ತ್ರಿಪುರಾದಲ್ಲಿ ಅಡಿಕೆ ಬೆಳೆ ವಿಸ್ತರಣೆಯ ಜೊತೆಗೇ ಉಪಬೆಳೆಗೆ ಆದ್ಯತೆ..!

November 17, 2025
10:50 PM

ತ್ರಿಪುರಾದಲ್ಲಿ ಅಡಿಕೆ ಬೆಳೆ ವಿಸ್ತರಣೆಗೆ ಸರ್ಕಾರ ಪ್ರೋತ್ಸಾಹ ನೀಡುವುದರ ಜೊತೆಗೇ ಉಪಬೆಳೆಯಾಗಿ ಕೊಕೋ ಬೆಳೆಯಲು ಕೂಡಾ ಉತ್ತೇಜನ ನೀಡುತ್ತಿದೆ. ಈಗಾಗಲೇ ಅಡಿಕೆ ಹಾಗೂ ಕೊಕೋ ಕೂಡಾ ಬೆಳೆಯಲು ಅನುಕೂಲಕರ ಕೃಷಿ ಹವಾಮಾನ ಪರಿಸ್ಥಿತಿ ಇರುವುದರಿಂದ ಕೊಕೋ ಬೆಳೆಗೆ ಭರವಸೆಯ ವಲಯವೆಂದು ಗುರುತಿಸಲ್ಪಟ್ಟಿದೆ. ಹೀಗಾಗಿ ಕೊಕೋ ಬೆಳೆಯ ಬಗ್ಗೆಯೂ ಈಗ ತರಬೇತಿ ಆರಂಭವಾಗಿದೆ.

Advertisement
Advertisement

ವೈಜ್ಞಾನಿಕ ಕೊಕೋ ಕೃಷಿ ಮತ್ತು ಮೌಲ್ಯವರ್ಧನೆಯ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಕೂಡಾ ಸರ್ಕಾರ ಹೊಂದಿದೆ. ವಿಶೇಷವಾಗಿ ಉತ್ತರ ತ್ರಿಪುರಾದಲ್ಲಿ  ಕೊಕೋವನ್ನು  ಅಡಿಕೆ ಆಧಾರಿತ ಬೆಳೆ ವ್ಯವಸ್ಥೆಗಳೊಂದಿಗೆ ಪರಿಣಾಮಕಾರಿಯಾಗಿ ಅಂತರ ಬೆಳೆಯಾಗಿ ಬೆಳೆಯಬಹುದು ಎಂದು ಮಾಹಿತಿ ನೀಡಲಾಗಿದೆ.  ಭಾರತ ಸರ್ಕಾರದ ಕೃಷಿ ಸಚಿವಾಲಯವು ಈಶಾನ್ಯ ಪ್ರದೇಶದಲ್ಲಿ ಕೊಕೋ ಕೃಷಿ ಪ್ರದೇಶವನ್ನು 50,000 ಹೆಕ್ಟೇರ್‌ಗಳಿಗೆ ವಿಸ್ತರಿಸಲು ಸಲಹೆ ನೀಡಿದೆ. ತ್ರಿಪುರಾ ಕೃಷಿಕರು ಈ ವಿಸ್ತರಣಾ ಅಭಿಯಾನದಿಂದ ಪ್ರಯೋಜನ ಪಡೆಯುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ  ಸಿಪಿಸಿಆರ್‌ಐ ಅಭಿವೃದ್ಧಿಪಡಿಸಿದ ತಂತ್ರಜ್ಞಾನವನ್ನು ಬಳಸಿಕೊಂಡು ಸಣ್ಣ ಉದ್ಯಮಿಗಳು ಮತ್ತು ಸ್ವಸಹಾಯ ಗುಂಪುಗಳಿಗೆ  “ಬೀನ್ ಟು ಬಾರ್” ಚಾಕೊಲೇಟ್ ಘಟಕದ ಬಗ್ಗೆಯೂ ಮಾಹಿತಿ ನೀಡಲಾಗಿದೆ.

ತ್ರಿಪುರಾದಲ್ಲಿ ಸರ್ಕಾರದ ನೆರವಿನೊಂದಿಗೆ ಅಡಿಕೆ ಬೆಳೆ ವಿಸ್ತರಣೆ ಹಾಗೂ ಉಪಬೆಳೆಯ ಕಡೆಗೂ ಆದ್ಯತೆ ನೀಡಲಾಗುತ್ತಿದೆ. ಅನೇಕ ವರ್ಷಗಳಿಂದ ಅಡಿಕೆ ಬೆಳೆಯುವ ಪ್ರದೇಶಗಳಲ್ಲಿ ಈಗಷ್ಟೇ ಉಪ ಬೆಳೆಯ ಬಗ್ಗೆ ಗಂಭೀರ ಚಿಂತನೆ ನಡೆಯುತ್ತಿದೆ. ಅಡಿಕೆಯ ಜೊತೆಗೆ ಈಗ ಕೊಕೋ, ಕಾಫಿ, ಕಾಳುಮೆಣಸು ಮೊದಲಾದ ಉಪಬೆಳೆಯೂ ಅಗತ್ಯವಿದೆ.  ಕೃಷಿ, ಗ್ರಾಮೀಣ, ಪರಿಸರ ಸುದ್ದಿಗಳಿಗಾಗಿ ನಮ್ಮ ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ…

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ
January 30, 2026
8:10 AM
by: ದ ರೂರಲ್ ಮಿರರ್.ಕಾಂ
“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ
January 30, 2026
8:05 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ
January 30, 2026
7:57 AM
by: ಮಿರರ್‌ ಡೆಸ್ಕ್
ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
January 30, 2026
7:27 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror