ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿರುತ್ತದೆ. ಆದ್ದರಿಂದ ಆದ್ಯತಾ ಪಡಿತರ ಚೀಟಿ ಹೊಂದಿಲ್ಲದ ಇ-ಶ್ರಮ್ ನೋಂದಾಯಿತ ಎಲ್ಲಾ ಅರ್ಹ ಕಾರ್ಮಿಕರು ನಿಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸುವುದು. ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ದೂರವಾಣಿ ಸಂಖ್ಯೆ:1800-425-9339 ಅಥವಾ ಸಹಾಯವಾಣಿ 1967 ಕ್ಕೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯವರೆವಿಗೂ ಸಂಪರ್ಕಿಸುವಂತೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…