ಪ್ಲಾಸ್ಟಿಕ್ #Plastic ಎಂಬ ಪೆಡಂಭೂತ ಇಡೀ ವಿಶ್ವವನ್ನೇ ತಿಂದು ಹಾಕುತಿದೆ. ಈ ಸಮಸ್ಯೆಯಿಂದ ಹೊರ ಬರಲು ಅನೇಕ ದೇಶಗಳು ಹೆಣಗಾಡುತ್ತಿವೆ. ಅನೇಕ ಕ್ರಮಗಳನ್ನು ಸರ್ಕಾರ, ಸಂಘಸಂಸ್ಥೆಗಳು, ಎನ್ಜಿಓಗಳು ತೆಗೆದುಕೊಳ್ಳುತ್ತಲೇ ಇದೆ. ಆದರೆ ಪ್ಲಾಸ್ಟಿಕ್ ಹಾವಳಿ ಎಗ್ಗಿಲ್ಲದೆ ನಡೆಯುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿಯಲ್ಲಿ ಏಕ ಬಳಕೆ ಫ್ಲಾಸ್ಟಿಕ್ಗಳನ್ನು ಬ್ಯಾನ್ ಮಾಡಿ ಒಂದು ವರ್ಷವೇ ಕಳೆದಿದೆ. ಆದರೆ ಬೆಂಗಳೂರಿನಲ್ಲಿ ಮಾತ್ರ ಪ್ಲಾಸ್ಟಿಕ್ ಇನ್ನೂ ಓಡಾಡುತ್ತಿದೆ…!
ಈ ಬ್ಯಾನ್ ಕೇವಲ ಹೆಸರಿಗೆ ಮಾತ್ರ ಎನ್ನುವಂತೆ ಕಾಣುತ್ತಿದೆ. ಯಾಕೆಂದರೆ ರಾಜಧಾನಿಯಲ್ಲಿ ಯಾವುದೇ ಅಧಿಕಾರಿಗಳ ಭಯವಿಲ್ಲದೇ ಕಾರ್ಖಾನೆಗಳಲ್ಲಿ ಫ್ಲಾಸ್ಟಿಕ್ ತಯಾರಾಗುತ್ತಿದ್ದು, ಅಧಿಕಾರಿಗಳು ಮಾತ್ರ ಏನೂ ಗೊತ್ತಿಲ್ಲದಂತೆ ಕಣ್ಮುಚ್ಚಿ ಕುಳಿತಿದ್ದಾರೆ. ಹೌದು, ರಾಜಧಾನಿಯಲ್ಲಿ ಒಂದು ವರ್ಷದ ಹಿಂದೆ ಪ್ಲಾಸ್ಟಿಕ್ ಬ್ಯಾನ್ ಆಗಿತ್ತು. ಇನ್ನು ಸಿಂಗಲ್ ಯೂಸ್ ಪ್ಲಾಸ್ಟಿಕ್ಗಳನ್ನ ಬಳಕೆ ಮಾಡಿದರೆ ಫೈನ್ ಹಾಕುವುದಾಗಿ ಅಧಿಕಾರಿಗಳು ಹೇಳಿದ್ದರು. ಇನ್ನು ಸಣ್ಣ-ಪುಟ್ಟ ವ್ಯಾಪಾರಸ್ಥರು ಪ್ಲಾಸ್ಟಿಕ್ ಬಳಸಿದ್ರೆ ಪೌರುಷ ತೋರಿಸುವ ಅಧಿಕಾರಿಗಳು ರಾಜಾರೋಷವಾಗಿ ಕಾರ್ಖಾನೆಗಳಲ್ಲಿ ಪ್ಲಾಸ್ಟಿಕ್ ತಯಾರಾಗುತ್ತಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಹೀಗಾಗಿ ಯಲಚೇನಹಳ್ಳಿಯ ನಾಯ್ಡು ಲೇಔಟ್ ನಲ್ಲಿ ಪ್ಲಾಸ್ಟಿಕ್ ತಯಾರಿ ಮಾಡಿ, ತಮಗಿಷ್ಟದ ಬೆಲೆ ಮಾರಾಟ ಮಾಡ್ತಿದ್ದಾರೆ.
ಈ ಸಿಂಗಲ್ ಯೂಸ್ ಪ್ಲಾಸ್ಟಿಕ್ ತಯಾರು ಮಾಡ್ಬೇಕು ಅಂತ ಹೇಳಿದ್ರೆ ಪರಿಸರ ನಿಯಂತ್ರಣ ಮಂಡಳಿಯಿಂದ ಒಪ್ಪಿಗೆ ಪಡಿಯಬೇಕು. ಆದರೆ ಈ ಪ್ಲಾಸ್ಟಿಕ್ ತಯಾರಿಕಾ ಘಟಕದ ಮಾಲೀಕರು ಯಾವುದೇ ಅನುಮತಿ ಪಡೆಯದೇ ಯಾರಿಸುವುದಲ್ಲದೇ, ಎಲ್ಲರೂ ತಾಯಾರಿ ಮಾಡ್ತಿದ್ದಾರೆ. ಇನ್ನು, ಈ ಕುರಿತಾಗಿ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿದ್ದಂತೆ ಸ್ಥಳ ವೀಕ್ಷಣೆ ಮಾಡಿ ಸ್ಥಳೀಯ ಎಇ ದೂರು ದಾಖಾಲಿಸಿಕೊಂಡಿದ್ದಾರೆ. ಜೊತೆಗೆ ಪ್ಲಾಸ್ಟಿಕ್ ತಯಾರಿಕಾ ಘಟಕದ ಬೆಸ್ಕಾಂ ಪವರ್ ಲೈನ್ ಕಟ್ ಮಾಡುವುದಾಗಿ ಹೇಳಿದ್ದಾರೆ. ಒಟ್ನಲ್ಲಿ, ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಎನ್ನುವ ಮಾಲಿನ್ಯ ನಿಯಂತ್ರಣ ಮಂಡಳಿ ಪ್ಲಾಸ್ಟಿಕ್ ತಯಾರಿಕಾ ಘಟಕಗಳ ಮೇಲೆ ನಿರ್ಧಾಕ್ಷಿಣ್ಯ ಕ್ರಮ ಜರುಗಿಸದೇ ಇರುವುದುದೇ ಸಧ್ಯ ಪ್ಲಾಸ್ಟಿಕ್ ತಯಾರಿಕೆಗೆ ಕಾರಣವಾಗುತ್ತಿದ್ದು, ಕಾರ್ಖಾನೆಗಳ ಮೇಲೆ ಮಾಲಿನ್ಯ ನಿಯಂತ್ರಣ ಮಂಡಳಿ ಹದ್ದಿನ ಕಣ್ಣಿಡಬೇಕಿದೆ.
(ಅಂತರ್ಜಾಲ ಮಾಹಿತಿ)
ಎತ್ತಿನ ಹೊಳೆ ಯೋಜನೆಯ ಮೂಲಕ ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…
ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಎಲ್ಲಾದರೂ ನೋಡಿದ್ದೀರಾ.. ಧರ್ಮರಾಯ, ಕೃಷ್ಣ, ಕರ್ಣ, ಭೀಷ್ಮ.. ಮೊದಲಾದ ಹೆಸರುಗಳನ್ನು ನಂನಮ್ಮ ಸಾಧನೆಗಳಿಗೆ…
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…
ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…
ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…