#RuralMirror | ಶಾಲಾ ಮಕ್ಕಳಿಗೆ ಸಮಸ್ಯೆ | ಕೊಲ್ಲಮೊಗ್ರದ ಕಡಂಬಳದಲ್ಲಿ ಸಂಪರ್ಕ ರಸ್ತೆ ತಕ್ಷಣ ಬೇಕಿದೆ |

June 23, 2023
4:20 PM

ಗ್ರಾಮೀಣ ಭಾಗದಲ್ಲಿ ನಿತ್ಯವೂ ಒಂದಲ್ಲ ಒಂದು ಸಮಸ್ಯೆ. ರಸ್ತೆ, ಸೇತುವೆ, ವಿದ್ಯುತ್‌, ನೆಟ್ವರ್ಕ್..‌ ಈ ವಿಷಯಗಳು ಗ್ರಾಮೀಣ ಭಾಗದಲ್ಲಿ ಯಾವಾಗಲೂ ಚರ್ಚೆಯ ವಿಷಯ. ಇದೀಗ ಸೇತುವೆ ರಚನೆಯ ಹಂತದಲ್ಲಿದೆ, ಆದರೆ ಸಂಪರ್ಕ ರಸ್ತೆ ಇಲ್ಲದೆ ಶಾಲಾ ಮಕ್ಕಳು ಪರದಾಟದ ಸ್ಥಿತಿಯಲ್ಲಿರುವ ಸಂಗತಿಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗ್ರಾಮೀಣ ಭಾಗವಾದ ಕೊಲ್ಲಮೊಗ್ರದಿಂದ ವರದಿಯಾಗಿದೆ.

Advertisement

ಸುಳ್ಯ ತಾಲೂಕಿನ ಗ್ರಾಮೀಣ ಭಾಗವಾದ  ಕೊಲ್ಲಮೊಗ್ರ ಸಂಪರ್ಕ ಹೊಂದಿರುವ ಪುಟ್ಟ ಹಳ್ಳಿ ಕಡಂಬಳ. ಸುಮಾರು 20-30 ಮನೆಗಳು ಇರುವ ಪ್ರದೇಶ ಇದು. ಇಲ್ಲಿ ಹರಿಯುವ ಹೊಳೆಯೊಂದು ಈ ಊರನ್ನು ಸಂಪರ್ಕ ಮಾಡಲು ಅಡ್ಡಿಯಾಗಿತ್ತು. ಸೇತುವೆ ನಿರ್ಮಾಣದ ಬೇಡಿಕೆ ಇತ್ತು. ಆ ಬೇಡಿಕೆ ಪೂರೈಕೆಯಾಗುತ್ತಿದೆ, ಸೇತುವೆ ನಿರ್ಮಾಣ ಹಂತದಲ್ಲಿದೆ. ಆದರೆ ಸದ್ಯ ಸಂಪರ್ಕ ರಸ್ತೆ ಇಲ್ಲದೆ ಶಾಲಾ ಮಕ್ಕಳು ಪರದಾಟ ನಡೆಸುವಂತಾಗಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಶಾಲಾ ಮಕ್ಕಳು ಈ ರಸ್ತೆಯಲ್ಲಿ ನಿತ್ಯವೂ ಬರುತ್ತಿರುವುದರಿಂದ ತಕ್ಷಣವೇ ಕಡಂಬಳ ಸಂಪರ್ಕ ಸೇತುವೆ ಕಾಮಗಾರಿಯಲ್ಲಿ ತಾತ್ಕಾಲಿಕ ಸಂಪರ್ಕ ವ್ಯವಸ್ಥೆ ಮಾಡಿಸಬೇಕಿದೆ.
ಬಾಲಸುಬ್ರಹ್ಮಣ್ಯ ಎನ್‌ ಜಿ, ಗ್ರಾಮಸ್ಥ

ಕೊಲ್ಲಮೊಗ್ರ  ಕಡಂಬಳ ರಸ್ತೆಯಲ್ಲಿ ಸೇತುವೆ ನಿರ್ಮಾಣವಾಗುತ್ತಿದೆ. ಸದ್ಯ ಪಿಲ್ಲರ್‌ ಮಾತ್ರಾ ರಚನೆಯಾಗಿದೆ. ಈಗ ಮಳೆಯೂ ಆರಂಭವಾಗಿದೆ. ಕಳೆದ ಬಾರಿ ಹಾಗೂ ಅದಕ್ಕಿಂತ ಹಿಂದೆ ರಸ್ತೆ ಸಂಪರ್ಕ ಸರಿಯಾಗಿಲ್ಲದೆ ಹಾಗೂ ಹೊಳೆಯ ಕಾರಣದಿಂದ ಭಾರೀ ಮಳೆಯಾದರೆ 20 ಕುಟುಂಬ ಕೊಲ್ಲಮೊಗ್ರ ಪೇಟೆಯನ್ನು ಸಂಪರ್ಕ ಕಳೆದುಕೊಳ್ಳುತ್ತಿದ್ದರು. ತೀರಾ ಗ್ರಾಮೀಣ ಪ್ರದೇಶವಾದ್ದರಿಂದ ಪರದಾಟ ನಿತ್ಯವೂ ಇತ್ತು. ಇದೀಗ ಮಳೆಯ ಸಂದರ್ಭ ಹೊಸ ಸೇತುವೆ ನಿರ್ಮಾಣ ನಡೆಯುತ್ತಿದೆ. ಈ ಬಾರಿಯೂ ಇಲ್ಲಿನ ಜನರು ಹೊಳೆ ದಾಟಲು ಸಂಕಷ್ಟ ಪಡುವಂತಾಗಿದೆ. ಅದರಲ್ಲೂ ಶಾಲಾ ಮಕ್ಕಳಿಗೆ ನಡೆದಾಡಲು ಸಂಕಷ್ಟವಾಗಿದೆ.  ಸುಮಾರು 15 – ಮಕ್ಕಳ ಈ ದಾರಿಯಾಗಿ ಬರುತ್ತಾರೆ. ಪ್ರಾಥಮಿಕ ಶಾಲಾ ಮಕ್ಕಳೂ ಇದ್ದಾರೆ. ಹೀಗಾಗಿ ಪೋಷಕರಿಗೂ ಭಯದ ವಾತಾವರಣ ನಿರ್ಮಾಣವಾಗಿದೆ. ಮಳೆಯಾದಾಗ ಸೇತುವೆ ಇಲ್ಲದ, ಸಂಪರ್ಕ ಸರಿಯಾಗಿಲ್ಲದ ಈ ದಾರಿಯಲ್ಲಿ ಮಕ್ಕಳು ಬರುವುದು  ಆತಂಕವೂ ಆಗಿದೆ. ಹೀಗಾಗಿ  ಸಂಬಂಧಿತರು ತಕ್ಷಣ ಗಮನಹರಿಸಿ ಸಮಸ್ಯೆ ಬಗೆಹರಿಸಲು ಒತ್ತಾಯ ಕೇಳಿಬಂದಿದೆ.

 

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |
May 13, 2025
7:20 AM
by: ದ ರೂರಲ್ ಮಿರರ್.ಕಾಂ
ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ
May 13, 2025
6:53 AM
by: ದ ರೂರಲ್ ಮಿರರ್.ಕಾಂ
ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ
May 12, 2025
10:14 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ
May 12, 2025
2:17 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group