Advertisement
The Rural Mirror ಕಾಳಜಿ

#RuralMirror | ಶಾಲಾ ಮಕ್ಕಳಿಗೆ ಸಮಸ್ಯೆ | ಕೊಲ್ಲಮೊಗ್ರದ ಕಡಂಬಳದಲ್ಲಿ ಸಂಪರ್ಕ ರಸ್ತೆ ತಕ್ಷಣ ಬೇಕಿದೆ |

Share

ಗ್ರಾಮೀಣ ಭಾಗದಲ್ಲಿ ನಿತ್ಯವೂ ಒಂದಲ್ಲ ಒಂದು ಸಮಸ್ಯೆ. ರಸ್ತೆ, ಸೇತುವೆ, ವಿದ್ಯುತ್‌, ನೆಟ್ವರ್ಕ್..‌ ಈ ವಿಷಯಗಳು ಗ್ರಾಮೀಣ ಭಾಗದಲ್ಲಿ ಯಾವಾಗಲೂ ಚರ್ಚೆಯ ವಿಷಯ. ಇದೀಗ ಸೇತುವೆ ರಚನೆಯ ಹಂತದಲ್ಲಿದೆ, ಆದರೆ ಸಂಪರ್ಕ ರಸ್ತೆ ಇಲ್ಲದೆ ಶಾಲಾ ಮಕ್ಕಳು ಪರದಾಟದ ಸ್ಥಿತಿಯಲ್ಲಿರುವ ಸಂಗತಿಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗ್ರಾಮೀಣ ಭಾಗವಾದ ಕೊಲ್ಲಮೊಗ್ರದಿಂದ ವರದಿಯಾಗಿದೆ.

ಸುಳ್ಯ ತಾಲೂಕಿನ ಗ್ರಾಮೀಣ ಭಾಗವಾದ  ಕೊಲ್ಲಮೊಗ್ರ ಸಂಪರ್ಕ ಹೊಂದಿರುವ ಪುಟ್ಟ ಹಳ್ಳಿ ಕಡಂಬಳ. ಸುಮಾರು 20-30 ಮನೆಗಳು ಇರುವ ಪ್ರದೇಶ ಇದು. ಇಲ್ಲಿ ಹರಿಯುವ ಹೊಳೆಯೊಂದು ಈ ಊರನ್ನು ಸಂಪರ್ಕ ಮಾಡಲು ಅಡ್ಡಿಯಾಗಿತ್ತು. ಸೇತುವೆ ನಿರ್ಮಾಣದ ಬೇಡಿಕೆ ಇತ್ತು. ಆ ಬೇಡಿಕೆ ಪೂರೈಕೆಯಾಗುತ್ತಿದೆ, ಸೇತುವೆ ನಿರ್ಮಾಣ ಹಂತದಲ್ಲಿದೆ. ಆದರೆ ಸದ್ಯ ಸಂಪರ್ಕ ರಸ್ತೆ ಇಲ್ಲದೆ ಶಾಲಾ ಮಕ್ಕಳು ಪರದಾಟ ನಡೆಸುವಂತಾಗಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಶಾಲಾ ಮಕ್ಕಳು ಈ ರಸ್ತೆಯಲ್ಲಿ ನಿತ್ಯವೂ ಬರುತ್ತಿರುವುದರಿಂದ ತಕ್ಷಣವೇ ಕಡಂಬಳ ಸಂಪರ್ಕ ಸೇತುವೆ ಕಾಮಗಾರಿಯಲ್ಲಿ ತಾತ್ಕಾಲಿಕ ಸಂಪರ್ಕ ವ್ಯವಸ್ಥೆ ಮಾಡಿಸಬೇಕಿದೆ.
ಬಾಲಸುಬ್ರಹ್ಮಣ್ಯ ಎನ್‌ ಜಿ, ಗ್ರಾಮಸ್ಥ

ಕೊಲ್ಲಮೊಗ್ರ  ಕಡಂಬಳ ರಸ್ತೆಯಲ್ಲಿ ಸೇತುವೆ ನಿರ್ಮಾಣವಾಗುತ್ತಿದೆ. ಸದ್ಯ ಪಿಲ್ಲರ್‌ ಮಾತ್ರಾ ರಚನೆಯಾಗಿದೆ. ಈಗ ಮಳೆಯೂ ಆರಂಭವಾಗಿದೆ. ಕಳೆದ ಬಾರಿ ಹಾಗೂ ಅದಕ್ಕಿಂತ ಹಿಂದೆ ರಸ್ತೆ ಸಂಪರ್ಕ ಸರಿಯಾಗಿಲ್ಲದೆ ಹಾಗೂ ಹೊಳೆಯ ಕಾರಣದಿಂದ ಭಾರೀ ಮಳೆಯಾದರೆ 20 ಕುಟುಂಬ ಕೊಲ್ಲಮೊಗ್ರ ಪೇಟೆಯನ್ನು ಸಂಪರ್ಕ ಕಳೆದುಕೊಳ್ಳುತ್ತಿದ್ದರು. ತೀರಾ ಗ್ರಾಮೀಣ ಪ್ರದೇಶವಾದ್ದರಿಂದ ಪರದಾಟ ನಿತ್ಯವೂ ಇತ್ತು. ಇದೀಗ ಮಳೆಯ ಸಂದರ್ಭ ಹೊಸ ಸೇತುವೆ ನಿರ್ಮಾಣ ನಡೆಯುತ್ತಿದೆ. ಈ ಬಾರಿಯೂ ಇಲ್ಲಿನ ಜನರು ಹೊಳೆ ದಾಟಲು ಸಂಕಷ್ಟ ಪಡುವಂತಾಗಿದೆ. ಅದರಲ್ಲೂ ಶಾಲಾ ಮಕ್ಕಳಿಗೆ ನಡೆದಾಡಲು ಸಂಕಷ್ಟವಾಗಿದೆ.  ಸುಮಾರು 15 – ಮಕ್ಕಳ ಈ ದಾರಿಯಾಗಿ ಬರುತ್ತಾರೆ. ಪ್ರಾಥಮಿಕ ಶಾಲಾ ಮಕ್ಕಳೂ ಇದ್ದಾರೆ. ಹೀಗಾಗಿ ಪೋಷಕರಿಗೂ ಭಯದ ವಾತಾವರಣ ನಿರ್ಮಾಣವಾಗಿದೆ. ಮಳೆಯಾದಾಗ ಸೇತುವೆ ಇಲ್ಲದ, ಸಂಪರ್ಕ ಸರಿಯಾಗಿಲ್ಲದ ಈ ದಾರಿಯಲ್ಲಿ ಮಕ್ಕಳು ಬರುವುದು  ಆತಂಕವೂ ಆಗಿದೆ. ಹೀಗಾಗಿ  ಸಂಬಂಧಿತರು ತಕ್ಷಣ ಗಮನಹರಿಸಿ ಸಮಸ್ಯೆ ಬಗೆಹರಿಸಲು ಒತ್ತಾಯ ಕೇಳಿಬಂದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

2 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

9 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago