ಅರಣ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ವಹಿಸಲಾಗಿದ್ದು, 540 ಅರಣ್ಯ ರಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ವಿಧಾನಪರಿಷತ್ತಿನಲ್ಲಿ ಎಸ್.ಕೇಶವ ಪ್ರಸಾದ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕಾಡಾನೆ ದಾಳಿ, ಹುಲಿ ದಾಳಿ ಸೇರಿದಂತೆ ವನ್ಯಜೀವಿ ದಾಳಿಯಿಂದ ಮೃತಪಟ್ಟವರಿಗೆ 20 ಲಕ್ಷ ರೂಪಾಯಿ ಹಾಗೂ ಹಾವು ಕಚ್ಚಿ ಮೃತಪಟ್ಟವರಿಗೆ ಕೃಷಿ ಇಲಾಖೆಯ ವತಿಯಿಂದ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕವಾಗಿ ಆನೆ ಕಾರ್ಯಪಡೆ ಮಂಜೂರು ಮಾಡಲು ಸೂಚಿಸಲಾಗಿದ್ದು, 2-3 ದಿನಗಳಲ್ಲಿ ಅಧಿಕೃತವಾಗಿ ಪ್ರಕಟಿಸಲಾಗುವುದು. ಆನೆಪಥ ಮತ್ತು ಆವಾಸಸ್ಥಾನ ಸಂರಕ್ಷಣೆಗಾಗಿ ಅಧ್ಯಯನ ನಡೆಸಲು ಐಐಎಸ್ಸಿಯೊಂದಿಗೆ ತಿಳುವಳಿಕೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಪ್ರೊ. ಆರ್. ಸುಕುಮಾರ್ ಅವರ ತಂಡ ಅಧ್ಯಯನ ಆರಂಭಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಮಂಗಗಳ ಹಾವಳಿಯಿಂದ ಬೆಳೆ ಹಾನಿ ಆಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಮಂಗಗಳನ್ನು ಹಿಡಿಯಲು ಸೂಚನೆ ನೀಡುವುದಾಗಿ ಸದನಕ್ಕೆ ತಿಳಿಸಿದ್ದಾರೆ.
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…