Advertisement
The Rural Mirror ಕಾಳಜಿ

#RuralMirror | ಶಾಲಾ ಮಕ್ಕಳಿಗೆ ಸಮಸ್ಯೆ | ಕೊಲ್ಲಮೊಗ್ರದ ಕಡಂಬಳದಲ್ಲಿ ಸಂಪರ್ಕ ರಸ್ತೆ ತಕ್ಷಣ ಬೇಕಿದೆ |

Share

ಗ್ರಾಮೀಣ ಭಾಗದಲ್ಲಿ ನಿತ್ಯವೂ ಒಂದಲ್ಲ ಒಂದು ಸಮಸ್ಯೆ. ರಸ್ತೆ, ಸೇತುವೆ, ವಿದ್ಯುತ್‌, ನೆಟ್ವರ್ಕ್..‌ ಈ ವಿಷಯಗಳು ಗ್ರಾಮೀಣ ಭಾಗದಲ್ಲಿ ಯಾವಾಗಲೂ ಚರ್ಚೆಯ ವಿಷಯ. ಇದೀಗ ಸೇತುವೆ ರಚನೆಯ ಹಂತದಲ್ಲಿದೆ, ಆದರೆ ಸಂಪರ್ಕ ರಸ್ತೆ ಇಲ್ಲದೆ ಶಾಲಾ ಮಕ್ಕಳು ಪರದಾಟದ ಸ್ಥಿತಿಯಲ್ಲಿರುವ ಸಂಗತಿಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗ್ರಾಮೀಣ ಭಾಗವಾದ ಕೊಲ್ಲಮೊಗ್ರದಿಂದ ವರದಿಯಾಗಿದೆ.

ಸುಳ್ಯ ತಾಲೂಕಿನ ಗ್ರಾಮೀಣ ಭಾಗವಾದ  ಕೊಲ್ಲಮೊಗ್ರ ಸಂಪರ್ಕ ಹೊಂದಿರುವ ಪುಟ್ಟ ಹಳ್ಳಿ ಕಡಂಬಳ. ಸುಮಾರು 20-30 ಮನೆಗಳು ಇರುವ ಪ್ರದೇಶ ಇದು. ಇಲ್ಲಿ ಹರಿಯುವ ಹೊಳೆಯೊಂದು ಈ ಊರನ್ನು ಸಂಪರ್ಕ ಮಾಡಲು ಅಡ್ಡಿಯಾಗಿತ್ತು. ಸೇತುವೆ ನಿರ್ಮಾಣದ ಬೇಡಿಕೆ ಇತ್ತು. ಆ ಬೇಡಿಕೆ ಪೂರೈಕೆಯಾಗುತ್ತಿದೆ, ಸೇತುವೆ ನಿರ್ಮಾಣ ಹಂತದಲ್ಲಿದೆ. ಆದರೆ ಸದ್ಯ ಸಂಪರ್ಕ ರಸ್ತೆ ಇಲ್ಲದೆ ಶಾಲಾ ಮಕ್ಕಳು ಪರದಾಟ ನಡೆಸುವಂತಾಗಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಶಾಲಾ ಮಕ್ಕಳು ಈ ರಸ್ತೆಯಲ್ಲಿ ನಿತ್ಯವೂ ಬರುತ್ತಿರುವುದರಿಂದ ತಕ್ಷಣವೇ ಕಡಂಬಳ ಸಂಪರ್ಕ ಸೇತುವೆ ಕಾಮಗಾರಿಯಲ್ಲಿ ತಾತ್ಕಾಲಿಕ ಸಂಪರ್ಕ ವ್ಯವಸ್ಥೆ ಮಾಡಿಸಬೇಕಿದೆ.
ಬಾಲಸುಬ್ರಹ್ಮಣ್ಯ ಎನ್‌ ಜಿ, ಗ್ರಾಮಸ್ಥ

ಕೊಲ್ಲಮೊಗ್ರ  ಕಡಂಬಳ ರಸ್ತೆಯಲ್ಲಿ ಸೇತುವೆ ನಿರ್ಮಾಣವಾಗುತ್ತಿದೆ. ಸದ್ಯ ಪಿಲ್ಲರ್‌ ಮಾತ್ರಾ ರಚನೆಯಾಗಿದೆ. ಈಗ ಮಳೆಯೂ ಆರಂಭವಾಗಿದೆ. ಕಳೆದ ಬಾರಿ ಹಾಗೂ ಅದಕ್ಕಿಂತ ಹಿಂದೆ ರಸ್ತೆ ಸಂಪರ್ಕ ಸರಿಯಾಗಿಲ್ಲದೆ ಹಾಗೂ ಹೊಳೆಯ ಕಾರಣದಿಂದ ಭಾರೀ ಮಳೆಯಾದರೆ 20 ಕುಟುಂಬ ಕೊಲ್ಲಮೊಗ್ರ ಪೇಟೆಯನ್ನು ಸಂಪರ್ಕ ಕಳೆದುಕೊಳ್ಳುತ್ತಿದ್ದರು. ತೀರಾ ಗ್ರಾಮೀಣ ಪ್ರದೇಶವಾದ್ದರಿಂದ ಪರದಾಟ ನಿತ್ಯವೂ ಇತ್ತು. ಇದೀಗ ಮಳೆಯ ಸಂದರ್ಭ ಹೊಸ ಸೇತುವೆ ನಿರ್ಮಾಣ ನಡೆಯುತ್ತಿದೆ. ಈ ಬಾರಿಯೂ ಇಲ್ಲಿನ ಜನರು ಹೊಳೆ ದಾಟಲು ಸಂಕಷ್ಟ ಪಡುವಂತಾಗಿದೆ. ಅದರಲ್ಲೂ ಶಾಲಾ ಮಕ್ಕಳಿಗೆ ನಡೆದಾಡಲು ಸಂಕಷ್ಟವಾಗಿದೆ.  ಸುಮಾರು 15 – ಮಕ್ಕಳ ಈ ದಾರಿಯಾಗಿ ಬರುತ್ತಾರೆ. ಪ್ರಾಥಮಿಕ ಶಾಲಾ ಮಕ್ಕಳೂ ಇದ್ದಾರೆ. ಹೀಗಾಗಿ ಪೋಷಕರಿಗೂ ಭಯದ ವಾತಾವರಣ ನಿರ್ಮಾಣವಾಗಿದೆ. ಮಳೆಯಾದಾಗ ಸೇತುವೆ ಇಲ್ಲದ, ಸಂಪರ್ಕ ಸರಿಯಾಗಿಲ್ಲದ ಈ ದಾರಿಯಲ್ಲಿ ಮಕ್ಕಳು ಬರುವುದು  ಆತಂಕವೂ ಆಗಿದೆ. ಹೀಗಾಗಿ  ಸಂಬಂಧಿತರು ತಕ್ಷಣ ಗಮನಹರಿಸಿ ಸಮಸ್ಯೆ ಬಗೆಹರಿಸಲು ಒತ್ತಾಯ ಕೇಳಿಬಂದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

8 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

9 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

9 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

10 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

10 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

10 hours ago