Advertisement
MIRROR FOCUS

#Agriculture | ವಿಪರೀತ ಬೀಳುತ್ತಿದೆ ಎಳೆ ಅಡಿಕೆ | ಬಾಡಿದ ಅಡಿಕೆ ಮರದ ಗರಿಗಳು | ಮಳೆ ಬಂದರೂ ತಂಪಾಗದ ವಾತಾವರಣ ಕಾರಣವೇ ? |

Share

ಈ ಬಾರಿಯ ಮಳೆಗಾಲದ ವಾತಾವರಣ ವಿಚಿತ್ರವಾಗಿದೆ. ಜೂನ್‌ ತಿಂಗಳಲ್ಲಿ ಮುಂಗಾರು ದುರ್ಬಲವಾಯಿತು. ಜುಲೈ ಅಂತ್ಯವಾಗುತ್ತಾ ಬಂದರೂ ಮಳೆಯ ಪ್ರಮಾಣ ಸುಧಾರಿಸಿಲ್ಲ. ಇದೀಗ ಹಲವು ಕಡೆ ಎಳೆ ಅಡಿಕೆ ವಿಪರೀತ ಬೀಳುತ್ತಿರುವ ಬಗ್ಗೆ ಚರ್ಚೆ ಆರಂಭವಾಗಿದೆ. ಅಡಿಕೆ ಮರದ ಸೋಗೆಗಳು ಎಲೆಚುಕ್ಕಿ ಮಾದರಿಯಲ್ಲಿ ಕಂಡುಬರುತ್ತಿದೆ. ಮಳೆ ಬಿಟ್ಟ ತಕ್ಷಣವೇ ಸೆಖೆಯ ವಾತಾವರಣ ಕಂಡುಬರುತ್ತಿದೆ. ಇದೆಲ್ಲಾ ಅಡಿಕೆ ಕೃಷಿಯ ಮೇಲೆ ಪರಿಣಾಮ ಬೀರುತ್ತಿದೆಯೇ…?

Advertisement
Advertisement
Advertisement
Advertisement

Advertisement

ಅಡಿಕೆ ಬೆಳೆಗಾರರಿಗೆ ಈ ಬಾರಿ ಚಿಂತೆ ಆರಂಭವಾಗಿದೆ. ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಇದುವರೆಗೆ ಇಂತಹ ಚಿಂತೆ ಇರಲಿಲ್ಲ. ಈ ಬಾರಿಯ ಬೇಸಗೆಯಲ್ಲಿ ನೀರಿನ ಕೊರತೆ ಕಾಡಿತ್ತು, ಅಡಿಕೆ ಬೆಳೆಗಾರರಿಗೆ. ಜನವರಿಯಿಂದ ಜೂನ್‌ವರೆಗೂ ಮಳೆ ಕಾಣಲಿಲ್ಲ. ಹೀಗಾಗಿ ಕೊಳವೆಬಾವಿ, ಕೆರೆ ನೀರಿನ ಬಳಕೆ ಹೆಚ್ಚಾಗಿತ್ತು. ಹಲವು ಕೊಳವೆ ಬಾವಿಗಳ ನೀರಿನ ಮಟ್ಟ ಇಳಿಕೆಯಾಗಿತ್ತು. ವಾತಾವರಣದ ಉಷ್ಣತೆ ವಿಪರೀತವಾಗಿ ಏರಿಕೆಯಾಗಿತ್ತು. ಪರಿಣಾಮ ಹಲವು ತೋಟಗಳು ಒಣಗಿದವು. ಮಳೆ ಜೂನ್‌ ತಿಂಗಳಲಲಿ ವಿಳಂಬವಾಯಿತು. ಜುಲೈ ತಿಂಗಳಿನಿಂದ ಮಳೆಯಾದರೂ ಮುಂಗಾರು ದುರ್ಬಲ.

Advertisement

ಇದೀಗ ಎಳೆ ಅಡಿಕೆ ಬೀಳುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಕೊಳೆರೋಗದ ಮಾದರಿಯಲ್ಲಿ ಅಡಿಕೆ ಬೀಳುತ್ತಿದೆ ಎಂದು ಹಲವು ಕೃಷಿಕರು ಹೇಳುತ್ತಾರೆ. ಸಾಮಾನ್ಯವಾಗಿ ಜೂನ್‌ ತಿಂಗಳಲ್ಲಿ ಪೆಂತಿ ಕೀಟದ ಸಮಸ್ಯೆಯಿಂದ ಎಳೆ ಅಡಿಕೆ ಬೀಳುವುದು ಕಂಡುಬರುತ್ತದೆ. ಆದರೆ ಈಗ ಅಡಿಕೆಯಲ್ಲಿ ಯಾವ ಸಮಸ್ಯೆಯೂ ಕಾಣದೆ ಎಳೆ ಅಡಿಕೆ ಬೀಳುವುದು  ವಾತಾವರಣದ ಕಾರಣದಿಂದಲೇ ಎಂಬುದು ಚರ್ಚೆಯ ವಿಷಯವಾಗಿದೆ. ಈ ಬಗ್ಗೆ ಕೃಷಿಕರೇ ಹೆಚ್ಚು ಗಮನಿಸಿ ವಿಜ್ಞಾನಿಗಳಿಗೆ ಮಾಹಿತಿ ನೀಡುವುದು ಅವಶ್ಯವಾಗಿದೆ. ಜುಲೈ ಅಂತ್ಯವಾದರೂ ವಾತಾವರಣದ ಉಷ್ಣತೆ ಕಡಿಮೆಯಾದಂತೆ ಕಾಣುತ್ತಿಲ್ಲ. ಈ ಕಾರಣದಿಂದಲೇ ಎಳೆ ಅಡಿಕೆ ಬೀಳುತ್ತಿದೆಯೇ ಎನ್ನುವುದು  ಸಂದೇಹವಾಗಿದೆ. ಪ್ರತೀ ಬಾರಿ ಜೂನ್‌ ತಿಂಗಳಲ್ಲಿ ಬೋರ್ಡೋ ಸಿಂಪಡಣೆಯ ಬಳಿಕ ಎಳೆ ಅಡಿಕೆ ಬೀಳುವ ಸಮಸ್ಯೆ ಕಡಿಮೆಯಾಗುತ್ತಿತ್ತು. ಆದರೆ ಈ ಬಾರಿ ಎರಡು ಬಾರಿ ಸಿಂಪಡಣೆ ಆದ ತೋಟದಲ್ಲೂ ಅಡಿಕೆ ಬೀಳುವುದು ನಿಂತಿಲ್ಲ. ಹೀಗಾಗಿ ಈ ಬಾರಿಯ ಅಡಿಕೆ ಫಸಲಿನ ಮೇಲೆ ಹೊಡೆತ ಬೀಳುವ ಸಾಧ್ಯತೆ ಇದೆ.

Advertisement

ಇದೇ ವೇಳೆ ಅಡಿಕೆ ಮರದ ಸೋಗೆಗಳು ಒಣಗಿದಂತೆ ಕಾಣುತ್ತಿದೆ. ಇದು ಕೂಡಾ ಬೇಸಗೆಯಲ್ಲಿ ನೀರಿನ ಕೊರತೆಯಿಂದ ಒಣಗಿದ ಕಾರಣದಿಂದಲೇ ಎಲೆಚುಕ್ಕಿ ಮಾದರಿಯಲ್ಲಿ ಈಗ ಕಾಣುತ್ತಿದೆ. ಇದೆಲ್ಲವೂ ಕೃಷಿಕರಿಗೆ ಚಿಂತೆಗೆ ಕಾರಣವಾಗಿದೆ.

ಈ ನಡುವೆ ಈ ಬಾರಿ ರಬ್ಬರ್‌ ಇಳುವರಿಯಲ್ಲೂ ಕೊರತೆ ಇದೆ. ತೆಂಗಿನ ಕೃಷಿಯಲ್ಲೂ ಇಳುವರಿ ಕೊರತೆಯಾಗಿರುವ ಬಗ್ಗೆ ಕೃಷಿಕರು ಮಾಹಿತಿ ನೀಡುತ್ತಾರೆ. ಈ ಬಾರಿಯ ವಾತಾವರಣವು ಹಲವು ಕೃಷಿಗೆ ಸಮಸ್ಯೆಯಾದಂತೆ ಕಂಡುಬಂದಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

7 hours ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

22 hours ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

1 day ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

1 day ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

1 day ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

2 days ago