ದೊಡ್ಡ ಪ್ರಮಾಣದಲ್ಲಿ ಮೂಲಸೌಲಭ್ಯ ಅಭಿವೃದ್ಧಿಗೆ ಆದ್ಯತೆ | ಸಚಿವ ಅಶ್ವಿನಿ ವೈಷ್ಣವ್

February 16, 2025
2:58 PM
ಕಳೆದೊಂದು ದಶಕದಲ್ಲಿ ಹೊಸದಾಗಿ 390 ವಿಶ್ವವಿದ್ಯಾಲಯಗಳನ್ನು ಆರಂಭಿಸಲಾಗಿದೆ. ಐಐಟಿ, ಐಎಎಂ, ಏಮ್ಸ್ ಮತ್ತು ವೈದ್ಯಕೀಯ ಕಾಲೇಜುಗಳ ಸಂಖ್ಯೆ ದ್ವಿಗುಣಗೊಂಡಿದೆ. ಜಗತ್ತಿನ ಮುಂದುವರಿದ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಅತ್ಯುತ್ತಮ 5 ಜಿ ನೆಟ್ ವರ್ಕ್ ಸೌಲಭ್ಯ ದೊರೆಯುತ್ತಿದೆ. ಜೊತೆಗೆ ಕಡಿಮೆ ದರದಲ್ಲಿ ಡೇಟಾ ದರವಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ದೇಶದಲ್ಲಿ ಕಳೆದ 10 ವರ್ಷಗಳ ಅವಧಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಮೂಲಸೌಲಭ್ಯ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆದ್ಯತೆ ನೀಡಿದೆ. ಈ ಮೂಲಕ ಜನ ಕಲ್ಯಾಣ ಕಾರ್ಯಕ್ರಮಗಳ ಜಾರಿಗೆ ಒತ್ತು ನೀಡಲಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಬೆಂಗಳೂರಿನಲ್ಲಿ ಹೇಳಿದ್ದಾರೆ.

ಕಳೆದೊಂದು ದಶಕದಲ್ಲಿ ಹೊಸದಾಗಿ 390 ವಿಶ್ವವಿದ್ಯಾಲಯಗಳನ್ನು ಆರಂಭಿಸಲಾಗಿದೆ. ಐಐಟಿ, ಐಎಎಂ, ಏಮ್ಸ್ ಮತ್ತು ವೈದ್ಯಕೀಯ ಕಾಲೇಜುಗಳ ಸಂಖ್ಯೆ ದ್ವಿಗುಣಗೊಂಡಿದೆ. ಜಗತ್ತಿನ ಮುಂದುವರಿದ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಅತ್ಯುತ್ತಮ 5 ಜಿ ನೆಟ್ ವರ್ಕ್ ಸೌಲಭ್ಯ ದೊರೆಯುತ್ತಿದೆ. ಜೊತೆಗೆ ಕಡಿಮೆ ದರದಲ್ಲಿ ಡೇಟಾ ದರವಿದೆ ಎಂದು ತಿಳಿಸಿದರು.12 ಲಕ್ಷ ರೂಪಾಯಿವರೆಗೆ ವಾರ್ಷಿಕ ಆದಾಯ ಇರುವ ಮಂದಿಗೆ ಆದಾಯ ತೆರಿಗೆಯಿಂದ ವಿನಾಯಿತಿ ನೀಡುವ ಮೂಲಕ ಮಧ್ಯಮ ವರ್ಗದ ಜನರ ಕಲ್ಯಾಣಕ್ಕೆ ಒತ್ತು ನೀಡಿದೆ. ಜೊತೆಗೆ ಮೆಟ್ರೋ, ವಿಮಾನ ನಿಲ್ದಾಣ, ರೈಲ್ವೆ ಹಾಗೂ ಹೆದ್ದಾರಿ ಸೇರಿದಂತೆ ಇನ್ನಿತರ ಮೂಲ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ರೈತರಿಗೆ ಹಿಂದೆಂದಿಗಿಂತಲೂ ಕನಿಷ್ಠ ಬೆಂಬಲ ಬೆಲೆ-MSP ನೀಡಲಾಗುತ್ತಿದೆ. ಕಳೆದ 10 ವರ್ಷಗಳ ಹಿಂದೆ ನೀಡುತ್ತಿದ್ದ ಬೆಂಬಲ ಬೆಲೆಯನ್ನು ಈಗ ಮೂರು ಪಟ್ಟು ಹೆಚ್ಚಳ ಮಾಡಲಾಗಿದೆ. ಕೃಷಿ ವಲಯದಲ್ಲಿ ತಂತ್ರಜ್ಞಾನ ಆಧಾರಿತ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಬ್ಯಾಂಕಿಂಗ್, ಆಶ್ರಯ ಮನೆಗಳ ನಿರ್ಮಾಣ, ಹೊಸ ಕಾಯ್ದೆಗಳ ಜಾರಿ, ಹೆದ್ದಾರಿಗಳ ನಿರ್ಮಾಣ, ರೈಲು ಕಾಮಗಾರಿ, ವಿಮಾನ ನಿಲ್ದಾಣಗಳ ನಿರ್ಮಾಣ ಸೇರಿದಂತೆ ಅನೇಕ ಆರ್ಥಿಕ ಸಹಕಾರಿಯಾಗುವ ಯೋಜನೆಗಳನ್ನು ಮಾಡಲಾಗಿದೆ. ಅಮೃತ್ ಭಾರತ ಯೋಜನೆಯಡಿ 61 ರೈಲು ನಿಲ್ದಾಣಗಳ ಪುನರ್ ನಿರ್ಮಾಣ ಕಾಮಗಾರಿ ನಡೆದಿದೆ. 244 ಮೇಲಸೇತುವೆ ಮತ್ತು ಕೆಳ ಸೇತುವೆಗಳನ್ನು ಮಾಡಲಾಗುತ್ತಿದೆ ಎಂದು ಪಿಪಿಟಿ ಮೂಲಕ ಮಾಹಿತಿ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ
August 7, 2026
7:34 AM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror