Advertisement
MIRROR FOCUS

ದೊಡ್ಡ ಪ್ರಮಾಣದಲ್ಲಿ ಮೂಲಸೌಲಭ್ಯ ಅಭಿವೃದ್ಧಿಗೆ ಆದ್ಯತೆ | ಸಚಿವ ಅಶ್ವಿನಿ ವೈಷ್ಣವ್

Share

ದೇಶದಲ್ಲಿ ಕಳೆದ 10 ವರ್ಷಗಳ ಅವಧಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಮೂಲಸೌಲಭ್ಯ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆದ್ಯತೆ ನೀಡಿದೆ. ಈ ಮೂಲಕ ಜನ ಕಲ್ಯಾಣ ಕಾರ್ಯಕ್ರಮಗಳ ಜಾರಿಗೆ ಒತ್ತು ನೀಡಲಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಬೆಂಗಳೂರಿನಲ್ಲಿ ಹೇಳಿದ್ದಾರೆ.

ಕಳೆದೊಂದು ದಶಕದಲ್ಲಿ ಹೊಸದಾಗಿ 390 ವಿಶ್ವವಿದ್ಯಾಲಯಗಳನ್ನು ಆರಂಭಿಸಲಾಗಿದೆ. ಐಐಟಿ, ಐಎಎಂ, ಏಮ್ಸ್ ಮತ್ತು ವೈದ್ಯಕೀಯ ಕಾಲೇಜುಗಳ ಸಂಖ್ಯೆ ದ್ವಿಗುಣಗೊಂಡಿದೆ. ಜಗತ್ತಿನ ಮುಂದುವರಿದ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಅತ್ಯುತ್ತಮ 5 ಜಿ ನೆಟ್ ವರ್ಕ್ ಸೌಲಭ್ಯ ದೊರೆಯುತ್ತಿದೆ. ಜೊತೆಗೆ ಕಡಿಮೆ ದರದಲ್ಲಿ ಡೇಟಾ ದರವಿದೆ ಎಂದು ತಿಳಿಸಿದರು.12 ಲಕ್ಷ ರೂಪಾಯಿವರೆಗೆ ವಾರ್ಷಿಕ ಆದಾಯ ಇರುವ ಮಂದಿಗೆ ಆದಾಯ ತೆರಿಗೆಯಿಂದ ವಿನಾಯಿತಿ ನೀಡುವ ಮೂಲಕ ಮಧ್ಯಮ ವರ್ಗದ ಜನರ ಕಲ್ಯಾಣಕ್ಕೆ ಒತ್ತು ನೀಡಿದೆ. ಜೊತೆಗೆ ಮೆಟ್ರೋ, ವಿಮಾನ ನಿಲ್ದಾಣ, ರೈಲ್ವೆ ಹಾಗೂ ಹೆದ್ದಾರಿ ಸೇರಿದಂತೆ ಇನ್ನಿತರ ಮೂಲ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ರೈತರಿಗೆ ಹಿಂದೆಂದಿಗಿಂತಲೂ ಕನಿಷ್ಠ ಬೆಂಬಲ ಬೆಲೆ-MSP ನೀಡಲಾಗುತ್ತಿದೆ. ಕಳೆದ 10 ವರ್ಷಗಳ ಹಿಂದೆ ನೀಡುತ್ತಿದ್ದ ಬೆಂಬಲ ಬೆಲೆಯನ್ನು ಈಗ ಮೂರು ಪಟ್ಟು ಹೆಚ್ಚಳ ಮಾಡಲಾಗಿದೆ. ಕೃಷಿ ವಲಯದಲ್ಲಿ ತಂತ್ರಜ್ಞಾನ ಆಧಾರಿತ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಬ್ಯಾಂಕಿಂಗ್, ಆಶ್ರಯ ಮನೆಗಳ ನಿರ್ಮಾಣ, ಹೊಸ ಕಾಯ್ದೆಗಳ ಜಾರಿ, ಹೆದ್ದಾರಿಗಳ ನಿರ್ಮಾಣ, ರೈಲು ಕಾಮಗಾರಿ, ವಿಮಾನ ನಿಲ್ದಾಣಗಳ ನಿರ್ಮಾಣ ಸೇರಿದಂತೆ ಅನೇಕ ಆರ್ಥಿಕ ಸಹಕಾರಿಯಾಗುವ ಯೋಜನೆಗಳನ್ನು ಮಾಡಲಾಗಿದೆ. ಅಮೃತ್ ಭಾರತ ಯೋಜನೆಯಡಿ 61 ರೈಲು ನಿಲ್ದಾಣಗಳ ಪುನರ್ ನಿರ್ಮಾಣ ಕಾಮಗಾರಿ ನಡೆದಿದೆ. 244 ಮೇಲಸೇತುವೆ ಮತ್ತು ಕೆಳ ಸೇತುವೆಗಳನ್ನು ಮಾಡಲಾಗುತ್ತಿದೆ ಎಂದು ಪಿಪಿಟಿ ಮೂಲಕ ಮಾಹಿತಿ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

16 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago