗೆ ಚರ್ಚೆ ನಡೆಸಿದರು ಎಂದು ಮಾಧ್ಯಮ ವರದಿ ತಿಳಿಸಿದೆ.

Advertisement
Advertisement
Advertisement
Advertisement

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ನಿವಾಸದಲ್ಲಿ ಭೇಟಿಯಾದ ಬಿಜೆಪಿ ಹಿರಿಯ ನಾಯಕರು, ಮುಂಬರುವ ಸರ್ಕಾರದಲ್ಲಿ ಮಂತ್ರಿಮಂಡಲ ರಚನೆ, ಖಾತೆಗಳ ಹಂಚಿಕೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಮಾಧ್ಯಮ ಮೂಲಗಳಿಂದ ತಿಳಿದುಬಂದಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಸಚಿವ ಸ್ಥಾನಗಳನ್ನು ಹಂಚಿಕೊಳ್ಳಲು ಸೂತ್ರವೊಂದನ್ನು ರಚಿಸಿಕೊಂಡಿದೆ.  ವರದಿಗಳ ಪ್ರಕಾರ, ಪ್ರತಿ ನಾಲ್ಕು ಸಂಸದರಿಗೆ, ಆ ಪಕ್ಷವು ಒಬ್ಬ ಕ್ಯಾಬಿನೆಟ್ ಮಂತ್ರಿಯನ್ನು ಪಡೆಯುತ್ತದೆ. ಹೀಗಾಗಿ ಟಿಡಿಪಿ 16 ಸಂಸದರನ್ನು ಹೊಂದಿದ್ದರೆ, ಅದು 4 ಕ್ಯಾಬಿನೆಟ್ ಮಂತ್ರಿಗಳನ್ನು ಪಡೆಯುವ ಸಾಧ್ಯತೆಯಿದೆ . 12 ಸಂಸದರನ್ನು ಹೊಂದಿರುವ ಜೆಡಿಯು 3 ಕ್ಯಾಬಿನೆಟ್ ಮಂತ್ರಿಗಳನ್ನು ಪಡೆಯಬಹುದು. 7 ಸಂಸದರನ್ನು ಹೊಂದಿರುವ ಶಿವಸೇನೆ ಎರಡು ಕ್ಯಾಬಿನೆಟ್ ಸಚಿವ ಸ್ಥಾನಗಳನ್ನು ಪಡೆಯಬಹುದು ಮತ್ತು ಐದು ಸಂಸದರನ್ನು ಹೊಂದಿರುವ ಎಲ್‌ಜೆಪಿ ರಾಮ್ ವಿಲಾಸ್ ಅವರು ಒಂದು ಕ್ಯಾಬಿನೆಟ್ ಮಂತ್ರಿಯನ್ನು ಪಡೆಯಬಹುದು ಎಂದು ವರದಿಯಾಗಿದೆ. ಈ ನಡುವೆ, ಗೃಹ, ಹಣಕಾಸು, ರಕ್ಷಣೆ, ವಿದೇಶಾಂಗ ವ್ಯವಹಾರಗಳಂತಹ ದೊಡ್ಡ ಸಚಿವಾಲಯಗಳನ್ನು ತನ್ನೊಂದಿಗೆ ಇರಿಸಿಕೊಳ್ಳಲು ಬಿಜೆಪಿ ನಿರ್ಧರಿಸಿದೆ ಎಂದು ವರದಿಯಾಗಿದೆ.

Advertisement

ಎನ್‌ಡಿಎ ಸರ್ಕಾರದಲ್ಲಿ ಕೃಷಿ ಖಾತೆಯಲ್ಲಿ ತಮ್ಮ ಪಕ್ಷವು ಆಸಕ್ತಿ ಹೊಂದಿದೆ ಎಂದು ಜೆಡಿಎಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುತ್ತಾ ಹೇಳಿದ್ದಾರೆ, ತಮ್ಮ ಪಕ್ಷದ ಆಸಕ್ತಿ ಕೃಷಿ ಇಲಾಖೆಯಲ್ಲಿದೆ ,ಏನು ನಿರ್ಧಾರಗಳು ಆಗುತ್ತವೆ ಎಂಬುದನ್ನು ನೋಡೋಣ, ಮೊದಲಿನಿಂದಲೂ ನಮ್ಮ ಹೋರಾಟ ರೈತ ಸಮುದಾಯಕ್ಕೆ ಒಳಿತಾಗುವ ನಿಟ್ಟಿನಲ್ಲಿದೆ ಎಂದು ಕುಮಾರಸ್ವಾಮಿ ಹೇಳಿದರು.

ಮೂಲಗಳ ಪ್ರಕಾರ ಜೂನ್ 9 ರಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಈ ಮೊದಲು ಜೂನ್ 8 ರಂದು ಸಮಾರಂಭ ನಡೆಯಬೇಕಿತ್ತು ಆದರೆ ಈಗ ಭಾನುವಾರ ಸಂಜೆ 6 ಗಂಟೆಗೆ ನಡೆಯಲಿದೆ ಎಂದೂ ವರದಿಯಾಗಿದೆ. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮತ್ತು ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ಸೇರಿದಂತೆ ವಿಶ್ವ ನಾಯಕರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ,  8,000 ಕ್ಕೂ ಹೆಚ್ಚು ಗಣ್ಯರ ಉಪಸ್ಥಿತಿ ಇರಲಿದೆ ಎಂದು ವರದಿಯಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

15 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago