Advertisement
ರಾಷ್ಟ್ರೀಯ

ಸಾಧನೆ -ಸಾಹಸ | 5 ಶಿಖರಗಳನ್ನು ಏರಿದ ಮೊದಲ ಭಾರತೀಯ ಮಹಿಳೆ | 30 ವರ್ಷ ವಯಸ್ಸಿನ ಪ್ರಿಯಾಂಕಾ ಮೋಹಿತೆ ಸಾಧನೆ |

Share

ಪಶ್ಚಿಮ ಮಹಾರಾಷ್ಟ್ರದ ಸತಾರಾ ಮೂಲದ ಸದ್ಯ ಬೆಂಗಳೂರಿನಲ್ಲಿರುವ ಪ್ರಿಯಾಂಕಾ ಮೋಹಿತೆ ಅವರು ಗುರುವಾರ ಕಾಂಚನ್‌ಜುಂಗಾ ಪರ್ವತವನ್ನು ಏರುವ ಮೂಲಕ  8,000 ಮೀಟರ್‌ಗಳ ಮೇಲಿನ ಐದು ಶಿಖರಗಳನ್ನು ಏರಿದ ಮೊದಲ ಭಾರತೀಯ ಮಹಿಳೆಯಾಗಿದ್ದಾರೆ. ವಿಶ್ವದ 10 ನೇ ಅತಿ ಎತ್ತರದ ಪರ್ವತ ಶಿಖರವಾದ ಅನ್ನಪೂರ್ಣ ಮೌಂಟ್ (8,091 ಮೀ) ಅನ್ನು ಅವರು ಏರುವ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಮಹಿಳೆಯಾಗಿದ್ದಾರೆ.

2020 ರ ತೇನ್ಸಿಂಗ್ ನಾರ್ಗೆ ಸಾಹಸ ಪ್ರಶಸ್ತಿ ಪುರಸ್ಕೃತರಾದ ಪ್ರಿಯಾಂಕಾ ಮೋಹಿತೆ (30) ಅವರು  ಮೂರನೇ ಅತಿ ಎತ್ತರದ ಪರ್ವತವಾದ ಕಾಂಚನಜುಂಗಾ ಪರ್ವತಕ್ಕೆ (8,586 ಮೀ) ತನ್ನ ಯಾತ್ರೆಯನ್ನು ಮೇ.4 ರಂದು ಸಂಜೆ 4.52 ಕ್ಕೆ ಯಶಸ್ವಿಯಾಗಿ ಪೂರ್ಣಗೊಳಿಸಿದರು, ”ಎಂದು ಅವರ ಸಹೋದರ ಆಕಾಶ್ ಮೋಹಿತೆ ಪಿಟಿಐಗೆ ತಿಳಿಸಿದರು.

ಏಪ್ರಿಲ್ 2021 ರಲ್ಲಿ, ಅವರು ವಿಶ್ವದ 10 ನೇ ಅತಿ ಎತ್ತರದ ಪರ್ವತ ಶಿಖರವಾದ ಅನ್ನಪೂರ್ಣ ಮೌಂಟ್ (8,091 ಮೀ) ಅನ್ನು ಏರಿದ್ದರು ಮತ್ತು ಈ ಸಾಧನೆ ಮಾಡಿದ ಮೊದಲ ಭಾರತೀಯ ಮಹಿಳಾ ಆರೋಹಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಪ್ರಿಯಾಂಕಾ ಮೋಹಿತೆ 2013 ರಲ್ಲಿ ವಿಶ್ವದ ಅತಿ ಎತ್ತರದ ಶಿಖರ ಮೌಂಟ್ ಎವರೆಸ್ಟ್ (8,849 ಮೀ), 2018 ರಲ್ಲಿ ಲೊಟ್ಸೆ (8,516 ಮೀ), ಮೌಂಟ್ ಮಕಾಲು (8,485 ಮೀ) ಮತ್ತು 2016 ರಲ್ಲಿ ಕಿಲಿಮಂಜಾರೋ ಪರ್ವತ (5,895 ಮೀ) ಏರಿದ್ದಾರೆ.

2019 ರಲ್ಲಿ, ಅವರು ಮೌಂಟ್ ಎವರೆಸ್ಟ್‌ನ ಆಗ್ನೇಯಕ್ಕೆ 19 ಕಿಲೋಮೀಟರ್ ದೂರದಲ್ಲಿರುವ ಮಹಾಲಂಗೂರ್ ಹಿಮಾಲಯದ ಐದನೇ ಅತಿ ಎತ್ತರದ ಶಿಖರ ಮಕಾಲುವನ್ನು ಏರಿದರು. ಮಾಧ್ಯಮದೊಂದಿಗೆ ಮಾತನಾಡಿದ ಪ್ರಿಯಾಂಕ ಮೋಹಿತೆ ಅವರು,  “ನಾನು ಟ್ರೆಕ್ಕಿಂಗ್‌ಗಾಗಿ ಸೋದರ ಸಂಬಂಧಿ ಮತ್ತು ನನ್ನ ಚಿಕ್ಕಪ್ಪನ ಜೊತೆ ಹೋಗುತ್ತಿದ್ದೆ. ಬೆಟ್ಟಗಳ ನಗರವಾದ ಸತಾರಾದಿಂದ ಬಂದ ನಾನು ಬಾಲ್ಯದಿಂದಲೂ ನನ್ನ ಪ್ರದೇಶದಲ್ಲಿ ಬೆಟ್ಟಗಳನ್ನು ಹುಡುಕಿ ಏರುತ್ತಿದೆ. 7 ನೇ ತರಗತಿಯಲ್ಲಿದ್ದಾಗ ನಾನು ವೃತ್ತಿಪರ ಗುಂಪಿನೊಂದಿಗೆ ಚಾರಣವನ್ನು ಪ್ರಾರಂಭಿಸಿದೆ ಎನ್ನುತ್ತಾರೆ.

12 ನೇ ತರಗತಿ ಪರೀಕ್ಷೆಯ ನಂತರ ಅವರು ನೆಹರು ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್‌ನಲ್ಲಿ 2010 ರಲ್ಲಿ ಪರ್ವತಾರೋಹಣದಲ್ಲಿ ಕೋರ್ಸ್ ತೆಗೆದುಕೊಂಡರು. ನಂತರ ಅವರು 2012 ರಲ್ಲಿ ತನ್ನ ಮುಂದುವರಿದ ಪರ್ವತಾರೋಹಣ ಕೋರ್ಸ್ ಅನ್ನು ಮುಗಿಸಿದರು. ಆಕೆಯ ಮೊದಲ ಆರೋಹಣ 2012 ರಲ್ಲಿ. ಅವರು 6200 ಮೀಟರ್ ಎತ್ತರವಿರುವ ಬಂದರ್‌ಪೂಂಚ್ ಪರ್ವತವನ್ನು ಏರಿದರು.

ಮಹಾರಾಷ್ಟ್ರ ಮೂಲದ ಈಕೆ ಈಗ ಬೆಂಗಳೂರಿನಲ್ಲಿ ನೆಲೆಸಿದ್ದು, 2017-2018ರ ಸಾಹಸ ಕ್ರೀಡೆಗಳಿಗಾಗಿ ಮಹಾರಾಷ್ಟ್ರ ಸರ್ಕಾರದ ಶಿವ ಛತ್ರಪತಿ ರಾಜ್ಯ ಪ್ರಶಸ್ತಿಯನ್ನು ಸಹ ಪಡೆದಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

14 minutes ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

4 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

4 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

15 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

16 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

20 hours ago