MIRROR FOCUS

#Plasticban |ರಾಜಧಾನಿಯಲ್ಲಿ ಬ್ಯಾನ್‌ ಆದ್ರೂ ನಿಲ್ಲದ ಪ್ಲಾಸ್ಟಿಕ್‌ ಉತ್ಪಾದನೆ | ಎಗ್ಗಿಲ್ಲದೇ ನಡೆಯೋ ದಂಧೆ ಬಗ್ಗೆ ತಲೆಕೆಡಿಸಿಕೊಳ್ಳದ ಮಾಲಿನ್ಯ ನಿಯಂತ್ರಣ ‌ಮಂಡಳಿ |

Share

ಪ್ಲಾಸ್ಟಿಕ್‌ #Plastic ಎಂಬ ಪೆಡಂಭೂತ ಇಡೀ ವಿಶ್ವವನ್ನೇ ತಿಂದು ಹಾಕುತಿದೆ. ಈ ಸಮಸ್ಯೆಯಿಂದ ಹೊರ ಬರಲು ಅನೇಕ ದೇಶಗಳು ಹೆಣಗಾಡುತ್ತಿವೆ. ಅನೇಕ ಕ್ರಮಗಳನ್ನು ಸರ್ಕಾರ, ಸಂಘಸಂಸ್ಥೆಗಳು, ಎನ್‌ಜಿಓಗಳು ತೆಗೆದುಕೊಳ್ಳುತ್ತಲೇ ಇದೆ. ಆದರೆ ಪ್ಲಾಸ್ಟಿಕ್‌ ಹಾವಳಿ ಎಗ್ಗಿಲ್ಲದೆ ನಡೆಯುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿಯಲ್ಲಿ ಏಕ ಬಳಕೆ ಫ್ಲಾಸ್ಟಿಕ್​ಗಳನ್ನು ಬ್ಯಾನ್ ಮಾಡಿ ಒಂದು ವರ್ಷವೇ ಕಳೆದಿದೆ. ಆದರೆ ಬೆಂಗಳೂರಿನಲ್ಲಿ ಮಾತ್ರ ಪ್ಲಾಸ್ಟಿಕ್ ಇನ್ನೂ ಓಡಾಡುತ್ತಿದೆ…!

ಈ ಬ್ಯಾನ್ ಕೇವಲ ಹೆಸರಿಗೆ ಮಾತ್ರ ಎನ್ನುವಂತೆ ಕಾಣುತ್ತಿದೆ.‌ ಯಾಕೆಂದರೆ ರಾಜಧಾನಿಯಲ್ಲಿ ಯಾವುದೇ ಅಧಿಕಾರಿಗಳ‌ ಭಯವಿಲ್ಲದೇ ಕಾರ್ಖಾನೆಗಳಲ್ಲಿ ಫ್ಲಾಸ್ಟಿಕ್ ತಯಾರಾಗುತ್ತಿದ್ದು, ಅಧಿಕಾರಿಗಳು ಮಾತ್ರ ಏನೂ ಗೊತ್ತಿಲ್ಲದಂತೆ ಕಣ್ಮುಚ್ಚಿ ಕುಳಿತಿದ್ದಾರೆ.‌ ಹೌದು, ರಾಜಧಾನಿಯಲ್ಲಿ ಒಂದು ವರ್ಷದ ಹಿಂದೆ ಪ್ಲಾಸ್ಟಿಕ್ ಬ್ಯಾನ್ ಆಗಿತ್ತು. ಇನ್ನು ಸಿಂಗಲ್ ಯೂಸ್ ಪ್ಲಾಸ್ಟಿಕ್​ಗಳನ್ನ ಬಳಕೆ ಮಾಡಿದರೆ ಫೈನ್ ಹಾಕುವುದಾಗಿ ಅಧಿಕಾರಿಗಳು ಹೇಳಿದ್ದರು.‌ ಇನ್ನು ಸಣ್ಣ-ಪುಟ್ಟ ವ್ಯಾಪಾರಸ್ಥರು ಪ್ಲಾಸ್ಟಿಕ್ ಬಳಸಿದ್ರೆ ಪೌರುಷ ತೋರಿಸುವ ಅಧಿಕಾರಿಗಳು ರಾಜಾರೋಷವಾಗಿ ಕಾರ್ಖಾನೆಗಳಲ್ಲಿ ಪ್ಲಾಸ್ಟಿಕ್ ತಯಾರಾಗುತ್ತಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಹೀಗಾಗಿ ಯಲಚೇನಹಳ್ಳಿಯ ನಾಯ್ಡು ಲೇಔಟ್ ನಲ್ಲಿ ಪ್ಲಾಸ್ಟಿಕ್ ತಯಾರಿ ಮಾಡಿ, ತಮಗಿಷ್ಟದ ಬೆಲೆ ಮಾರಾಟ ಮಾಡ್ತಿದ್ದಾರೆ.

ಈ ಸಿಂಗಲ್ ಯೂಸ್ ಪ್ಲಾಸ್ಟಿಕ್ ತಯಾರು ಮಾಡ್ಬೇಕು ಅಂತ ಹೇಳಿದ್ರೆ ಪರಿಸರ ನಿಯಂತ್ರಣ ಮಂಡಳಿಯಿಂದ ಒಪ್ಪಿಗೆ ಪಡಿಯಬೇಕು. ಆದರೆ ಈ ಪ್ಲಾಸ್ಟಿಕ್ ತಯಾರಿಕಾ ಘಟಕದ ಮಾಲೀಕರು ಯಾವುದೇ ಅನುಮತಿ ಪಡೆಯದೇ ಯಾರಿಸುವುದಲ್ಲದೇ, ಎಲ್ಲರೂ ತಾಯಾರಿ ಮಾಡ್ತಿದ್ದಾರೆ. ಇನ್ನು, ಈ ಕುರಿತಾಗಿ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿದ್ದಂತೆ ಸ್ಥಳ ವೀಕ್ಷಣೆ ಮಾಡಿ ಸ್ಥಳೀಯ ಎಇ ದೂರು ದಾಖಾಲಿಸಿಕೊಂಡಿದ್ದಾರೆ. ಜೊತೆಗೆ ಪ್ಲಾಸ್ಟಿಕ್ ತಯಾರಿಕಾ ಘಟಕದ ಬೆಸ್ಕಾಂ ಪವರ್ ಲೈನ್ ಕಟ್ ಮಾಡುವುದಾಗಿ ಹೇಳಿದ್ದಾರೆ. ಒಟ್ನಲ್ಲಿ, ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಎನ್ನುವ ಮಾಲಿನ್ಯ ನಿಯಂತ್ರಣ ಮಂಡಳಿ ಪ್ಲಾಸ್ಟಿಕ್ ತಯಾರಿಕಾ ಘಟಕಗಳ‌ ಮೇಲೆ ನಿರ್ಧಾಕ್ಷಿಣ್ಯ ಕ್ರಮ ಜರುಗಿಸದೇ ಇರುವುದುದೇ ಸಧ್ಯ ಪ್ಲಾಸ್ಟಿಕ್ ತಯಾರಿಕೆಗೆ ಕಾರಣವಾಗುತ್ತಿದ್ದು, ಕಾರ್ಖಾನೆಗಳ ಮೇಲೆ ಮಾಲಿನ್ಯ ನಿಯಂತ್ರಣ ಮಂಡಳಿ ಹದ್ದಿನ ಕಣ್ಣಿಡಬೇಕಿದೆ.‌

(ಅಂತರ್ಜಾಲ ಮಾಹಿತಿ)

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…

5 hours ago

ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…

5 hours ago

ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…

5 hours ago

ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ

ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…

6 hours ago

ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದರೆ ಯಶಸ್ಸು ಲಭಿಸುತ್ತದೆ – ಶಿಕ್ಷಣ ತಜ್ಞ ಗುರುರಾಜ ಕರ್ಜಗಿ

ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು, ಪೂರ್ವಭಾವಿ ತಯಾರಿ ಮಾಡಿಕೊಂಡು, ಆತ್ಮವಿಶ್ವಾಸದಿಂದ ಪರೀಕ್ಷೆ…

6 hours ago

ಎಪ್ರಿಲ್‌ನಲ್ಲಿ ಶುಕ್ರನು 9 ರಾಶಿಗಳಲ್ಲಿ ವಿವಿಧ ಪರಿಣಾಮಗಳನ್ನು ಉಂಟುಮಾಡಬಹುದು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490.

6 hours ago