Advertisement
ಸುದ್ದಿಗಳು

ಮೋದಿ 3.0 ಸರ್ಕಾರ ರಚನೆಗೆ ಸಿದ್ಧತೆ | ಖಾತೆ ಹಂಚಿಕೆ ಬಗ್ಗೆ ಚರ್ಚೆ |

Share

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA ಸರ್ಕಾರ ರಚನೆಯ ಪ್ರಯತ್ನಗಳಿಗೆ ಚಾಲನೆ ದೊರೆತಿದೆ. ಈ ನಡುವೆ ಬಿಜೆಪಿಯ ಹಿರಿಯ ನಾಯಕರು ಗುರುವಾರ ಸಮಾಲೋಚನೆ ನಡೆಸಿದರು. ಖಾತೆ ಹಂಚಿಕೆ ಬಗ್ಗೆಯೂ ಕೆಲವು ಸೂತ್ರಗಳ ಬಗ್ಗೆ ಚರ್ಚೆ ನಡೆಸಿದರು ಎಂದು ಮಾಧ್ಯಮ ವರದಿ ತಿಳಿಸಿದೆ.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ನಿವಾಸದಲ್ಲಿ ಭೇಟಿಯಾದ ಬಿಜೆಪಿ ಹಿರಿಯ ನಾಯಕರು, ಮುಂಬರುವ ಸರ್ಕಾರದಲ್ಲಿ ಮಂತ್ರಿಮಂಡಲ ರಚನೆ, ಖಾತೆಗಳ ಹಂಚಿಕೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಮಾಧ್ಯಮ ಮೂಲಗಳಿಂದ ತಿಳಿದುಬಂದಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಸಚಿವ ಸ್ಥಾನಗಳನ್ನು ಹಂಚಿಕೊಳ್ಳಲು ಸೂತ್ರವೊಂದನ್ನು ರಚಿಸಿಕೊಂಡಿದೆ.  ವರದಿಗಳ ಪ್ರಕಾರ, ಪ್ರತಿ ನಾಲ್ಕು ಸಂಸದರಿಗೆ, ಆ ಪಕ್ಷವು ಒಬ್ಬ ಕ್ಯಾಬಿನೆಟ್ ಮಂತ್ರಿಯನ್ನು ಪಡೆಯುತ್ತದೆ. ಹೀಗಾಗಿ ಟಿಡಿಪಿ 16 ಸಂಸದರನ್ನು ಹೊಂದಿದ್ದರೆ, ಅದು 4 ಕ್ಯಾಬಿನೆಟ್ ಮಂತ್ರಿಗಳನ್ನು ಪಡೆಯುವ ಸಾಧ್ಯತೆಯಿದೆ . 12 ಸಂಸದರನ್ನು ಹೊಂದಿರುವ ಜೆಡಿಯು 3 ಕ್ಯಾಬಿನೆಟ್ ಮಂತ್ರಿಗಳನ್ನು ಪಡೆಯಬಹುದು. 7 ಸಂಸದರನ್ನು ಹೊಂದಿರುವ ಶಿವಸೇನೆ ಎರಡು ಕ್ಯಾಬಿನೆಟ್ ಸಚಿವ ಸ್ಥಾನಗಳನ್ನು ಪಡೆಯಬಹುದು ಮತ್ತು ಐದು ಸಂಸದರನ್ನು ಹೊಂದಿರುವ ಎಲ್‌ಜೆಪಿ ರಾಮ್ ವಿಲಾಸ್ ಅವರು ಒಂದು ಕ್ಯಾಬಿನೆಟ್ ಮಂತ್ರಿಯನ್ನು ಪಡೆಯಬಹುದು ಎಂದು ವರದಿಯಾಗಿದೆ. ಈ ನಡುವೆ, ಗೃಹ, ಹಣಕಾಸು, ರಕ್ಷಣೆ, ವಿದೇಶಾಂಗ ವ್ಯವಹಾರಗಳಂತಹ ದೊಡ್ಡ ಸಚಿವಾಲಯಗಳನ್ನು ತನ್ನೊಂದಿಗೆ ಇರಿಸಿಕೊಳ್ಳಲು ಬಿಜೆಪಿ ನಿರ್ಧರಿಸಿದೆ ಎಂದು ವರದಿಯಾಗಿದೆ.

ಎನ್‌ಡಿಎ ಸರ್ಕಾರದಲ್ಲಿ ಕೃಷಿ ಖಾತೆಯಲ್ಲಿ ತಮ್ಮ ಪಕ್ಷವು ಆಸಕ್ತಿ ಹೊಂದಿದೆ ಎಂದು ಜೆಡಿಎಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುತ್ತಾ ಹೇಳಿದ್ದಾರೆ, ತಮ್ಮ ಪಕ್ಷದ ಆಸಕ್ತಿ ಕೃಷಿ ಇಲಾಖೆಯಲ್ಲಿದೆ ,ಏನು ನಿರ್ಧಾರಗಳು ಆಗುತ್ತವೆ ಎಂಬುದನ್ನು ನೋಡೋಣ, ಮೊದಲಿನಿಂದಲೂ ನಮ್ಮ ಹೋರಾಟ ರೈತ ಸಮುದಾಯಕ್ಕೆ ಒಳಿತಾಗುವ ನಿಟ್ಟಿನಲ್ಲಿದೆ ಎಂದು ಕುಮಾರಸ್ವಾಮಿ ಹೇಳಿದರು.

ಮೂಲಗಳ ಪ್ರಕಾರ ಜೂನ್ 9 ರಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಈ ಮೊದಲು ಜೂನ್ 8 ರಂದು ಸಮಾರಂಭ ನಡೆಯಬೇಕಿತ್ತು ಆದರೆ ಈಗ ಭಾನುವಾರ ಸಂಜೆ 6 ಗಂಟೆಗೆ ನಡೆಯಲಿದೆ ಎಂದೂ ವರದಿಯಾಗಿದೆ. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮತ್ತು ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ಸೇರಿದಂತೆ ವಿಶ್ವ ನಾಯಕರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ,  8,000 ಕ್ಕೂ ಹೆಚ್ಚು ಗಣ್ಯರ ಉಪಸ್ಥಿತಿ ಇರಲಿದೆ ಎಂದು ವರದಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

1 day ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

1 day ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago