Advertisement
MIRROR FOCUS

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

Share

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ ಕೃಷಿ ಬೆಳವಣಿಗೆ ಹಾಗೂ ಕೃಷಿಕರಿಗೆ ಆದ್ಯತೆಯನ್ನು ನೀಡುತ್ತಿದೆ, ಪ್ರೋತ್ಸಾಹದ ಯೋಜನೆಗಳನ್ನು ಹಮ್ಮಿಕೊಂಡಿದೆ. ಅಡಿಕೆ ಬೆಳೆಗೂ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ ಕಡೆಗೂ ಗಮನಹರಿಸಿದೆ. ಇದೀಗ ಮಿಜೋರಾಂನ ಕೋಲಾಸಿಬ್ ಮತ್ತು ಮಾಮಿತ್‌ಗಳಲ್ಲಿ ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪಿಸಲು ಸಿದ್ಧತೆ ನಡೆಯುತ್ತಿದೆ.

ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮ ಅವರು ಈ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ್ದಾರೆ. ಯೋಜನೆಗಳ ಪ್ರಗತಿಯ ಕುರಿತು ಮಾತನಾಡಿದ ಭೂ ಸಂಪನ್ಮೂಲ ಕಾರ್ಯದರ್ಶಿ ಲಾಲ್‌ಸಾಂಗ್ಲಿಯಾನ, ಈಶಾನ್ಯ ಮಂಡಳಿಯ (ಎನ್‌ಇಸಿ) ಆರ್ಥಿಕ ನೆರವಿನೊಂದಿಗೆ ಕೊಲಾಸಿಬ್‌ನ ಚಂಫೈ ಮತ್ತು ಮಾಮಿತ್ ಜಿಲ್ಲೆಯ ಜಮುವಾಂಗ್‌ನಲ್ಲಿ ಅಡಿಕೆ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ ಎಂದು  ತಿಳಿಸಿದ್ದಾರೆ. ರಾಜ್ಯದ ವಿವಿಧ ಭಾಗಗಳಲ್ಲಿ ರಬ್ಬರ್, ಕಾಫಿ, ಅಡಿಕೆಯಂತಹ ವಾಣಿಜ್ಯ ಬೆಳೆಗಳಿಗೆ ಆದ್ಯತೆ ನೀಡಲಾಗಿದೆ. ಈ ಎಲ್ಲಾ ಕೃಷಿಗಳಿಗೂ ಅಗತ್ಯವಾದ  ಕೃಷಿ ಸಂಪರ್ಕ ರಸ್ತೆಗಳ ನಿರ್ಮಾಣ,  ಗೋದಾಮುಗಳ ನಿರ್ಮಾಣವನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ, ರೈತರು ಎದುರಿಸುತ್ತಿರುವ ಸವಾಲುಗಳಿಂದಾಗಿ, ಮುಂದಿನ ವರ್ಷದಿಂದ ಪೊರಕೆ ಕಡ್ಡಿಗಳ ಗ್ರೇಡಿಂಗ್ ನಿಲ್ಲಿಸಲು ನಿರ್ಧರಿಸಲಾಯಿತು. ಸರ್ಕಾರವು ರೈತರಿಂದ ಶುಂಠಿ, ಅರಿಶಿನ, ಮಿಜೋ ಮೆಣಸಿನಕಾಯಿ ಮತ್ತು ಪೊರಕೆ ಕಡ್ಡಿಗಳನ್ನು  ಖರೀದಿಸುತ್ತಿದೆ ಎಂದೂ ವಿವರಿಸಿದರು. ಮಿಜೋರಾಂನಲ್ಲಿ ಕಾಫಿ ಕೃಷಿಯನ್ನು ಉತ್ತೇಜಿಸಲು ನಿರ್ಧರಿಸಲಾಯಿತು ಮತ್ತು ರಬ್ಬರ್ ಕ್ಲಸ್ಟರ್‌ಗಳಿಗೆ 100 ಸಬ್ಸಿಡಿ ರಬ್ಬರ್ ರೋಲಿಂಗ್ ಯಂತ್ರಗಳನ್ನು ಒದಗಿಸಲಾಗುವುದು ಎಂದು ಹೇಳಿಕೆ ತಿಳಿಸಿದ್ದಾರೆ.

(ಸುದ್ದಿ ಮೂಲ :ಪಿಟಿಐ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago