Advertisement
The Rural Mirror ಕಾಳಜಿ

#RuralMirror | ಶಾಲಾ ಮಕ್ಕಳಿಗೆ ಸಮಸ್ಯೆ | ಕೊಲ್ಲಮೊಗ್ರದ ಕಡಂಬಳದಲ್ಲಿ ಸಂಪರ್ಕ ರಸ್ತೆ ತಕ್ಷಣ ಬೇಕಿದೆ |

Share

ಗ್ರಾಮೀಣ ಭಾಗದಲ್ಲಿ ನಿತ್ಯವೂ ಒಂದಲ್ಲ ಒಂದು ಸಮಸ್ಯೆ. ರಸ್ತೆ, ಸೇತುವೆ, ವಿದ್ಯುತ್‌, ನೆಟ್ವರ್ಕ್..‌ ಈ ವಿಷಯಗಳು ಗ್ರಾಮೀಣ ಭಾಗದಲ್ಲಿ ಯಾವಾಗಲೂ ಚರ್ಚೆಯ ವಿಷಯ. ಇದೀಗ ಸೇತುವೆ ರಚನೆಯ ಹಂತದಲ್ಲಿದೆ, ಆದರೆ ಸಂಪರ್ಕ ರಸ್ತೆ ಇಲ್ಲದೆ ಶಾಲಾ ಮಕ್ಕಳು ಪರದಾಟದ ಸ್ಥಿತಿಯಲ್ಲಿರುವ ಸಂಗತಿಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗ್ರಾಮೀಣ ಭಾಗವಾದ ಕೊಲ್ಲಮೊಗ್ರದಿಂದ ವರದಿಯಾಗಿದೆ.

ಸುಳ್ಯ ತಾಲೂಕಿನ ಗ್ರಾಮೀಣ ಭಾಗವಾದ  ಕೊಲ್ಲಮೊಗ್ರ ಸಂಪರ್ಕ ಹೊಂದಿರುವ ಪುಟ್ಟ ಹಳ್ಳಿ ಕಡಂಬಳ. ಸುಮಾರು 20-30 ಮನೆಗಳು ಇರುವ ಪ್ರದೇಶ ಇದು. ಇಲ್ಲಿ ಹರಿಯುವ ಹೊಳೆಯೊಂದು ಈ ಊರನ್ನು ಸಂಪರ್ಕ ಮಾಡಲು ಅಡ್ಡಿಯಾಗಿತ್ತು. ಸೇತುವೆ ನಿರ್ಮಾಣದ ಬೇಡಿಕೆ ಇತ್ತು. ಆ ಬೇಡಿಕೆ ಪೂರೈಕೆಯಾಗುತ್ತಿದೆ, ಸೇತುವೆ ನಿರ್ಮಾಣ ಹಂತದಲ್ಲಿದೆ. ಆದರೆ ಸದ್ಯ ಸಂಪರ್ಕ ರಸ್ತೆ ಇಲ್ಲದೆ ಶಾಲಾ ಮಕ್ಕಳು ಪರದಾಟ ನಡೆಸುವಂತಾಗಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಶಾಲಾ ಮಕ್ಕಳು ಈ ರಸ್ತೆಯಲ್ಲಿ ನಿತ್ಯವೂ ಬರುತ್ತಿರುವುದರಿಂದ ತಕ್ಷಣವೇ ಕಡಂಬಳ ಸಂಪರ್ಕ ಸೇತುವೆ ಕಾಮಗಾರಿಯಲ್ಲಿ ತಾತ್ಕಾಲಿಕ ಸಂಪರ್ಕ ವ್ಯವಸ್ಥೆ ಮಾಡಿಸಬೇಕಿದೆ.
ಬಾಲಸುಬ್ರಹ್ಮಣ್ಯ ಎನ್‌ ಜಿ, ಗ್ರಾಮಸ್ಥ

ಕೊಲ್ಲಮೊಗ್ರ  ಕಡಂಬಳ ರಸ್ತೆಯಲ್ಲಿ ಸೇತುವೆ ನಿರ್ಮಾಣವಾಗುತ್ತಿದೆ. ಸದ್ಯ ಪಿಲ್ಲರ್‌ ಮಾತ್ರಾ ರಚನೆಯಾಗಿದೆ. ಈಗ ಮಳೆಯೂ ಆರಂಭವಾಗಿದೆ. ಕಳೆದ ಬಾರಿ ಹಾಗೂ ಅದಕ್ಕಿಂತ ಹಿಂದೆ ರಸ್ತೆ ಸಂಪರ್ಕ ಸರಿಯಾಗಿಲ್ಲದೆ ಹಾಗೂ ಹೊಳೆಯ ಕಾರಣದಿಂದ ಭಾರೀ ಮಳೆಯಾದರೆ 20 ಕುಟುಂಬ ಕೊಲ್ಲಮೊಗ್ರ ಪೇಟೆಯನ್ನು ಸಂಪರ್ಕ ಕಳೆದುಕೊಳ್ಳುತ್ತಿದ್ದರು. ತೀರಾ ಗ್ರಾಮೀಣ ಪ್ರದೇಶವಾದ್ದರಿಂದ ಪರದಾಟ ನಿತ್ಯವೂ ಇತ್ತು. ಇದೀಗ ಮಳೆಯ ಸಂದರ್ಭ ಹೊಸ ಸೇತುವೆ ನಿರ್ಮಾಣ ನಡೆಯುತ್ತಿದೆ. ಈ ಬಾರಿಯೂ ಇಲ್ಲಿನ ಜನರು ಹೊಳೆ ದಾಟಲು ಸಂಕಷ್ಟ ಪಡುವಂತಾಗಿದೆ. ಅದರಲ್ಲೂ ಶಾಲಾ ಮಕ್ಕಳಿಗೆ ನಡೆದಾಡಲು ಸಂಕಷ್ಟವಾಗಿದೆ.  ಸುಮಾರು 15 – ಮಕ್ಕಳ ಈ ದಾರಿಯಾಗಿ ಬರುತ್ತಾರೆ. ಪ್ರಾಥಮಿಕ ಶಾಲಾ ಮಕ್ಕಳೂ ಇದ್ದಾರೆ. ಹೀಗಾಗಿ ಪೋಷಕರಿಗೂ ಭಯದ ವಾತಾವರಣ ನಿರ್ಮಾಣವಾಗಿದೆ. ಮಳೆಯಾದಾಗ ಸೇತುವೆ ಇಲ್ಲದ, ಸಂಪರ್ಕ ಸರಿಯಾಗಿಲ್ಲದ ಈ ದಾರಿಯಲ್ಲಿ ಮಕ್ಕಳು ಬರುವುದು  ಆತಂಕವೂ ಆಗಿದೆ. ಹೀಗಾಗಿ  ಸಂಬಂಧಿತರು ತಕ್ಷಣ ಗಮನಹರಿಸಿ ಸಮಸ್ಯೆ ಬಗೆಹರಿಸಲು ಒತ್ತಾಯ ಕೇಳಿಬಂದಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

5 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

8 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

9 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

10 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

22 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago