Advertisement
MIRROR FOCUS

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

Share

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ ಕೃಷಿ ಬೆಳವಣಿಗೆ ಹಾಗೂ ಕೃಷಿಕರಿಗೆ ಆದ್ಯತೆಯನ್ನು ನೀಡುತ್ತಿದೆ, ಪ್ರೋತ್ಸಾಹದ ಯೋಜನೆಗಳನ್ನು ಹಮ್ಮಿಕೊಂಡಿದೆ. ಅಡಿಕೆ ಬೆಳೆಗೂ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ ಕಡೆಗೂ ಗಮನಹರಿಸಿದೆ. ಇದೀಗ ಮಿಜೋರಾಂನ ಕೋಲಾಸಿಬ್ ಮತ್ತು ಮಾಮಿತ್‌ಗಳಲ್ಲಿ ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪಿಸಲು ಸಿದ್ಧತೆ ನಡೆಯುತ್ತಿದೆ.

ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮ ಅವರು ಈ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ್ದಾರೆ. ಯೋಜನೆಗಳ ಪ್ರಗತಿಯ ಕುರಿತು ಮಾತನಾಡಿದ ಭೂ ಸಂಪನ್ಮೂಲ ಕಾರ್ಯದರ್ಶಿ ಲಾಲ್‌ಸಾಂಗ್ಲಿಯಾನ, ಈಶಾನ್ಯ ಮಂಡಳಿಯ (ಎನ್‌ಇಸಿ) ಆರ್ಥಿಕ ನೆರವಿನೊಂದಿಗೆ ಕೊಲಾಸಿಬ್‌ನ ಚಂಫೈ ಮತ್ತು ಮಾಮಿತ್ ಜಿಲ್ಲೆಯ ಜಮುವಾಂಗ್‌ನಲ್ಲಿ ಅಡಿಕೆ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ ಎಂದು  ತಿಳಿಸಿದ್ದಾರೆ. ರಾಜ್ಯದ ವಿವಿಧ ಭಾಗಗಳಲ್ಲಿ ರಬ್ಬರ್, ಕಾಫಿ, ಅಡಿಕೆಯಂತಹ ವಾಣಿಜ್ಯ ಬೆಳೆಗಳಿಗೆ ಆದ್ಯತೆ ನೀಡಲಾಗಿದೆ. ಈ ಎಲ್ಲಾ ಕೃಷಿಗಳಿಗೂ ಅಗತ್ಯವಾದ  ಕೃಷಿ ಸಂಪರ್ಕ ರಸ್ತೆಗಳ ನಿರ್ಮಾಣ,  ಗೋದಾಮುಗಳ ನಿರ್ಮಾಣವನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ, ರೈತರು ಎದುರಿಸುತ್ತಿರುವ ಸವಾಲುಗಳಿಂದಾಗಿ, ಮುಂದಿನ ವರ್ಷದಿಂದ ಪೊರಕೆ ಕಡ್ಡಿಗಳ ಗ್ರೇಡಿಂಗ್ ನಿಲ್ಲಿಸಲು ನಿರ್ಧರಿಸಲಾಯಿತು. ಸರ್ಕಾರವು ರೈತರಿಂದ ಶುಂಠಿ, ಅರಿಶಿನ, ಮಿಜೋ ಮೆಣಸಿನಕಾಯಿ ಮತ್ತು ಪೊರಕೆ ಕಡ್ಡಿಗಳನ್ನು  ಖರೀದಿಸುತ್ತಿದೆ ಎಂದೂ ವಿವರಿಸಿದರು. ಮಿಜೋರಾಂನಲ್ಲಿ ಕಾಫಿ ಕೃಷಿಯನ್ನು ಉತ್ತೇಜಿಸಲು ನಿರ್ಧರಿಸಲಾಯಿತು ಮತ್ತು ರಬ್ಬರ್ ಕ್ಲಸ್ಟರ್‌ಗಳಿಗೆ 100 ಸಬ್ಸಿಡಿ ರಬ್ಬರ್ ರೋಲಿಂಗ್ ಯಂತ್ರಗಳನ್ನು ಒದಗಿಸಲಾಗುವುದು ಎಂದು ಹೇಳಿಕೆ ತಿಳಿಸಿದ್ದಾರೆ.

(ಸುದ್ದಿ ಮೂಲ :ಪಿಟಿಐ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

2 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

2 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

9 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

10 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

19 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

20 hours ago