Advertisement
MIRROR FOCUS

#Plasticban |ರಾಜಧಾನಿಯಲ್ಲಿ ಬ್ಯಾನ್‌ ಆದ್ರೂ ನಿಲ್ಲದ ಪ್ಲಾಸ್ಟಿಕ್‌ ಉತ್ಪಾದನೆ | ಎಗ್ಗಿಲ್ಲದೇ ನಡೆಯೋ ದಂಧೆ ಬಗ್ಗೆ ತಲೆಕೆಡಿಸಿಕೊಳ್ಳದ ಮಾಲಿನ್ಯ ನಿಯಂತ್ರಣ ‌ಮಂಡಳಿ |

Share

ಪ್ಲಾಸ್ಟಿಕ್‌ #Plastic ಎಂಬ ಪೆಡಂಭೂತ ಇಡೀ ವಿಶ್ವವನ್ನೇ ತಿಂದು ಹಾಕುತಿದೆ. ಈ ಸಮಸ್ಯೆಯಿಂದ ಹೊರ ಬರಲು ಅನೇಕ ದೇಶಗಳು ಹೆಣಗಾಡುತ್ತಿವೆ. ಅನೇಕ ಕ್ರಮಗಳನ್ನು ಸರ್ಕಾರ, ಸಂಘಸಂಸ್ಥೆಗಳು, ಎನ್‌ಜಿಓಗಳು ತೆಗೆದುಕೊಳ್ಳುತ್ತಲೇ ಇದೆ. ಆದರೆ ಪ್ಲಾಸ್ಟಿಕ್‌ ಹಾವಳಿ ಎಗ್ಗಿಲ್ಲದೆ ನಡೆಯುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿಯಲ್ಲಿ ಏಕ ಬಳಕೆ ಫ್ಲಾಸ್ಟಿಕ್​ಗಳನ್ನು ಬ್ಯಾನ್ ಮಾಡಿ ಒಂದು ವರ್ಷವೇ ಕಳೆದಿದೆ. ಆದರೆ ಬೆಂಗಳೂರಿನಲ್ಲಿ ಮಾತ್ರ ಪ್ಲಾಸ್ಟಿಕ್ ಇನ್ನೂ ಓಡಾಡುತ್ತಿದೆ…!

ಈ ಬ್ಯಾನ್ ಕೇವಲ ಹೆಸರಿಗೆ ಮಾತ್ರ ಎನ್ನುವಂತೆ ಕಾಣುತ್ತಿದೆ.‌ ಯಾಕೆಂದರೆ ರಾಜಧಾನಿಯಲ್ಲಿ ಯಾವುದೇ ಅಧಿಕಾರಿಗಳ‌ ಭಯವಿಲ್ಲದೇ ಕಾರ್ಖಾನೆಗಳಲ್ಲಿ ಫ್ಲಾಸ್ಟಿಕ್ ತಯಾರಾಗುತ್ತಿದ್ದು, ಅಧಿಕಾರಿಗಳು ಮಾತ್ರ ಏನೂ ಗೊತ್ತಿಲ್ಲದಂತೆ ಕಣ್ಮುಚ್ಚಿ ಕುಳಿತಿದ್ದಾರೆ.‌ ಹೌದು, ರಾಜಧಾನಿಯಲ್ಲಿ ಒಂದು ವರ್ಷದ ಹಿಂದೆ ಪ್ಲಾಸ್ಟಿಕ್ ಬ್ಯಾನ್ ಆಗಿತ್ತು. ಇನ್ನು ಸಿಂಗಲ್ ಯೂಸ್ ಪ್ಲಾಸ್ಟಿಕ್​ಗಳನ್ನ ಬಳಕೆ ಮಾಡಿದರೆ ಫೈನ್ ಹಾಕುವುದಾಗಿ ಅಧಿಕಾರಿಗಳು ಹೇಳಿದ್ದರು.‌ ಇನ್ನು ಸಣ್ಣ-ಪುಟ್ಟ ವ್ಯಾಪಾರಸ್ಥರು ಪ್ಲಾಸ್ಟಿಕ್ ಬಳಸಿದ್ರೆ ಪೌರುಷ ತೋರಿಸುವ ಅಧಿಕಾರಿಗಳು ರಾಜಾರೋಷವಾಗಿ ಕಾರ್ಖಾನೆಗಳಲ್ಲಿ ಪ್ಲಾಸ್ಟಿಕ್ ತಯಾರಾಗುತ್ತಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಹೀಗಾಗಿ ಯಲಚೇನಹಳ್ಳಿಯ ನಾಯ್ಡು ಲೇಔಟ್ ನಲ್ಲಿ ಪ್ಲಾಸ್ಟಿಕ್ ತಯಾರಿ ಮಾಡಿ, ತಮಗಿಷ್ಟದ ಬೆಲೆ ಮಾರಾಟ ಮಾಡ್ತಿದ್ದಾರೆ.

ಈ ಸಿಂಗಲ್ ಯೂಸ್ ಪ್ಲಾಸ್ಟಿಕ್ ತಯಾರು ಮಾಡ್ಬೇಕು ಅಂತ ಹೇಳಿದ್ರೆ ಪರಿಸರ ನಿಯಂತ್ರಣ ಮಂಡಳಿಯಿಂದ ಒಪ್ಪಿಗೆ ಪಡಿಯಬೇಕು. ಆದರೆ ಈ ಪ್ಲಾಸ್ಟಿಕ್ ತಯಾರಿಕಾ ಘಟಕದ ಮಾಲೀಕರು ಯಾವುದೇ ಅನುಮತಿ ಪಡೆಯದೇ ಯಾರಿಸುವುದಲ್ಲದೇ, ಎಲ್ಲರೂ ತಾಯಾರಿ ಮಾಡ್ತಿದ್ದಾರೆ. ಇನ್ನು, ಈ ಕುರಿತಾಗಿ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿದ್ದಂತೆ ಸ್ಥಳ ವೀಕ್ಷಣೆ ಮಾಡಿ ಸ್ಥಳೀಯ ಎಇ ದೂರು ದಾಖಾಲಿಸಿಕೊಂಡಿದ್ದಾರೆ. ಜೊತೆಗೆ ಪ್ಲಾಸ್ಟಿಕ್ ತಯಾರಿಕಾ ಘಟಕದ ಬೆಸ್ಕಾಂ ಪವರ್ ಲೈನ್ ಕಟ್ ಮಾಡುವುದಾಗಿ ಹೇಳಿದ್ದಾರೆ. ಒಟ್ನಲ್ಲಿ, ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಎನ್ನುವ ಮಾಲಿನ್ಯ ನಿಯಂತ್ರಣ ಮಂಡಳಿ ಪ್ಲಾಸ್ಟಿಕ್ ತಯಾರಿಕಾ ಘಟಕಗಳ‌ ಮೇಲೆ ನಿರ್ಧಾಕ್ಷಿಣ್ಯ ಕ್ರಮ ಜರುಗಿಸದೇ ಇರುವುದುದೇ ಸಧ್ಯ ಪ್ಲಾಸ್ಟಿಕ್ ತಯಾರಿಕೆಗೆ ಕಾರಣವಾಗುತ್ತಿದ್ದು, ಕಾರ್ಖಾನೆಗಳ ಮೇಲೆ ಮಾಲಿನ್ಯ ನಿಯಂತ್ರಣ ಮಂಡಳಿ ಹದ್ದಿನ ಕಣ್ಣಿಡಬೇಕಿದೆ.‌

(ಅಂತರ್ಜಾಲ ಮಾಹಿತಿ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

20 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago