Advertisement
The Rural Mirror ಕಾಳಜಿ

#RuralMirror | ಶಾಲಾ ಮಕ್ಕಳಿಗೆ ಸಮಸ್ಯೆ | ಕೊಲ್ಲಮೊಗ್ರದ ಕಡಂಬಳದಲ್ಲಿ ಸಂಪರ್ಕ ರಸ್ತೆ ತಕ್ಷಣ ಬೇಕಿದೆ |

Share

ಗ್ರಾಮೀಣ ಭಾಗದಲ್ಲಿ ನಿತ್ಯವೂ ಒಂದಲ್ಲ ಒಂದು ಸಮಸ್ಯೆ. ರಸ್ತೆ, ಸೇತುವೆ, ವಿದ್ಯುತ್‌, ನೆಟ್ವರ್ಕ್..‌ ಈ ವಿಷಯಗಳು ಗ್ರಾಮೀಣ ಭಾಗದಲ್ಲಿ ಯಾವಾಗಲೂ ಚರ್ಚೆಯ ವಿಷಯ. ಇದೀಗ ಸೇತುವೆ ರಚನೆಯ ಹಂತದಲ್ಲಿದೆ, ಆದರೆ ಸಂಪರ್ಕ ರಸ್ತೆ ಇಲ್ಲದೆ ಶಾಲಾ ಮಕ್ಕಳು ಪರದಾಟದ ಸ್ಥಿತಿಯಲ್ಲಿರುವ ಸಂಗತಿಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗ್ರಾಮೀಣ ಭಾಗವಾದ ಕೊಲ್ಲಮೊಗ್ರದಿಂದ ವರದಿಯಾಗಿದೆ.

ಸುಳ್ಯ ತಾಲೂಕಿನ ಗ್ರಾಮೀಣ ಭಾಗವಾದ  ಕೊಲ್ಲಮೊಗ್ರ ಸಂಪರ್ಕ ಹೊಂದಿರುವ ಪುಟ್ಟ ಹಳ್ಳಿ ಕಡಂಬಳ. ಸುಮಾರು 20-30 ಮನೆಗಳು ಇರುವ ಪ್ರದೇಶ ಇದು. ಇಲ್ಲಿ ಹರಿಯುವ ಹೊಳೆಯೊಂದು ಈ ಊರನ್ನು ಸಂಪರ್ಕ ಮಾಡಲು ಅಡ್ಡಿಯಾಗಿತ್ತು. ಸೇತುವೆ ನಿರ್ಮಾಣದ ಬೇಡಿಕೆ ಇತ್ತು. ಆ ಬೇಡಿಕೆ ಪೂರೈಕೆಯಾಗುತ್ತಿದೆ, ಸೇತುವೆ ನಿರ್ಮಾಣ ಹಂತದಲ್ಲಿದೆ. ಆದರೆ ಸದ್ಯ ಸಂಪರ್ಕ ರಸ್ತೆ ಇಲ್ಲದೆ ಶಾಲಾ ಮಕ್ಕಳು ಪರದಾಟ ನಡೆಸುವಂತಾಗಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಶಾಲಾ ಮಕ್ಕಳು ಈ ರಸ್ತೆಯಲ್ಲಿ ನಿತ್ಯವೂ ಬರುತ್ತಿರುವುದರಿಂದ ತಕ್ಷಣವೇ ಕಡಂಬಳ ಸಂಪರ್ಕ ಸೇತುವೆ ಕಾಮಗಾರಿಯಲ್ಲಿ ತಾತ್ಕಾಲಿಕ ಸಂಪರ್ಕ ವ್ಯವಸ್ಥೆ ಮಾಡಿಸಬೇಕಿದೆ.
ಬಾಲಸುಬ್ರಹ್ಮಣ್ಯ ಎನ್‌ ಜಿ, ಗ್ರಾಮಸ್ಥ

ಕೊಲ್ಲಮೊಗ್ರ  ಕಡಂಬಳ ರಸ್ತೆಯಲ್ಲಿ ಸೇತುವೆ ನಿರ್ಮಾಣವಾಗುತ್ತಿದೆ. ಸದ್ಯ ಪಿಲ್ಲರ್‌ ಮಾತ್ರಾ ರಚನೆಯಾಗಿದೆ. ಈಗ ಮಳೆಯೂ ಆರಂಭವಾಗಿದೆ. ಕಳೆದ ಬಾರಿ ಹಾಗೂ ಅದಕ್ಕಿಂತ ಹಿಂದೆ ರಸ್ತೆ ಸಂಪರ್ಕ ಸರಿಯಾಗಿಲ್ಲದೆ ಹಾಗೂ ಹೊಳೆಯ ಕಾರಣದಿಂದ ಭಾರೀ ಮಳೆಯಾದರೆ 20 ಕುಟುಂಬ ಕೊಲ್ಲಮೊಗ್ರ ಪೇಟೆಯನ್ನು ಸಂಪರ್ಕ ಕಳೆದುಕೊಳ್ಳುತ್ತಿದ್ದರು. ತೀರಾ ಗ್ರಾಮೀಣ ಪ್ರದೇಶವಾದ್ದರಿಂದ ಪರದಾಟ ನಿತ್ಯವೂ ಇತ್ತು. ಇದೀಗ ಮಳೆಯ ಸಂದರ್ಭ ಹೊಸ ಸೇತುವೆ ನಿರ್ಮಾಣ ನಡೆಯುತ್ತಿದೆ. ಈ ಬಾರಿಯೂ ಇಲ್ಲಿನ ಜನರು ಹೊಳೆ ದಾಟಲು ಸಂಕಷ್ಟ ಪಡುವಂತಾಗಿದೆ. ಅದರಲ್ಲೂ ಶಾಲಾ ಮಕ್ಕಳಿಗೆ ನಡೆದಾಡಲು ಸಂಕಷ್ಟವಾಗಿದೆ.  ಸುಮಾರು 15 – ಮಕ್ಕಳ ಈ ದಾರಿಯಾಗಿ ಬರುತ್ತಾರೆ. ಪ್ರಾಥಮಿಕ ಶಾಲಾ ಮಕ್ಕಳೂ ಇದ್ದಾರೆ. ಹೀಗಾಗಿ ಪೋಷಕರಿಗೂ ಭಯದ ವಾತಾವರಣ ನಿರ್ಮಾಣವಾಗಿದೆ. ಮಳೆಯಾದಾಗ ಸೇತುವೆ ಇಲ್ಲದ, ಸಂಪರ್ಕ ಸರಿಯಾಗಿಲ್ಲದ ಈ ದಾರಿಯಲ್ಲಿ ಮಕ್ಕಳು ಬರುವುದು  ಆತಂಕವೂ ಆಗಿದೆ. ಹೀಗಾಗಿ  ಸಂಬಂಧಿತರು ತಕ್ಷಣ ಗಮನಹರಿಸಿ ಸಮಸ್ಯೆ ಬಗೆಹರಿಸಲು ಒತ್ತಾಯ ಕೇಳಿಬಂದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

4 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

4 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

15 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

15 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

19 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago