Advertisement
MIRROR FOCUS

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

Share

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ ಕೃಷಿ ಬೆಳವಣಿಗೆ ಹಾಗೂ ಕೃಷಿಕರಿಗೆ ಆದ್ಯತೆಯನ್ನು ನೀಡುತ್ತಿದೆ, ಪ್ರೋತ್ಸಾಹದ ಯೋಜನೆಗಳನ್ನು ಹಮ್ಮಿಕೊಂಡಿದೆ. ಅಡಿಕೆ ಬೆಳೆಗೂ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ ಕಡೆಗೂ ಗಮನಹರಿಸಿದೆ. ಇದೀಗ ಮಿಜೋರಾಂನ ಕೋಲಾಸಿಬ್ ಮತ್ತು ಮಾಮಿತ್‌ಗಳಲ್ಲಿ ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪಿಸಲು ಸಿದ್ಧತೆ ನಡೆಯುತ್ತಿದೆ.

ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮ ಅವರು ಈ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ್ದಾರೆ. ಯೋಜನೆಗಳ ಪ್ರಗತಿಯ ಕುರಿತು ಮಾತನಾಡಿದ ಭೂ ಸಂಪನ್ಮೂಲ ಕಾರ್ಯದರ್ಶಿ ಲಾಲ್‌ಸಾಂಗ್ಲಿಯಾನ, ಈಶಾನ್ಯ ಮಂಡಳಿಯ (ಎನ್‌ಇಸಿ) ಆರ್ಥಿಕ ನೆರವಿನೊಂದಿಗೆ ಕೊಲಾಸಿಬ್‌ನ ಚಂಫೈ ಮತ್ತು ಮಾಮಿತ್ ಜಿಲ್ಲೆಯ ಜಮುವಾಂಗ್‌ನಲ್ಲಿ ಅಡಿಕೆ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ ಎಂದು  ತಿಳಿಸಿದ್ದಾರೆ. ರಾಜ್ಯದ ವಿವಿಧ ಭಾಗಗಳಲ್ಲಿ ರಬ್ಬರ್, ಕಾಫಿ, ಅಡಿಕೆಯಂತಹ ವಾಣಿಜ್ಯ ಬೆಳೆಗಳಿಗೆ ಆದ್ಯತೆ ನೀಡಲಾಗಿದೆ. ಈ ಎಲ್ಲಾ ಕೃಷಿಗಳಿಗೂ ಅಗತ್ಯವಾದ  ಕೃಷಿ ಸಂಪರ್ಕ ರಸ್ತೆಗಳ ನಿರ್ಮಾಣ,  ಗೋದಾಮುಗಳ ನಿರ್ಮಾಣವನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ, ರೈತರು ಎದುರಿಸುತ್ತಿರುವ ಸವಾಲುಗಳಿಂದಾಗಿ, ಮುಂದಿನ ವರ್ಷದಿಂದ ಪೊರಕೆ ಕಡ್ಡಿಗಳ ಗ್ರೇಡಿಂಗ್ ನಿಲ್ಲಿಸಲು ನಿರ್ಧರಿಸಲಾಯಿತು. ಸರ್ಕಾರವು ರೈತರಿಂದ ಶುಂಠಿ, ಅರಿಶಿನ, ಮಿಜೋ ಮೆಣಸಿನಕಾಯಿ ಮತ್ತು ಪೊರಕೆ ಕಡ್ಡಿಗಳನ್ನು  ಖರೀದಿಸುತ್ತಿದೆ ಎಂದೂ ವಿವರಿಸಿದರು. ಮಿಜೋರಾಂನಲ್ಲಿ ಕಾಫಿ ಕೃಷಿಯನ್ನು ಉತ್ತೇಜಿಸಲು ನಿರ್ಧರಿಸಲಾಯಿತು ಮತ್ತು ರಬ್ಬರ್ ಕ್ಲಸ್ಟರ್‌ಗಳಿಗೆ 100 ಸಬ್ಸಿಡಿ ರಬ್ಬರ್ ರೋಲಿಂಗ್ ಯಂತ್ರಗಳನ್ನು ಒದಗಿಸಲಾಗುವುದು ಎಂದು ಹೇಳಿಕೆ ತಿಳಿಸಿದ್ದಾರೆ.

(ಸುದ್ದಿ ಮೂಲ :ಪಿಟಿಐ)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

10 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

14 hours ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

23 hours ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

23 hours ago

ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…

23 hours ago

ಡ್ರ್ಯಾಗನ್‌ ಫ್ರೂಟ್‌ ಬೆಳೆದರೆ ಸಾಕೇ..? ದಕ್ಷಿಣ ಆಫ್ರಿಕಾದಲ್ಲಿ ರೈತರಿಗೆ ಎದುರಾದ ಸವಾಲುಗಳು ಭಾರತಕ್ಕೂ ಪಾಠ

ಡ್ರ್ಯಾಗನ್‌ ಫ್ರೂಟ್‌ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…

23 hours ago