ಪ್ಲಾಸ್ಟಿಕ್ #Plastic ಎಂಬ ಪೆಡಂಭೂತ ಇಡೀ ವಿಶ್ವವನ್ನೇ ತಿಂದು ಹಾಕುತಿದೆ. ಈ ಸಮಸ್ಯೆಯಿಂದ ಹೊರ ಬರಲು ಅನೇಕ ದೇಶಗಳು ಹೆಣಗಾಡುತ್ತಿವೆ. ಅನೇಕ ಕ್ರಮಗಳನ್ನು ಸರ್ಕಾರ, ಸಂಘಸಂಸ್ಥೆಗಳು, ಎನ್ಜಿಓಗಳು ತೆಗೆದುಕೊಳ್ಳುತ್ತಲೇ ಇದೆ. ಆದರೆ ಪ್ಲಾಸ್ಟಿಕ್ ಹಾವಳಿ ಎಗ್ಗಿಲ್ಲದೆ ನಡೆಯುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿಯಲ್ಲಿ ಏಕ ಬಳಕೆ ಫ್ಲಾಸ್ಟಿಕ್ಗಳನ್ನು ಬ್ಯಾನ್ ಮಾಡಿ ಒಂದು ವರ್ಷವೇ ಕಳೆದಿದೆ. ಆದರೆ ಬೆಂಗಳೂರಿನಲ್ಲಿ ಮಾತ್ರ ಪ್ಲಾಸ್ಟಿಕ್ ಇನ್ನೂ ಓಡಾಡುತ್ತಿದೆ…!
ಈ ಬ್ಯಾನ್ ಕೇವಲ ಹೆಸರಿಗೆ ಮಾತ್ರ ಎನ್ನುವಂತೆ ಕಾಣುತ್ತಿದೆ. ಯಾಕೆಂದರೆ ರಾಜಧಾನಿಯಲ್ಲಿ ಯಾವುದೇ ಅಧಿಕಾರಿಗಳ ಭಯವಿಲ್ಲದೇ ಕಾರ್ಖಾನೆಗಳಲ್ಲಿ ಫ್ಲಾಸ್ಟಿಕ್ ತಯಾರಾಗುತ್ತಿದ್ದು, ಅಧಿಕಾರಿಗಳು ಮಾತ್ರ ಏನೂ ಗೊತ್ತಿಲ್ಲದಂತೆ ಕಣ್ಮುಚ್ಚಿ ಕುಳಿತಿದ್ದಾರೆ. ಹೌದು, ರಾಜಧಾನಿಯಲ್ಲಿ ಒಂದು ವರ್ಷದ ಹಿಂದೆ ಪ್ಲಾಸ್ಟಿಕ್ ಬ್ಯಾನ್ ಆಗಿತ್ತು. ಇನ್ನು ಸಿಂಗಲ್ ಯೂಸ್ ಪ್ಲಾಸ್ಟಿಕ್ಗಳನ್ನ ಬಳಕೆ ಮಾಡಿದರೆ ಫೈನ್ ಹಾಕುವುದಾಗಿ ಅಧಿಕಾರಿಗಳು ಹೇಳಿದ್ದರು. ಇನ್ನು ಸಣ್ಣ-ಪುಟ್ಟ ವ್ಯಾಪಾರಸ್ಥರು ಪ್ಲಾಸ್ಟಿಕ್ ಬಳಸಿದ್ರೆ ಪೌರುಷ ತೋರಿಸುವ ಅಧಿಕಾರಿಗಳು ರಾಜಾರೋಷವಾಗಿ ಕಾರ್ಖಾನೆಗಳಲ್ಲಿ ಪ್ಲಾಸ್ಟಿಕ್ ತಯಾರಾಗುತ್ತಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಹೀಗಾಗಿ ಯಲಚೇನಹಳ್ಳಿಯ ನಾಯ್ಡು ಲೇಔಟ್ ನಲ್ಲಿ ಪ್ಲಾಸ್ಟಿಕ್ ತಯಾರಿ ಮಾಡಿ, ತಮಗಿಷ್ಟದ ಬೆಲೆ ಮಾರಾಟ ಮಾಡ್ತಿದ್ದಾರೆ.
ಈ ಸಿಂಗಲ್ ಯೂಸ್ ಪ್ಲಾಸ್ಟಿಕ್ ತಯಾರು ಮಾಡ್ಬೇಕು ಅಂತ ಹೇಳಿದ್ರೆ ಪರಿಸರ ನಿಯಂತ್ರಣ ಮಂಡಳಿಯಿಂದ ಒಪ್ಪಿಗೆ ಪಡಿಯಬೇಕು. ಆದರೆ ಈ ಪ್ಲಾಸ್ಟಿಕ್ ತಯಾರಿಕಾ ಘಟಕದ ಮಾಲೀಕರು ಯಾವುದೇ ಅನುಮತಿ ಪಡೆಯದೇ ಯಾರಿಸುವುದಲ್ಲದೇ, ಎಲ್ಲರೂ ತಾಯಾರಿ ಮಾಡ್ತಿದ್ದಾರೆ. ಇನ್ನು, ಈ ಕುರಿತಾಗಿ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿದ್ದಂತೆ ಸ್ಥಳ ವೀಕ್ಷಣೆ ಮಾಡಿ ಸ್ಥಳೀಯ ಎಇ ದೂರು ದಾಖಾಲಿಸಿಕೊಂಡಿದ್ದಾರೆ. ಜೊತೆಗೆ ಪ್ಲಾಸ್ಟಿಕ್ ತಯಾರಿಕಾ ಘಟಕದ ಬೆಸ್ಕಾಂ ಪವರ್ ಲೈನ್ ಕಟ್ ಮಾಡುವುದಾಗಿ ಹೇಳಿದ್ದಾರೆ. ಒಟ್ನಲ್ಲಿ, ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಎನ್ನುವ ಮಾಲಿನ್ಯ ನಿಯಂತ್ರಣ ಮಂಡಳಿ ಪ್ಲಾಸ್ಟಿಕ್ ತಯಾರಿಕಾ ಘಟಕಗಳ ಮೇಲೆ ನಿರ್ಧಾಕ್ಷಿಣ್ಯ ಕ್ರಮ ಜರುಗಿಸದೇ ಇರುವುದುದೇ ಸಧ್ಯ ಪ್ಲಾಸ್ಟಿಕ್ ತಯಾರಿಕೆಗೆ ಕಾರಣವಾಗುತ್ತಿದ್ದು, ಕಾರ್ಖಾನೆಗಳ ಮೇಲೆ ಮಾಲಿನ್ಯ ನಿಯಂತ್ರಣ ಮಂಡಳಿ ಹದ್ದಿನ ಕಣ್ಣಿಡಬೇಕಿದೆ.
(ಅಂತರ್ಜಾಲ ಮಾಹಿತಿ)
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…